ಭದ್ರಾವತಿ ಹಳೇನಗರದ ಸಂತೆ ಮೈದಾನದಲ್ಲಿರುವ ನಗರಸಭೆಗೆ ಯಾವುದೇ ರೀತಿ ಆದಾಯವಿಲ್ಲದ ಸುಮಾರು ೭-೮ ಮಳಿಗೆಗಳನ್ನು ಸೋಮವಾರ ನಗರಸಭೆ ಪೌರಾಯುಕ್ತ ಮನು ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು.
ಭದ್ರಾವತಿ: ಹಳೇನಗರದ ಸಂತೆ ಮೈದಾನದಲ್ಲಿರುವ ನಗರಸಭೆಗೆ ಯಾವುದೇ ರೀತಿ ಆದಾಯವಿಲ್ಲದ ಸುಮಾರು ೭-೮ ಮಳಿಗೆಗಳನ್ನು ಸೋಮವಾರ ನಗರಸಭೆ ಪೌರಾಯುಕ್ತ ಮನು ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು.
ಹಲವಾರು ವರ್ಷಗಳಿಂದ ನಗರಸಭೆಗೆ ಯಾವುದೇ ಕಂದಾಯ ಪಾವತಿ ಮಾಡದೆ ಅಕ್ರಮವಾಗಿ ಮಳಿಗೆಗಳನ್ನು ನಿರ್ಮಿಸಿಕೊಂಡು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಜೆಸಿಬಿ ಯಂತ್ರದ ಮೂಲಕ ಸುಮಾರು ೨ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು.
ತೆರವುಗೊಂಡ ಸ್ಥಳದಲ್ಲಿ ಪ್ಲಾಟ್ ಫಾರಂ ನಿರ್ಮಿಸಿ ಸಂತೆ ಮೈದಾನದಲ್ಲಿ ರಸ್ತೆ ಪಕ್ಕದಲ್ಲಿ ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ನಗರಸಭೆ ಅಧಿಕಾರಿಗಳು ಪತ್ರಿಕೆಗೆ ಮಾಹಿತಿ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಕಿರಿಯ ಆರೋಗ್ಯ ಸಹಾಯಕಿ ಶೃತಿ, ಪ್ರಭಾರ ಸಹಾಯಕ ಕಾರ್ಯಪಾಲಕ ಇಂಜಿಯರ್ ಪ್ರಸಾದ್, ಇಂಜಿನಿಯರ್ ಸಂತೋಷ್ ಪಾಟೀಲ್, ಪ್ರಭಾಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದರು.