Friday, April 28, 2023

ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಸ್ನೇಹಮಿಲನ, ಪಕ್ಷ ಸೇರ್ಪಡೆ

ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಪರವಾಗಿ ವ್ಯಾಪಕ ಪ್ರಚಾರ

ಭದ್ರಾವತಿಯಲ್ಲಿ ಕಾಂಗ್ರೆಸ್-ಜೆಡಿಎಸ್ ತೊರೆದು ಹಲವು ಮಂದಿ ಸಂಸದ ಬಿ.ವೈ ರಾಘವೇಂದ್ರ ಸಮ್ಮುಖದಲ್ಲಿ ಶುಕ್ರವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು
    ಭದ್ರಾವತಿ, ಏ. ೨೮: ಈ ಬಾರಿ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂಬ ಗುರಿಯೊಂದಿಗೆ ಭಾರತೀಯ ಜನತಾ ಪಕ್ಷ ವ್ಯಾಪಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶುಕ್ರವಾರ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ವಿವಿಧ ಸಮಾಜಗಳ ಸ್ನೇಹ ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮತ್ತೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
    ವೀರಶೈವ ಲಿಂಗಾಯತ, ಒಕ್ಕಲಿಗ, ಮಡಿವಾಳ, ದೇವಾಂಗ, ಮರಾಠ ಮತ್ತು ಭಾವಸಾರ ಸೇರಿದಂತೆ ವಿವಿಧ ಸಮುದಾಯಗಳ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಪಾಲ್ಗೊಂಡು ಆಯಾ ಸಮುದಾಯಗಳ ಮುಖಂಡರುಗಳ ಜೊತೆ ಚರ್ಚಿಸಿದರು. ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
    ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ :
    ಕಾಂಗ್ರೆಸ್-ಜೆಡಿಎಸ್ ತೊರೆದು ಹಲವು ಮಂದಿ ಬಿ.ವೈ ರಾಘವೇಂದ್ರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿನೋದ್, ಉಪಾಧ್ಯಕ್ಷ ನವೀನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ತಾಲೂಕು  ಪ್ರಧಾನ ಕಾರ್ಯದರ್ಶಿ ಗಣೇಶ್, ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜದ ಜಿಲ್ಲಾಧ್ಯಕ್ಷ ಕೆ. ಮೋಹನ್, ಮಂಜುನಾಥ ಸಾಮಿಲ್ ಬಾಬಣ್ಣ,    ವೆಂಕಟೇಶ್ವರ ಸಾಮಿಲ್, ಮರಾಠ ಸಮಾಜದ ಮುಖಂಡ ಗಣೇಶ್ ರಾವ್ ಹಾಗೂ ಜೆಡಿಎಸ್ ಪಕ್ಷ ತೊರೆದು ಹಿರಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಟಿ ಪ್ರಸನ್ನ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಾಲೇರ ಶೇಖರಪ್ಪ, ಬಿ. ರವಿ, ಮುರಳಿಧರ್, ಎಂಪಿಎಂ ಯೂನಿಯನ್ ಮಾಜಿ ಕಾರ್ಯದರ್ಶಿ ಬಿ. ಪ್ರಶಾಂತ್, ಅಶೋಕ್ ರಾವ್, ಬೀರಪ್ಪ, ಸಾರಿಕಾ, ಜ್ಯೋತಿ, ಸಂಗೀತ, ವೇದಮೂರ್ತಿ, ಎಚ್.ಬಿ ರಾಮಪ್ಪ, ಬಸವರಾಜ್ ತಾರಿಕಟ್ಟೆ, ಯದು, ಜಗದೀಶ್, ಜೈಶೀಲ, ಭೈರಪ್ಪ, ಸೇರಿದಂತೆ ಇನ್ನಿತರರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ  ಹಾಗು ಪಕ್ಷದ ತತ್ವ-ಸಿದ್ಧಾಂತ ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
    ಅಭ್ಯರ್ಥಿ ಮಂಗೋಟೆ ರುದ್ರೇಶ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಮುಖಂಡರಾದ ಉತ್ತರ ಕಾಂಡ್ ಜಿತೇಂದ್ರಸಿಂಗ್, ಸಿ. ಮಂಜುಳ, ಪವಿತ್ರ ರಾಮಯ್ಯ, ಜಿ. ಆನಂದಕುಮಾರ್, ವಾದಿರಾಜ್, ಚನ್ನೇಶ್, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ರಾಮಚಂದ್ರ, ಸಿದ್ದಲಿಂಗಯ್ಯ, ಮಂಜುನಾಥ್ ಕದಿರೇಶ್, ಕವಿತಾ ರಾವ್, ಬಿ.ಎಂ ಸಂತೋಷ್ ಮತ್ತು ಗೋಕುಲ ಕೃಷ್ಣ, ಬಿ.ಎಸ್ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಛಲವಾದಿ ಸಮಾಜ, ಮಹಾಸಭಾದಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಬೆಂಬಲ

ಯಾವುದೇ ಒಬ್ಬ ವ್ಯಕ್ತಿ ನಿರ್ಧಾರಕ್ಕೆ ಸಮುದಾಯದವರು ಬದ್ಧರಾಗಿಲ್ಲ : ಮುಖಂಡರ ಸ್ಪಷ್ಟನೆ

ಭದ್ರಾವತಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಛಲವಾದಿ ಸಮಾಜ ಹಾಗು ತಾಲೂಕು ಛಲವಾದಿ ಮಹಾಸಭಾ ಪ್ರಮುಖರು ಮಾತನಾಡಿದರು.
      ಭದ್ರಾವತಿ, ಏ. ೨೮: ಛಲವಾದಿ ಸಮಾಜದವರು ಯಾವುದೇ ಒಬ್ಬ ವ್ಯಕ್ತಿ ನಿರ್ಧಾರಕ್ಕೆ ಬದ್ಧರಾಗಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ಮೊದಲಿನಿಂದಲೂ ರಾಜಕೀಯವಾಗಿ ಸೂಕ್ತ ನಿರ್ಧಾರ ಕೈಗೊಂಡು ಸಮಾಜದ ಹಿತಕಾಪಾಡುವವರನ್ನು ಬೆಂಬಿಸಿಕೊಂಡು ಬರಲಾಗುತ್ತಿದೆ ಎಂದು ತಾಲೂಕು ಛಲವಾದಿ ಸಮಾಜ ಹಾಗು ತಾಲೂಕು ಛಲವಾದಿ ಮಹಾಸಭಾ ಪ್ರಮುಖರು ಹೇಳಿದರು. 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ರಾಜಕೀಯವಾಗಿ ಸಮಾಜದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ವೈಯಕ್ತಿಕವಾಗಿ ಯಾವುದೇ ಪಕ್ಷಕ್ಕೆ ಬೆಂಬಲ ನೀಡಲಿ. ಆದರೆ ಸಮಾಜದ ಹೆಸರಿನಲ್ಲಿ ಬೆಂಬಲ ನೀಡುವುದು ಬೇಡ ಎಂದರು. 
ಮೊದಲಿನಿಂದಲೂ ಸಮಾಜದ ಹಿತಕಾಪಾಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಬೆಂಬಲಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಛಲವಾದಿ ಸಮಾಜದ ಬೆಳವಣಿಗೆಗೆ ಹೆಚ್ಚಿನ ರೀತಿಯಲ್ಲಿ ಸಹಕರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಬೆಂಬಲಿಸಲು ಸಮಾಜ ನಿರ್ಧರಿಸಿದೆ. ಇದೆ ರೀತಿ ಛಲವಾದಿ ಮಹಾಸಭಾ ಸಹ ಸಂಗಮೇಶ್ವರ್‌ರವರನ್ನು ಬೆಂಬಲಿಸಲಿದೆ ಎಂದರು. 
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಪ್ರಮುಖರಾದ ಚನ್ನಪ್ಪ, ಜಯರಾಜ್, ಎಸ್.ಎಸ್ ಭೈರಪ್ಪ, ಅರುಣ್, ಡಿ. ನರಸಿಂಹಮೂರ್ತಿ, ಸರ್ವಮಂಗಳ, ಮಹೇಶ್, ಸೀನಪ್ಪ ನಂಜಾಪುರ, ಪುಟ್ಟರಾಜ್, ರಾಜು, ಅದಿತ್ಯಶಾಮ್, ಲಕ್ಷ್ಮಣಪ್ಪ, ಗೋಪಾಲ್, ಲೋಕೇಶ್, ಕೆಂಪರಾಜ್, ಎಚ್.ಎಂ ಮಹಾದೇವಯ್ಯ, ಲೋಕೇಶ್(ಕೆಪಿಟಿಸಿಎಲ್) ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


Thursday, April 27, 2023

ಬಿಜೆಪಿ ಅಭ್ಯರ್ಥಿಗೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ : ಎಸ್. ರುದ್ರೇಗೌಡ

ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಮಾತನಾಡಿದರು.
    ಭದ್ರಾವತಿ, ಏ. ೨೮: ಕೇಂದ್ರ ಹಾಗು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಈ ಬಾರಿ ಅಭ್ಯರ್ಥಿ ಗೆಲುವಿಗೆ ಸಹಯಾಗಲಿವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಕ್ಷೇತ್ರದಾದ್ಯಂತ ಮತದಾರರಿಂದ ಅಭ್ಯರ್ಥಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಚಾರ ಕಾರ್ಯದಲ್ಲೂ ವಿಭಿನ್ನವಾದ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ. ಅದರಂತೆ ಎಲ್ಲರೂ ಒಗ್ಗಟ್ಟಿನಿಂದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂದರು.
    ಅಭ್ಯರ್ಥಿ ಮಂಗೋಟೆ ರುದ್ರೇಶ್ ಮಾತನಾಡಿ, ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ನಿರ್ದೇಶನದಂತೆ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಚಾರ ಕಾರ್ಯ ಯಶಸ್ವಿಗೊಳಿಸುವ ನಿಟ್ಟಿನಲ್ಲೂ ಸಲಹೆ-ಸೂಚನೆಗಳನ್ನು ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುವುದು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಉತ್ತರ ಕಾಂಡ್ ಜಿತೇಂದ್ರಸಿಂಗ್, ಸಿ. ಮಂಜುಳ, ಪವಿತ್ರ ರಾಮಯ್ಯ, ಜಿ. ಆನಂದಕುಮಾರ್, ವಾದಿರಾಜ್, ಚನ್ನೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಂಗಾಂಗ ದಾನ ಮಾಡಿ ಮಗನ ಸಾವಿನ ದುಃಖದಲ್ಲೂ ಸಾರ್ಥಕತೆ ಮೆರೆದ ಪೋಷಕರು

    ಭದ್ರಾವತಿ, ಏ. ೨೭ : ಮಗನ ಸಾವಿನ ದುಃಖದಲ್ಲೂ ಕುಟುಂಬವೊಂದು ೭ ಜನರಿಗೆ ಆತನ ಅಂಗಾಂಗ ದಾನ ಮಾಡಿ ಮಾದರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
    ತಾಲೂಕಿನ ಕೆಂಚನಹಳ್ಳಿ ನೀರಗುಂಡಿ ಗ್ರಾಮದ ನಿವಾಸಿಯಾಗಿರುವ ಉಲ್ಲಾಸ್(೨೧) ಇತ್ತೀಚೆಗೆ ನಗರದ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ  ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು,  ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ಈತನ ಜೀವ ಉಳಿಸಲು ಶಕ್ತಿಮೀರಿ ಪ್ರಯತ್ನಿಸಿದ್ದು, ಕೊನೆ ಹಂತದಲ್ಲಿ ಈತನ ಮೆದುಳು ನಿಷ್ಕ್ರಿಯಗೊಂಡಿರುವುದು ತಿಳಿದು ಬಂದಿದೆ.
    ಅಧಿಕೃತವಾಗಿ ಪರಿಣಿತ ವೈದ್ಯರ ತಂಡ  ಮೆದುಳು ನಿಷ್ಕ್ರೀಯತೆ ಬಗ್ಗೆ ಈತನ ಪೋಷಕರು ಮಾಹಿತಿ ನೀಡಿದ್ದು, ತಕ್ಷಣ ಪೋಷಕರು ಮಗನ ಅಂಗಾಂಗ ದಾನ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಪೋಷಕರ ಇಚ್ಚೆಯಂತೆ ಏಳು ಮಂದಿಗೆ ಅಂಗಾಂಗ ದಾನ ಮಾಡಿದ್ದು, ಉಲ್ಲಾಸ್ ಇವರ ಬದುಕಿಗೆ ಬೆಳಕಾಗಿ ಸಾವಿನಲ್ಲೂ ಸಾರ್ಥಕತೆ ಕಂಡುಕೊಂಡಿದ್ದಾರೆ.
    ಉಲ್ಲಾಸ್ ಶ್ವಾಸಕೋಶ ಚೆನ್ನೈನ ಅಪೊಲೊ ಆಸ್ಪತ್ರೆಗೆ, ಯಕೃತ್ ಬೆಂಗಳೂರಿನ ಅಸ್ಟರ್ ಸಿಎಂಐ ಆಸ್ಪತ್ರೆಗೆ, ಒಂದು ಮೂತ್ರಪಿಂಡ ಎಜೆ ಆಸ್ಪತ್ರೆ ಮಂಗಳೂರು ಮತ್ತು ಎರಡು ಕಾರ್ನಿಯಾಗಳು ಹಾಗೂ ಇನ್ನೊಂದು ಮೂತ್ರಪಿಂಡ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಕಸಿಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. 
--

ವಿಧಾನಸಭಾ ಚುನಾವಣೆ : ಜೆಡಿಎಸ್ ಅಭ್ಯರ್ಥಿಯಿಂದ ಗ್ರಾಮಾಂತರ ಭಾಗದಲ್ಲಿ ಅಬ್ಬರದ ಪ್ರಚಾರ

ಹಣದ ಮುಂದೆ ಸ್ವಾಭಿಮಾನಕ್ಕೆ ಗೆಲುವಾಗಲಿ : ಶಾರದ ಅಪ್ಪಾಜಿ

ಭದ್ರಾವತಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಗ್ರಾಮಾಂತರ ಭಾಗದಲ್ಲಿ ಕಳೆದ ೩-೪ ದಿನಗಳಿಂದ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿಯವರನ್ನು ಬಹುತೇಕ ಗ್ರಾಮಗಳಲ್ಲಿ ಗ್ರಾಮಸ್ಥರು ಆರತಿ ಬೆಳಗುವ ಮೂಲಕ ಸ್ವಾಗತಿಸಿದರು.
    ಭದ್ರಾವತಿ, ಏ. ೨೭ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಳೆದ ೩-೪ ದಿನಗಳಿಂದ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ಕ್ಷೇತ್ರದ ಗ್ರಾಮಾಂತರ ಭಾಗದಲ್ಲಿ ಅದ್ದೂರಿಯಾಗಿ ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದು, ಬಹುತೇಕ ಗ್ರಾಮಗಳಲ್ಲಿ ಗ್ರಾಮಸ್ಥರು ಅವರಿಗೆ ಆರತಿ ಬೆಳಗುವ ಮೂಲಕ ಅದ್ದೂರಿ ಸ್ವಾಗತ ಕೋರುತ್ತಿರುವುದು ಕಂಡು ಬರುತ್ತಿದೆ.
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರು ಗ್ರಾಮಾಂತರ ಭಾಗದಲ್ಲಿ ಹೆಚ್ಚಿನ ಜನ ಬೆಂಬಲ ಹೊಂದುವ ಜೊತೆಗೆ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಇಂದಿಗೂ ಸ್ಮರಿಸಿಕೊಳ್ಳುವ ಜೊತೆಗೆ ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಶಾರದ ಅಪ್ಪಾಜಿಯವರಿಗೆ ಬೆಂಬಲ ನೀಡುವ ಭರವಸೆ ನೀಡುತ್ತಿದ್ದಾರೆ. ಪ್ರತಿಯಾಗಿ ಶಾರದ ಅಪ್ಪಾಜಿ ಗ್ರಾಮಸ್ಥರು ತೋರುತ್ತಿರುವ ಪ್ರೀತಿಗೆ ಚಿರಋಣಿ ವ್ಯಕ್ತಪಡಿಸುವ ಮೂಲಕ ಮತಯಾಚಿಸುತ್ತಿದ್ದಾರೆ.


ಭದ್ರಾವತಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಗ್ರಾಮಾಂತರ ಭಾಗದಲ್ಲಿ ಕಳೆದ ೩-೪ ದಿನಗಳಿಂದ  ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವುದು.
    ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೊಮ್ಮೇನಹಳ್ಳಿ, ಬೊಮ್ಮೇನಹಳ್ಳಿ ಹೊಸ ಬಡಾವಣೆ, ಕಾರೇಹಳ್ಳಿ, ಕೆಂಪೇಗೌಡನಗರ, ಬಾರಂದೂರು, ಕುಂಬಾರಗುಂಡಿ, ಹಳೇಬಾರಂದೂರು, ಬಾರಂದೂರು(ಬಿ.ಎಚ್ ರಸ್ತೆ), ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಕಾಳಿಂಗಹಳ್ಳಿ, ಕೆಂಚೇನಹಳ್ಳಿ ಕಾಲೋನಿ, ನೀರುಗುಂಡಿ-ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೋನಿ, ಹಡ್ಲಘಟ್ಟ, ಶಿವಪುರ, ಶ್ರೀನಿವಾಸಪುರ, ಕೆಂಚಮ್ಮನಹಳ್ಳಿ, ಉಕ್ಕುಂದ, ರತ್ನಾಪುರ, ಎರೇಹಳ್ಳಿ, ಭೋವಿಕಾಲೋನಿ, ಗಾಂಧಿನಗರ ತಾಷ್ಕೆಂಟ್‌ನಗರ, ಎರೇಹಳ್ಳಿ, ಮೊಸರಹಳ್ಳಿ, ಬಸಾಪುರ, ಗುಣಿ ನರಸೀಪುರ, ಮಾರತಿನಗರ, ಶಿವನಿಕ್ರಾಸ್, ಗೌರಾಪುರ, ಬಸವನಗುಡಿ, ಕೆ.ಎಚ್ ನಗರ, ದೇವರನರಸಿಪುರ, ಮೈಸೂರಮ್ಮನ ಕ್ಯಾಂಪ್, ಕಾಚಗೊಂಡನಹಳ್ಳಿ, ಅಂತರಗಂಗೆ, ಅಂತರಗಂಗೆ ಕ್ಯಾಂಪ್, ರಂಗನಾಥಪುರ, ಬಿಸಿಲುಮನೆ, ಸಿಕಂದರ್ ಕ್ಯಾಂಪ್, ಬಾಳೇಕಟ್ಟೆ, ದೊಡ್ಡೇರಿ, ನೆಟ್ಟಕಲ್ಲಹಟ್ಟಿ, ಗಂಗೂರು, ಶಿವಾಜಿಕ್ಯಾಂಪ್, ಉದಯನಗರ, ಬದನೆಹಾಳ್, ಬಂಡಿಗುಡ್ಡ, ಬೆಳ್ಳಿಗೆರೆ, ಸಾಬರಹಟ್ಟಿ, ಭೈರವನ ಕ್ಯಾಂಪ್, ನಂಜಾಪುರ, ಹೊಸ ನಂಜಾಪುರ, ಹಿರಿಯೂರು, ಹಳೇ ಹಿರಿಯೂರು, ಬಾಳೆ ಮಾರನಹಳ್ಳಿ, ಲಕ್ಷ್ಮೀಸಾಗರ-ರಬ್ಬರ್‌ಕಾಡು, ಸುಲ್ತಾನ್ ಮಟ್ಟಿ, ಹೊಳೆಗಂಗೂರು, ಚಿಕ್ಕಗೊಪ್ಪೇನಹಳ್ಳಿ, ಗೊಂದಿ, ತಾರೀಕಟ್ಟೆ, ಅರಳಿಕೊಪ್ಪ, ಕಾಳನಕಟ್ಟೆ, ಸಿದ್ದರಹಳ್ಳಿ, ಕಂಬದಾಳ್ ಹೊಸೂರು-ಹೊನ್ನಹಟ್ಟಿ, ಗೋಣಿಬೀಡು, ಮಲ್ಲಿಗೇನಹಳ್ಳಿ ಕ್ಯಾಂಪ್, ಕುವೆಂಪು ನಗರ, ದೊಡ್ಡಿ ಬೀಳು, ತಾವರಘಟ್ಟ, ಮಾಳೇನಹಳ್ಳಿ ನೆಲ್ಲಿಸರ, ಅಜೀಜ್ ಕ್ಯಾಂಪ್ ಕಾಲೋನಿ, ಶಂಕರಘಟ್ಟ-ಕುವೆಂಪು ವಿ.ವಿ, ಶಾಂತಿನಗರ, ಸಿಂಗಮನೆ, ಗ್ಯಾರೇಜ್ ಕ್ಯಾಂಪ್, ತಮ್ಮಡಿಹಳ್ಳಿ, ಹುಣಸೇಕಟ್ಟೆ-ಜಂಕ್ಷನ್, ಹುಳಿಯಾರು ರಾಮೇನಕೊಪ್ಪ ಮತ್ತು ಸಂಕ್ಲಿಪುರ ಸೇರಿದಂತೆ ಇನ್ನಿತರ ಗ್ರಾಮಾಂತರ ಪ್ರದೇಶಗಳಲ್ಲಿ  ಕಳೆದ ೩-೪ ದಿನಗಳಿಂದ ಮತಯಾಚನೆ ನಡೆಸಿದ್ದಾರೆ.
    ಶಾರದ ಅಪ್ಪಾಜಿಯೊಂದಿಗೆ ಪಕ್ಷದ ಹಿರಿಯರು, ಮಹಿಳೆಯರು, ಯುವಕರು ಸಹ ಕೈಜೋಡಿಸಿದ್ದು, ಮತಯಾಚನೆ ಕಾರ್ಯಕ್ಕೆ ಶಕ್ತಿ ತುಂಬುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂಬ ಆಶಯದೊಂದಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತಿರುವುದು ಕಂಡು ಬರುತ್ತಿದೆ.

ಹಣದ ಮುಂದೆ ಸ್ವಾಭಿಮಾನಕ್ಕೆ ಗೆಲುವಾಗಲಿ : ಶಾರದ ಅಪ್ಪಾಜಿ

    ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರು ಇಲ್ಲದೆ ಚುನಾವಣೆ ಎದುರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಈ ಬಾರಿ ಅಪ್ಪಾಜಿ ಅಭಿಮಾನಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ ಪ್ರತಿಷ್ಠೆ ಚುನಾವಣೆಯಾಗಿದೆ. ಹಣದ ಮುಂದೆ ಸ್ವಾಭಿಮಾನ ಗೆಲ್ಲಬೇಕಾಗಿದೆ ಶಾರದ ಅಪ್ಪಾಜಿ ಹೇಳಿದರು.


ಭದ್ರಾವತಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಗ್ರಾಮಾಂತರ ಭಾಗದಲ್ಲಿ ಕಳೆದ ೩-೪ ದಿನಗಳಿಂದ  ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವುದು.
    ಕ್ಷೇತ್ರದ ಗೋಣಿಬೀಡು, ಮಲ್ಲಿಗೇನಹಳ್ಳಿ ಕ್ಯಾಂಪ್, ಕುವೆಂಪು ನಗರ, ದೊಡ್ಡಿ ಬೀಳು, ತಾವರಘಟ್ಟ, ಮಾಳೇನಹಳ್ಳಿ ನೆಲ್ಲಿಸರ, ಅಜೀಜ್ ಕ್ಯಾಂಪ್ ಕಾಲೋನಿ, ಶಂಕರಘಟ್ಟ-ಕುವೆಂಪು ವಿ.ವಿ, ಶಾಂತಿನಗರ, ಸಿಂಗಮನೆ, ಗ್ಯಾರೇಜ್ ಕ್ಯಾಂಪ್, ತಮ್ಮಡಿಹಳ್ಳಿ, ಹುಣಸೇಕಟ್ಟೆ-ಜಂಕ್ಷನ್ ಸೇರಿದಂತೆ ಇನ್ನಿತರ ಗ್ರಾಮಾಂತರ ಭಾಗದಲ್ಲಿ ಗುರುವಾರ ಮತಯಾಚನೆ ನಡೆಸಿ ಮಾತನಾಡಿದ ಅವರು, ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದರು. ದೀನದಲಿತರು, ಬಡವರು, ಶೋಷಿತರ ಪರವಾಗಿ ಧ್ವನಿಯಾಗಿದ್ದರು. ಸದಾ ಕಾಲ ಜನರ ಸೇವೆಯಲ್ಲಿ ತೊಡಗಿದ್ದರು. ಅವರ ದಾರಿಯಲ್ಲಿ ನಾನು ಸಹ ಸಾಗುವ ಭರವಸೆ ನೀಡುತ್ತಿದ್ದೇನೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಕಟ್ಟಿಕೊಡಬೇಕೆಂಬ ಆಶಯ ಹೊಂದಿದ್ದೇನೆ. ಈ ಹಿನ್ನಲೆಯಲ್ಲಿ ಹಣ ಬಲದ ಮುಂದೆ ಸ್ವಾಭಿಮಾನ ಗೆಲ್ಲಬೇಕು. ಅಪ್ಪಾಜಿಯವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಈ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ, ಮುಖಂಡರಾದ ಕರಿಯಪ್ಪ, ಎನ್. ಕೃಷ್ಣಪ್ಪ, ತಿಮ್ಮೇಗೌಡ, ತ್ಯಾಗರಾಜ್ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

Wednesday, April 26, 2023

ಆರೋಗ್ಯ ಸ್ವಾಮಿ ನಿಧನ

ಆರೋಗ್ಯ ಸ್ವಾಮಿ
    ಭದ್ರಾವತಿ, ಏ. ೨೬: ನ್ಯೂಟೌನ್ ನಿವಾಸಿ, ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ಆರೋಗ್ಯ ಸ್ವಾಮಿ(೭೬) ಬುಧವಾರ ಮಧ್ಯಾಹ್ನ ನಿಧನ ಹೊಂದಿದರು.
    ಪತ್ನಿ ಹಾಗು ಭದ್ರಾವತಿ ಪೀಪಲ್ ಲಿಬರೇಷನ್(ಬಿಪಿಎಲ್) ಸಂಘದ ಉಪಾಧ್ಯಕ್ಷ ವಿಲಿಯಂ ಸಂಪತ್‌ಕುಮಾರ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದರು. ಇವರ ಅಂತ್ಯಕ್ರಿಯೆ ಗುರುವಾರ ನಡೆಯಲಿದ್ದು, ಇವರ ನಿಧನಕ್ಕೆ ಬಿಪಿಎಲ್ ಸಂಘ ಸಂತಾಪ ಸೂಚಿಸಿದೆ.

ಚುನಾವಣೆಯಲ್ಲಿ ಶಾಸಕ ಸಂಗಮೇಶ್ವರ್‌ಗೆ ಬೆಂಬಲವಿಲ್ಲ : ಸುರೇಶ್

ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾಜ ಸೇವಕ, ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್ ಮಾತನಾಡಿದರು. 
    ಭದ್ರಾವತಿ, ಏ. ೨೬ : ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಬೆಂಬಲ ನೀಡಲಾಗಿತ್ತು. ಆದರೆ ನನ್ನ ನಿರೀಕ್ಷೆಯಂತೆ ಅವರು ನಡೆದುಕೊಂಡಿಲ್ಲ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಸಮಾಜ ಸೇವಕ, ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್ ಹೇಳಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಗಮೇಶ್ವರ್‌ರವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಹಿನ್ನಲೆಯಲ್ಲಿ ಅವರಿಗೆ ಬೆಂಬಲ ಸೂಚಿಸಲಾಯಿತು. ಸುಮಾರು ೪ ಚುನಾವಣೆಯಲ್ಲಿ ಅವರಿಗೆ ನೀಡಿದರೂ ಸಹ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ಕ್ಷೇತ್ರದಲ್ಲಿ ಇಂದಿಗೂ  ರೌಡಿಗಳ ಹಾವಳಿ ಇದ್ದು, ಇಸ್ಪೀಟ್, ಮಟ್ಕಾ ಸೇರಿದಂತೆ ಜೂಜಾಟ ದಂಧೆ ಮಿತಿ ಮೀರಿದೆ. ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಅವನತಿ ದಾರಿ ಹಿಡಿದಿವೆ. ಕ್ಷೇತ್ರದಲ್ಲಿ ಹೆಚ್ಚಿನ ವೈದ್ಯಕೀಯ ಸೇವೆ ಲಭ್ಯವಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ. ನಾನು ನಿರೀಕ್ಷಿಸಿದಂತೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಾಗಿಲ್ಲ. ಈ ಹಿನ್ನಲೆಯಲ್ಲಿ ಸಂಗಮೇಶ್ವರ್ ಅವರಿಗೆ ನೀಡಿರುವ ಬೆಂಬಲ ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದರು.
    ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುವ ಅಭ್ಯರ್ಥಿಗೆ ಈ ಬಾರಿ ನನ್ನ ಬೆಂಬಲವಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.