Wednesday, July 5, 2023
ವಿಐಎಸ್ಎಲ್ ಕಾರ್ಖಾನೆ ಮುಂಭಾಗ ಮುಂದುವರೆದ ಹೋರಾಟ
ಜು.೯ರಂದು ಶ್ರೀ ಸೌಂದರ್ಯ ಲಹರಿಯ ದೀಪ ನಮಸ್ಕಾರ
ಜು.೭ರಂದು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಶಿಬಿರ
ಚುಂಚಾದ್ರಿ ಮಹಿಳಾವೇದಿಕೆಯಿಂದ ಗುರು ಪೂರ್ಣಿಮಾ ಆಚರಣೆ
ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷವಾಗಿ ಗುರುಪೂರ್ಣಿಮಾ ಆಚರಿಸಲಾಯಿತು.
ಭದ್ರಾವತಿ, ಜು. ೫ : ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷವಾಗಿ ಗುರುಪೂರ್ಣಿಮಾ ಆಚರಿಸಲಾಯಿತು.
ಇಂದಿನ ಪೀಳಿಗೆಗೆ ಗುರುಪೂರ್ಣಿಮಾ ಮಹತ್ವ ತಿಳಿಸಿಕೊಂಡುವ ಜೊತೆಗೆ ಧಾರ್ಮಿಕ ಪರಂಪರೆ ಎತ್ತಿ ಹಿಡಿಯುವ ಕಾರ್ಯದಲ್ಲಿ ವೇದಿಕೆ ತೊಡಗಿಸಿಕೊಂಡಿದೆ. ಹಲವಾರು ವರ್ಷಗಳಿಂದ ವಿಭಿನ್ನ ಕಾರ್ಯಕ್ರಮಗಳ ಆಯೋಜನೆ ಮೂಲಕ ಕ್ರಿಯಾಶೀಲವಾಗಿ ಮುನ್ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ ಗುರು ಪೂರ್ಣಿಮಾ ಕುರಿತು ಪುಷ್ಟ ಕೇಶವ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷೆ, ವೇದಿಕ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
ಶೀಲಾ ರವಿ ಪ್ರಾರ್ಥಿಸಿ, ಲತಾ ಪ್ರಭಾಕರ್ ಸ್ವಾಗತಿಸಿದರು. ಭಾರತಿ ಕುಮಾರ್, ಮಂಗಳಾ, ಮಂಜುಳಾ, ಪ್ರೇಮ, ಕುಸುಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
Tuesday, July 4, 2023
ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಎರಡು ದಿನಗಳ ಸಾಹಿತ್ಯ ರಸಗ್ರಹಣ ಶಿಬಿರ
ಗುರು ಕೃಪೆಯಿಂದ ಎಲ್ಲವೂ ಸಾಧ್ಯ : ಶ್ರೀ ಕೃಷ್ಣಮೂರ್ತಿ ಸೋಮಯಾಜಿ
ಭದ್ರಾವತಿ ತಾಲೂಕು ಶಂಕರ ಸಮಿತಿ ಸಂಚಾಲಕರಾದ ವೇದಬ್ರಹ್ಮ ಶ್ರಿ ಕೃಷ್ಣ ಮೂರ್ತಿ ಸೋಮಯಾಜಿ ಜನ್ನಾಪುರ ಶ್ರೀ ಮಹಾಗಣಪತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರುಪೂರ್ಣಿಮೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಭದ್ರಾವತಿ, ಜು. ೪ : ಜೀವನದಲ್ಲಿ ಗುರು ಕೃಪೆಯಿಂದ ಲೌಕಿಕ ಹಾಗೂ ಅಲೌಕಿಕ ಸಾಧನೆ ಗುರಿ ತಲುಪಲು ಸಾಧ್ಯ ಎಂದು ತಾಲೂಕು ಶಂಕರ ಸಮಿತಿ ಸಂಚಾಲಕರಾದ ವೇದಬ್ರಹ್ಮ ಶ್ರಿ ಕೃಷ್ಣಮೂರ್ತಿ ಸೋಮಯಾಜಿ ಹೇಳಿದರು.
ಅವರು ಜನ್ನಾಪುರ ಶ್ರೀ ಮಹಾಗಣಪತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರುಪೂರ್ಣಿಮೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು
ಗುರುಪೂರ್ಣಿಮೆ ಮಹತ್ವ ತಿಳಿಸಿಕೊಡಲಾಯಿತು. ಅಲ್ಲದೆ ಭಜನೆ ಹಾಗೂ ಅಷ್ಟೋತ್ತರ ಪಠಣ ನಡೆಯಿತು. ಜಯಲಕ್ಷ್ಮಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಎನ್ ಎಸ್ ಸುಬ್ರಹ್ಮಣ್ಯ ಸ್ವಾಗತಿಸಿ, ಸ್ವರ್ಣ ನಾಗೇಂದ್ರ ವಂದಿಸಿದರು