ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಭದ್ರಾವತಿ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ, ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಹಾಗು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ನ. ೨೨: ಪೋಷಕರು ತಮ್ಮ ಮಕ್ಕಳು ಕಲೆ, ಸಾಹಿತ್ಯ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ದುಶ್ಚಟಗಳಿಂದ ದೂರವಿರುವಂತೆ ಎಚ್ಚರವಹಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಮಂಗಳವಾರ ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ, ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಹಾಗು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಹ ತೊಡಗಿಸಿಕೊಂಡು ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರು ಸಹ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಬೇಕೆಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಮಾತನಾಡಿ, ಮಕ್ಕಳ ಮುಂದಿನ ಭವಿಷ್ಯದ ಬೆಳವಣಿಗೆಯಲ್ಲಿ ಆಂಗ್ಲ ಭಾಷೆ ಹೆಚ್ಚಿನ ಪ್ರಾಮುಖ್ಯತೆ ವಹಿಸಲಿದೆ ಎಂಬ ಭಾವನೆಯಲ್ಲಿ ಕನ್ನಡ ಭಾಷೆ ಕಲಿಕೆಯಿಂದ ದೂರ ಉಳಿಯುವುದು ಸರಿಯಲ್ಲ. ಎಲ್ಲಾ ಭಾಷೆ ಮೇಲೆ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಮೇಲಿನ ಅಭಿಮಾನ ಬೆಳೆಸಿಕೊಳ್ಳುವುದು ಪ್ರಸ್ತುತ ಅನಿವಾರ್ಯವಾಗಿದೆ. ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳು ಕಡ್ಡಾಯವಾಗಿ ೫ನೇ ತರಗತಿವರೆಗೆ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವಂತೆ ಸೂಚಿಸಲಾಗಿದೆ. ಅಲ್ಲದೆ ಭಾಷಾ ತಜ್ಞರು ಸಹ ಮಾತೃಭಾಷೆ ಶಿಕ್ಷಣ ಕಲಿಕೆ ಕುರಿತು ಸಲಹೆ ನೀಡಿದ್ದಾರೆ. ಮಾತೃಭಾಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಇತರರಿಗೆ ಪ್ರೇರಣೆಯಾಗಿದೆ ಎಂದರು.
ಸಮಾಜ ಸೇವಕ ಸ್ನೇಹಜೀವಿ ಉಮೇಶ್ ಮಾತನಾಡಿ, ಅತಿಹೆಚ್ಚು ಅಂಕಪಡೆದ ಮಕ್ಕಳನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯವಾಗಿದೆ. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆ ಕಾಯಿಯಂತೆ ಸಾಧನೆ ಮಾಡಿರುವ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿರುವುದು ಭವಿಷ್ಯದಲ್ಲಿ ಮಕ್ಕಳು ಕಲೆ, ಸಾಹಿತ್ಯ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಿದೆ ಎಂದರು.
ಅಪೇಕ್ಷ ನೃತ್ಯ ಕಲಾ ವೃಂದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಡಿ.ಎಸ್ ಶಿವಪ್ರಕಾಶ್, ಉದ್ಯಮಿಗಳಾದ ಸುಧಾಕರ ಶೆಟ್ಟಿ, ಬಿ.ಕೆ ಜಗನ್ನಾಥ ಮತ್ತು ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪರವರಿಗೆ ಶಿಕ್ಷಣ ಸಂಜೀವಿನಿ ರಾಜ್ಯ ಪ್ರಶಸ್ತಿ, ಸರ್ಕಾರಿ ಆಸ್ಪತ್ರೆ ಹಿರಿಯ ವೈದ್ಯ ಡಾ. ಎಚ್.ಆರ್ ವೀರಭದ್ರಪ್ಪರವರಿಗೆ ವೈದ್ಯಕೀಯ ರತ್ನ ರಾಜ್ಯ ಪ್ರಶಸ್ತಿ, ಅಂತರಾಷ್ಟ್ರೀಯ ಯೋಗಪಟು ಎನ್.ಪಿ ವೆಂಕಟೇಶ್ರವರಿಗೆ ಯೋಗ ಸಾಮ್ರಾಟ್ ರಾಜ್ಯ ಪ್ರಶಸ್ತಿ, ಬೆಂಗಳೂರಿನ ಸಂಗೀತ ಶಿಕ್ಷಕಿ ವಿದೂಷಿ ಎಸ್.ಎ ಛಾಯಾರವರಿಗೆ ಸಂಗೀತ ರತ್ನ ರಾಜ್ಯ ಪ್ರಶಸ್ತಿ, ಪೊಲೀಸ್ ನಿರೀಕ್ಷಕ ಬಿ. ಮಹಮದ್ ಸಲೀಂರವರಿಗೆ ಆರಕ್ಷಕ ರತ್ನ ರಾಜ್ಯ ಪ್ರಶಸ್ತಿ, ಹಿರಿಯ ಗಾಯಕ ಶ್ರೀವತ್ಸರಿಗೆ ಜಯಶೀಲನ್ ರಾಜ್ಯ ಪ್ರಶಸ್ತಿ, ಹುಬ್ಬಳ್ಳಿ ಜಾನಪದ ಕಲಾವಿದ ಮುತ್ತಪ್ಪ ಯಮನಪ್ಪ ಭೂತಪ್ಪಗೋಳ ಹಾಗು ಶಿವಮೊಗ್ಗ ನಿವೃತ್ತ ಶಿಕ್ಷಕ, ಜಾನಪದ ಕಲಾವಿದ ನಿಸಾರ್ ಖಾನ್ ಕೆಂಚಾಯಿಕೊಪ್ಪರಿಗೆ ಜಾನಪದ ರತ್ನ ರಾಜ್ಯ ಪ್ರಶಸ್ತಿ, ಸುರಕ್ಷಾ ವೃದ್ಧಾಶ್ರಮ ಹಾಗು ಸುರಕ್ಷಾ ಅನಾಥಶ್ರಮ ಅಧ್ಯಕ್ಷೆ ಜ್ಯೋತಿ ಸೋಮಶೇಖರ್, ಬೆಂಗಳೂರಿನ ಸಮಾಜ ಸೇವಕ ದಾಮೋದರ ರೆಡ್ಡಿ, ಸರ್ಕಾರಿ ಆಸ್ಪತ್ರೆ ನಿವೃತ್ತ ನೌಕರ ಗೋವಿಂದಪ್ಪ ಮತ್ತು ಎನ್ಆರ್ ಪುರದ ಅಭಿನವ ಪ್ರತಿಭಾ ವೇದಿಕೆ ಮುಖ್ಯಸ್ಥ ಅಭಿನವ ಗಿರಿರಾಜ್ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಹಾಗು ವೈ.ಎಂ ಧರ್ಮಪ್ಪ, ಆರ್. ಅನಿತ, ಬಿ.ಎಚ್ ನಿರಂಜನಮೂರ್ತಿ, ಜಿ.ಎಚ್ ಪ್ರಭು, ಡಾ. ಎನ್. ತ್ರಿವೇಣಿ, ಎಸ್.ಎನ್ ಸಿದ್ದಯ್ಯ ಮತ್ತು ಸಿ ಶೇಖರಪ್ಪರವರಿಗೆ ಶಿಕ್ಷಣ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನೃತ್ಯ ಕಲಾವಿದ, ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಿ. ಚನ್ನಪ್ಪ ಸ್ವಾಗತಿಸಿ, ಅರಳೇಹಳ್ಳಿ ಅಣ್ಣಪ್ಪ ನಿರೂಪಿಸಿದರು. ಜಾನಪದ ಕಲಾವಿದ, ಶಿಕ್ಷಕ ರೇವಣಪ್ಪ ಸಂಗಡಿಗರು ಪ್ರಾರ್ಥಿಸಿದರು.
ಶಿಕ್ಷಕರಾದ ಯು. ಮಹಾದೇವಪ್ಪ, ಕೋಕಿಲ, ವೈ.ಕೆ ಹನುಮಂತಯ್ಯ, ಕವಿತಾರಾವ್, ಎಲ್. ದೇವರಾಜ್, ಸುಧಾಮಣಿ, ಕವಿತಾ ಸೇರಿದಂತೆ ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಭದ್ರಾವತಿ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ, ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಹಾಗು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ , ಸುರಕ್ಷಾ ವೃದ್ಧಾಶ್ರಮ ಹಾಗು ಸುರಕ್ಷಾ ಅನಾಥಶ್ರಮ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ದಂಪತಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.