Wednesday, December 7, 2022

ವಿವಿಧ ಸಂಘಟನೆಗಳಿಂದ ಅಂಬೇಡ್ಕರ್ ಪರಿನಿರ್ವಾಣ ದಿನ

ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಭದ್ರಾವತಿಯಲ್ಲಿ ನಗರಸಭೆ ವತಿಯಿಂದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
    ಭದ್ರಾವತಿ, ಡಿ. ೭: ನಗರದ ವಿವಿಧ ಸಂಘಟನೆಗಳಿಂದ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಲಾಯಿತು. ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
    ನಗರಸಭೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಮಾಲಾರ್ಪಣೆ ಮಾಡಿದರು. ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಲತಾ ಚಂದ್ರಶೇಖರ್, ಟಿಪ್ಪು ಸುಲ್ತಾನ್, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಪೌರ ಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
    ಛಲವಾದಿ ಸಮಾಜದಿಂದ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್, ಪ್ರಮುಖರಾದ ಜಯರಾಜ್, ಗೋಪಾಲ್, ಮಹೇಶ್, ಜಗದೀಶ್, ಛಲವಾದಿ ಕೃಷ್ಣ, ಇ.ಪಿ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತ ಸಂಘಟನೆಗಳು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪರಿನಿರ್ವಾಣ ದಿನ ಆಚರಿಸಿದವು.


ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಭದ್ರಾವತಿಯಲ್ಲಿ ಛಲವಾದಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಿಂದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 

ಅಂಬೇಡ್ಕರ್ ವಿಶ್ವದ ಮಹಾನ್ ವ್ಯಕ್ತಿ, ಜ್ಞಾನದ ಸಂಕೇತ : ಸತ್ಯ ಭದ್ರಾವತಿ

ಭದ್ರಾವತಿ ರಂಗಪ್ಪವೃತ್ತ, ಜೈಭೀಮ ನಗರದಲ್ಲಿರುವ ಸಮಿತಿ ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್‌ರವರ ಪರಿನಿರ್ವಾಣ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ  ಸತ್ಯ ಭದ್ರಾವತಿ ನೇತೃತ್ವವಹಿಸಿ ಮಾತನಾಡಿದರು.
    ಭದ್ರಾವತಿ, ಡಿ. ೭: ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರು ಪ್ರಪಂಚದ ಎಲ್ಲಾ ದೇಶಗಳು ಗೌರವಿಸುವ ಮಹಾನ್ ವ್ಯಕ್ತಿಯಾಗಿದ್ದಾರೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ  ಸತ್ಯ ಭದ್ರಾವತಿ ಬಣ್ಣಿಸಿದರು.
    ಅವರು ನಗರದ ರಂಗಪ್ಪವೃತ್ತ, ಜೈಭೀಮ ನಗರದಲ್ಲಿರುವ ಸಮಿತಿ ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್‌ರವರ ಪರಿನಿರ್ವಾಣ ದಿನಾಚರಣೆ ನೇತೃತ್ವವಹಿಸಿ ಮಾತನಾಡಿದರು..
ಅಸ್ಪೃಶ್ಯ ಜಾತಿಯಲ್ಲಿ ಹುಟ್ಟಿಬೆಳೆದ ಅಂಬೇಡ್ಕರ್‌ರವರು ಸಮಾಜದ ಎಲ್ಲಾ ಸಂಕಷ್ಟಗಳನ್ನು ಕಂಡಿದ್ದು, ನೋವು, ಅಪಮಾನಗಳನ್ನು ಅನುಭವಿಸಿ ಉನ್ನತ ಸ್ಥಾನಕ್ಕೆ ಏರಿದವರು. ಈ ಹಿನ್ನಲೆಯಲ್ಲಿ ಅವರು ದೇಶದಲ್ಲಿನ ಎಲ್ಲಾ ಧರ್ಮ, ಎಲ್ಲಾ ಜಾತಿ-ಜನಾಂಗದವರಿಗೆ ಅನ್ವಯವಾಗುವ, ಸರ್ವ ಸಮಾನತೆಯಿಂದ ಕೂಡಿರುವ ಶ್ರೇಷ್ಠ ಸಂವಿಧಾನವನ್ನು ರಚಿಸುವ ಮೂಲಕ ಎಲ್ಲರೂ ಸೌಹಾರ್ದತೆಯಿಂದ ಬದುಕಲು ಕಾರಣಕರ್ತರಾಗಿದ್ದಾರೆ ಎಂದರು.
    ದೇಶದ ಪ್ರತಿಯೊಬ್ಬರೂ ಸಹ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಅಂಬೇಡ್ಕರ್‌ರವರು ಜ್ಞಾನದ ಸಂಕೇತವಾಗಿ ಪ್ರಜ್ವಲಿಸುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಪಂಚದ ಎಲ್ಲಾ ದೇಶಗಳು ಸಹ ಅಂಬೇಡ್ಕರ್‌ರವರನ್ನು ಗೌರವಿಸುತ್ತಿವೆ. ಇಂತಹ ಮಹಾನ್ ವ್ಯಕ್ತಿಯ ದಾರಿಯಲ್ಲಿ ನಾವುಗಳು ಸಹ ಸಾಗುವಂತಾಗಬೇಕೆಂದರು.
    ತಾಲೂಕು ಸಂಚಾಲಕ ಕೆ. ರಂಗನಾಥ್, ಪ್ರಮುಖರಾದ ಶಾಂತಮ್ಮ, ಎನ್. ಗೋವಿಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದತ್ತ ಜಯಂತಿ : ವಿಜೃಂಭಣೆಯಿಂದ ಜರುಗಿದ ಉತ್ಸವ ಮೆರವಣಿಗೆ

ಭದ್ರಾವತಿ ನ್ಯೂಟೌನ್ ದತ್ತ ಮಂದಿರದಲ್ಲಿ ಬುಧವಾರ ದತ್ತ ಜಯಂತಿ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಉತ್ಸವ ಮೆರವಣಿಗೆ ನಡೆಸಲಾಯಿತು.
ಭದ್ರಾವತಿ, ಡಿ. ೭: ನಗರದ ನ್ಯೂಟೌನ್ ದತ್ತ ಮಂದಿರದಲ್ಲಿ ಬುಧವಾರ ದತ್ತ ಜಯಂತಿ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಉತ್ಸವ ಮೆರವಣಿಗೆ ನಡೆಸಲಾಯಿತು.
      ದತ್ತ ಜಯಂತಿ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ದತ್ತಾತ್ರೇಯ ಸ್ವಾಮಿ ಭಾವಚಿತ್ರದೊಂದಿಗೆ ಉತ್ಸವ ಮೆರವಣಿಗೆ ನಡೆಸಲಾಯಿತು.  ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
      ವಿವಿಧ ಭಜನಾ ಮಂಡಳಿ ಸದಸ್ಯರು, ತಾಲೂಕು ಬ್ರಾಹ್ಮಣ ಮಹಾಸಭಾ ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.



ಕೆರೆಗಳ ಒತ್ತುವರಿ ತೆರವು, ಬೌಂಡರಿ ನಿಗದಿ ಕಾರ್ಯ ವಿಳಂಬ : ಪ್ರತಿಭಟನೆ

ಸೂಕ್ತ ಕ್ರಮ ಕೈಗೊಳ್ಳಲು ತಹಸೀಲ್ದಾರ್‌ಗೆ ಮನವಿ

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೬: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
      ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳಿದ್ದು, ಈ ಹಿಂದೆ ಪೌರಾಯುಕ್ತರಾಗಿದ್ದ ಮನೋಹರ್‌ರವರ ಪರಿಶ್ರಮದ ಫಲವಾಗಿ ೭೦ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಆದೇಶವಾಗಿರುತ್ತದೆ. ೭೦ ಕೆರೆಗಳ ಪೈಕಿ ಈಗಾಗಲೇ ೨೫ ಕೆರೆಗಳ ಬೌಂಡರಿ ನಿಗದಿಪಡಿಸಲಾಗಿದ್ದು, ತುರ್ತಾಗಿ ಈ ಕೆರೆಗಳ ಒತ್ತುವರಿ ಕೈಗೊಂಡು ನಕ್ಷೆ ಸಮೇತ ನಗರಸಭೆಗೆ ಹಸ್ತಾಂತರ ಮಾಡುವುದು. ಉಳಿದ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಕ್ರಮ ಕೈಗೊಳ್ಳುವುದು.
      ಕಲ್ಲಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ೪ ಕೆರೆಗಳ ಬೌಂಡರಿ ಹಾಗು ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೪ ಕೆರೆಗಳ ಬೌಂಡರಿ ಈಗಾಗಲೇ ನಿಗದಿಪಡಿಸಲಾಗಿದೆ. ಈ ಕೆರೆಗಳ ಒತ್ತುವರಿ ಕೈಗೊಂಡು ನಕ್ಷೆ ಸಮೇತ ಸಂಬಂಧ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
      ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಅಭಿವೃದ್ಧಿ ಪಡಿಸುವ ಸಂಬಂಧ ಸರ್ಕಾರದಿಂದ ಇದುವರೆಗೂ ಯಾವುದೇ ಅನುದಾನ ಬಂದಿರುವುದಿಲ್ಲ. ಈ ಹಿನ್ನಲೆಯಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಕ್ಯಾಚ್ ದ ರೈನ್'(ಮಳೆ ನೀರು ಹಿಡಿಯಿರಿ) ಅನುಷ್ಠಾನಗೊಳ್ಳಲು ಕೆರೆಗಳ ಸಮೀಪವಿರುವ ರೈತರುಗಳಿಗೆ ಕೆರೆಗಳಲ್ಲಿರುವ ಊಳನ್ನು ತೆಗೆದು ಕೆರೆಗಳನ್ನು ಅಭಿವೃದ್ಧಿಪಡಿಸಲು ಷರತ್ತು ಬದ್ಧ ಅನುಮತಿ ನೀಡುವಂತೆ ಮನವಿ ಮಾಡಲಾಯಿತು.
      ವೇದಿಕೆ ಪ್ರಮುಖರಾದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮೂಡಲಗಿರಿ ಗೌಡ, ರುದ್ರೇಶ್, ಆನಂದ್, ದೇವಿಕಾ ನಾಗರಾಜ್, ಮಹಮದ್ ಸುಹೇಲ್, ಗವಿಸಿದ್ದಪ್ಪ, ಬಿ.ಡಿ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.



Tuesday, December 6, 2022

ಮತದಾನ ಕುರಿತು ಜಾಗೃತಿ ಜಾಥಾ

ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ಮಂಗಳವಾರ ಭದ್ರಾವತಿ ನಗರದಲ್ಲಿ ಜಾಥಾ ನಡೆಸಲಾಯಿತು.
    ಭದ್ರಾವತಿ, ಡಿ. ೬ : ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ಮಂಗಳವಾರ ನಗರದಲ್ಲಿ ಜಾಥಾ ನಡೆಸಲಾಯಿತು.
    ನಗರಸಭೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತ ದಿಂದ ಮಾಧವಚಾರ್ ವೃತ್ತದವರೆಗೆ ಆಯೋಜಿಸಲಾಗಿದ್ದ ಜಾಥಾದಲ್ಲಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಮತ್ತು ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜು ಸೇರಿದಂತೆ ಇನ್ನಿತರ ಕಾಲೇಜುಗಳ ವಿದ್ಯಾರ್ಥಿಗಳು, ತಾಲೂಕು ಕಛೇರಿ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಕಾಲೇಜುಗಳ ಅಧ್ಯಾಪಕರು ಹಾಗು ನಗರಸಭೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
    ೧೮ ವರ್ಷ ಪೂರೈಸಿರುವ ಪ್ರತಿಯೊಬ್ಬರು ಸಹ ಮತದಾನ ಹಕ್ಕು ಹೊಂದುವುದು, ಕಡ್ಡಾಯವಾಗಿ ಮತ ಚಲಾಯಿಸುವುದು ಸೇರಿದಂತೆ ಚುನಾವಣಾ ಸಂಬಂಧ ಅರಿವು ಮೂಡಿಸುವ ಜಾಗೃತಿ ಫಲಕಗಳನ್ನು ಹಿಡಿದು ಜಾಥಾ ನಡೆಸಲಾಯಿತು.
    ಚುನಾವಣಾ ಸಾಕ್ಷರತಾ ಸಂಘ ಜಿಲ್ಲಾ ಉಪ ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ರಂಗಪ್ಪ ವೃತ್ತದಲ್ಲಿ ಚುನಾವಣಾ ಮಾದರಿಗಳೊಂದಿಗೆ, ವಿಶಿಷ್ಟ ಆಟದೊಂದಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದರು.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ಕವಿತಾ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.      


ಚುನಾವಣಾ ಸಾಕ್ಷರತಾ ಸಂಘ ಜಿಲ್ಲಾ ಉಪ ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ಭದ್ರಾವತಿ ರಂಗಪ್ಪ ವೃತ್ತದಲ್ಲಿ ಚುನಾವಣಾ ಮಾದರಿಗಳೊಂದಿಗೆ, ವಿಶಿಷ್ಟ ಆಟದೊಂದಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದರು.

ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ದುಡಿಯುವ ವರ್ಗದ ಕಡೆಗಣನೆ


೯ನೇ ತಾಲೂಕು ಮಟ್ಟದ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಅಮ್ಜದ್ ವಿಷಾದ

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ  ಸಮಿತಿ(ಎಐಟಿಯುಸಿ) ತಾಲೂಕು ಘಟಕದ ವತಿಯಿಂದ ಮಂಗಳವಾರ ಭದ್ರಾವತಿ ಹಳೇನಗರದ  ವೀರಶೈವ ಸಭಾಭವನದಲ್ಲಿ  ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಮಟ್ಟದ ಸಮಾವೇಶವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಡಿ. ೬: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ  ಸಮಿತಿ(ಎಐಟಿಯುಸಿ) ತಾಲೂಕು ಘಟಕದ ವತಿಯಿಂದ ಮಂಗಳವಾರ ಹಳೇನಗರದ  ವೀರಶೈವ ಸಭಾಭವನದಲ್ಲಿ  ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಮಟ್ಟದ ಸಮಾವೇಶವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ನಂತರ ಅವರು ಕಾಮ್ರೇಡ್ ಎಚ್.ಕೆ ರಾಮಚಂದ್ರಪ್ಪ ಮತ್ತು ಎನ್ ಶಿವಣ್ಣನವರ ವೇದಿಕೆಯಲ್ಲಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವ ಜೊತೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
   ಫೆಡರೇಷನ್ ರಾಜ್ಯಾಧ್ಯಕ್ಷ ಕಾಮ್ರೇಡ್ ಅಮ್ಜದ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.  ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೂ ಸಹ ಅವರ ಬಹಳಷ್ಟು ಬೇಡಿಕೆಗಳನ್ನು ಈಡೇರಿಸುವಲ್ಲಿ  ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಮೀನಾಮೇಷ ಮಾಡುತ್ತಿವೆ.  ಹೋರಾಟದಿಂದ ಮಾತ್ರ ನಮ್ಮ  ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಈ ಹಿನ್ನೆಲೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ರೂಪರೇಷೆ ಸಿದ್ದಪಡಿಸಲು ಮತ್ತು ಕಾರ್ಯಕರ್ತರು ಹಾಗೂ ಸಹಾಯಕಿಯರು ತಮ್ಮ ಭಾವನೆಗಳನ್ನುಅಭಿವ್ಯಕ್ತಗೊಳಿಸಲು ಸಮ್ಮೇಳನ ಸಹಕಾರಿಯಾಗಿದೆ ಎಂದರು.
    ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಜಯಮ್ಮ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಮನುಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ಸುರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
  ಫೆಡರೇಷನ್ ತಾಲೂಕು ಅಧ್ಯಕ್ಷೆ ಸುಶೀಲಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ವೇದಾವತಿ ಸ್ವಾಗತಿಸಿದರು. ಫೆಡರೇಷನ್ ತಾಲೂಕು ಘಟಕದ ಪದಾಧಿಕಾರಿಗಳು ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆಯಾಗಿ ಪದೋನ್ನತಿಗೊಂಡ ಮೇಲ್ವಿಚಾರಕರು ಹಾಗು ನಿವೃತ್ತಿ ಹೊಂದುವವರೆಗೂ ಸಂಘಟನೆಯಲ್ಲಿ ತೊಡಗಿಸಿಕೊಂಡು ನಾಯಕತ್ವದೊಂದಿಗೆ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡವರನ್ನು ಸನ್ಮಾನಿಸಿ ಗೌರವಿಸಲಾಯಿತು.  

Monday, December 5, 2022

ವಿಜೃಂಭಣೆಯಿಂದ ಜರುಗಿದ ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ

ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹುತ್ತಾಕಾಲೋನಿಯಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಡಿ. ೫ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹುತ್ತಾಕಾಲೋನಿಯಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು.
    ರಥೋತ್ಸವ ಅಂಗವಾಗಿ ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ ಪ್ರಧಾನ ಹೋಮ ಮತ್ತು ರಥಶುದ್ದಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.  ಮಧ್ಯಾಹ್ನ ೧೨.೩೦ಕ್ಕೆ ದೇವಸ್ಥಾನದ ಮುಂಭಾಗ ಆರಂಭಗೊಂಡ ರಥೋತ್ಸವ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೂ ಸಾಗಿತು. ಉತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜೈಕಾರಗಳನ್ನು ಹಾಕಿದರು.  ಸಂಜೆ ರಥೋತ್ಸವ ಅಷ್ಟಾವದಾನಸೇವೆ, ಮಹಾಪೂಜೆ. ಮಹಾಮಂಗಳಾರತಿ ನೆರವೇರಿತು.
.    ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ.ದಾಸೇಗೌಡರವರು ಹಲವಾರು ವರ್ಷಗಳಿಂದ ಅನ್ನಸಂತರ್ಪಣೆ ಸೇವಾ ಕಾರ್ಯ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ಸಹ ಸೇವಾ ಕಾರ್ಯ ಮುಂದುವರೆಸುವ ಮೂಲಕ ಗಮನ ಸೆಳೆದರು.  ವಿಶ್ವೇಶ್ವರಾಯ ಆಟೋ ನಿಲ್ದಾಣದ ಚಾಲಕರು ಮಜ್ಜಿಗೆ ವಿತರಣೆ ಹಾಗು ವೀರಾಂಜನೇಯಸ್ವಾಮಿ ದೇವಸ್ಥಾನ ಸಮಿತಿವತಿಯಿಂದ ಪಾನಕ, ಕೋಸಂಬರಿ ವಿತರಣೆ ನಡೆಯಿತು.
    ಶಾಸಕ ಬಿ.ಕೆ.ಸಂಗಮೇಶ್ವರ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳ ಮುಖಂಡರು, ಹಾಗು ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.