ಬ್ಲಾಕ್ಕಾಂಗ್ರೆಸ್ನಗರದ ಘಟಕದ ನೂತನ ಅಧ್ಯಕ್ಷ ಎಸ್. ಕುಮಾರ್
ಭದ್ರಾವತಿ ಬ್ಲಾಕ್ಕಾಂಗ್ರೆಸ್ನಗರ ಘಟಕದ ನೂತನ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ನೇಮಕಗೊಂಡ ನಂತರ ಮೊದಲ ಬಾರಿಗೆ ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅಭಿನಂದಿಸಿದರು.
ಭದ್ರಾವತಿ, ಜು. ೩೦ : ಕ್ಷೇತ್ರದಲ್ಲಿ ಕಾಂಗ್ರೆಸ್ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಉತ್ತಮ ಸಾಧನೆ ಕಂಡುಕೊಳ್ಳಲಾಗುವುದು ಎಂದು ಬ್ಲಾಕ್ಕಾಂಗ್ರೆಸ್ನಗರ ಘಟಕದ ನೂತನ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ವಿಶ್ವಾಸ ವ್ಯಕ್ತಪಡಿಸಿದರು.
ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಪಕ್ಷದ ತತ್ವ, ಸಿದ್ದಾಂತಗಳನ್ನು ಮೆಚ್ಚಿ ಕಾಂಗ್ರೆಸ್ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ. ಇದೀಗ ಪಕ್ಷ ನನ್ನನ್ನು ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದೆ. ನನಗೆ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು.
ಪಕ್ಷದ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ವ್ಯಾಪ್ತಿಯ ಎಲ್ಲಾ ೩೫ ವಾರ್ಡ್ಗಳಲ್ಲೂ ಪಕ್ಷವನ್ನು ಮತ್ತಷ್ಟು ಸಂಘಟಿಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಕಾಂಗ್ರೆಸ್ಪಕ್ಷಕ್ಕೆ ಲಭಿಸಲಿವೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ತಂತ್ರಗಳನ್ನು ರೂಪಿಸಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು. ಅಲ್ಲದೆ ಗ್ರಾಮಾಂತರ ಭಾಗದಲ್ಲೂ ಪಕ್ಷವನ್ನು ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಮುಂಬರುವ ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲೂ ಉತ್ತಮ ಸಾಧನೆ ಕಂಡುಕೊಳ್ಳಲಾಗುವುದು ಎಂದರು.
ನಗರದ ವಿಐಎಸ್ಎಲ್ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಪಕ್ಷ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಪಕ್ಷ ಹೋರಾಟ ಮುಂದುವರೆಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ಕಾಂಗ್ರೆಸ್ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪ್ರಮುಖರಾದ ಬಲ್ಕೀಶ್ಬಾನು, ಅನುಸುಧಾ ಮೋಹನ್ಪಳನಿ, ಬಿ.ಕೆ ಬಸವೇಶ್, ಸಿ.ಎಂ ಖಾದರ್, ಎಸ್. ಮಣಿಶೇಖರ್, ಅಂತೋಣಿ ವಿಲ್ಸನ್, ಚನ್ನಪ್ಪ, ಮಣಿ ಎಎನ್ಎಸ್, ಗೋವಿಂದಸ್ವಾಮಿ, ಗಂಗಾಧರ್, ಫೀರ್ಷರೀಫ್, ಡಿ. ನರಸಿಂಹಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.