![](https://blogger.googleusercontent.com/img/a/AVvXsEhk-bfQ7U80XF1aLhbTbwbtnAuFI73EUry8LDKtezahvzHOW4EEEOUjZwLpSZd8y_tJDrx1EfmGWDujLFFKae1J7lRX_9sVUNOIdh4Iu9rZgusFQV1OeriuXM5cRW1EJp2k2rqdJ5FpYQj-gu0hnmvjXv4CkFvQuhSy76Ns3fZrZCtAv-fsNtaapg8NuA=w400-h165-rw)
ಭದ್ರಾವತಿ, ಅ. ೨೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಳೇನಗರ ವಲಯ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಆರಕ್ಷಕ ಠಾಣೆ, ಪತ್ರಕರ್ತರ ಸಂಘ ಹಾಗು ನವಜೀವನ ಸಮಿತಿ ಮತ್ತು ಇನ್ನಿತರ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಲೋಯರ್ ಹುತ್ತಾ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಸುಮಾರು ಒಂದು ವಾರ ಕಾಲ ಹಮ್ಮಿಕೊಳ್ಳಲಾಗಿದ್ದ ೧೬೦೪ನೇ ಮದ್ಯವರ್ಜನ ಶಿಬಿರ ಶುಕ್ರವಾರ ಮುಕ್ತಾಯಗೊಂಡಿತು.
ಸುಮಾರು ೫೭ ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ ಪ್ರತಿ ದಿನ ನವಜೀವನ ಸಮಿತಿ ಸದಸ್ಯರ ಅನಿಸಿಕೆ, ಗುಂಪು ಸಲಹೆ, ಕೌಟುಂಬಿಕ ಸಲಹೆ, ಮಾಹಿತಿ ಮಾಗದರ್ಶನ, ಸಾಂಸ್ಕೃತಿಕ ಹಾಗು ಭಜನಾ ಕಾರ್ಯಕ್ರಮಗಳು, ಧ್ಯಾನ, ಯೋಗ, ಆರೋಗ್ಯ ತಪಾಸಣೆ ಸೇರಿಂದತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು. ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಶಿಬಿರದ ಆಯೋಜಕರಿಗೆ ಹಾಗು ಶಿಬಿರ ಯಶಸ್ವಿಗೊಳ್ಳಲು ಕಾರಣಕರ್ತರಾದವರಿಗೆ ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಅನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಪೌರಾಯುಕ್ತ ಮನುಕುಮಾರ್, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಕೆ.ಎನ್ ಭೈರಪ್ಪಗೌಡ, ಅಧ್ಯಕ್ಷ ಆರ್. ಕರುಣಾಮೂರ್ತಿ, ನ್ಯಾಯವಾದಿ ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಪಾಲಾಕ್ಷಪ್ಪ ಮತ್ತು ಜಯರಾಂ ಗೊಂದಿ, ಕಾವೇರಮ್ಮ ಹಾಗು ಶಿಬಿರಾಧಿಕಾರಿಗಳು, ಮೇಲ್ವಿಚಾರಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಗರಸಭೆ ಮಾಜಿ ಉಪಾಧ್ಯಕ್ಷೆ ಮಹಾದೇವಿ ಸಂಗಡಿಗರು ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಯೋಜನಾಧಿಕಾರಿ ವೈ. ಪ್ರಕಾಶ್ ನಾಯ್ಕ ಸ್ವಾಗತಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಭದ್ರಾವತಿ ಲೋಯರ್ ಹುತ್ತಾ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಸುಮಾರು ಒಂದು ವಾರ ಕಾಲ ಹಮ್ಮಿಕೊಳ್ಳಲಾಗಿದ್ದ ೧೬೦೪ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಶುಕ್ರವಾರ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.