Wednesday, August 23, 2023

ಕೋಟ್ಪಾ ಕಾಯ್ದೆಯಡಿ ೨೨ ಪ್ರಕರಣ ದಾಖಲು : ೩,೫೦೦ ರು. ದಂಡ ವಸೂಲಿ

ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ  ಸುತ್ತಮುತ್ತಲ ವ್ಯಾಪ್ತಿಯಲ್ಲಿ  ಹಾಗೂ ತರೀಕೆರೆ ರಸ್ತೆಯಲ್ಲಿ ಬುಧವಾರ ಕೋಟ್ಪಾ ಕಾಯ್ದೆಯಡಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಭದ್ರಾವತಿ, ಆ. ೨೩ :  ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ  ಸುತ್ತಮುತ್ತಲ ವ್ಯಾಪ್ತಿಯಲ್ಲಿ  ಹಾಗೂ ತರೀಕೆರೆ ರಸ್ತೆಯಲ್ಲಿ ಬುಧವಾರ ಕೋಟ್ಪಾ ಕಾಯ್ದೆಯಡಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಕಾರ್ಯಾಚರಣೆಯಲ್ಲಿ ಒಟ್ಟು ೨೨ ಪ್ರಕರಣಗಳನ್ನು ದಾಖಲಿಸಿಕೊಂಡು ೩,೫೦೦ ರು. ದಂಡ ಸಂಗ್ರಹಿಸಲಾಗಿದೆ. ಅಲ್ಲದೆ ತಂಬಾಕು ಮಾರಾಟಗಾರರಿಗೆ ತಿಳುವಳಿಕೆ ನೀಡಲಾಗಿದೆ.
    ತಂಡದ ನೇತೃತ್ವ  ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಹಾಗೂ ಜಿಲ್ಲಾ ಕಾರ್ಯಕ್ರಮ ಅಧಿಕಾರಿಯಾಗಿರುವ ಡಾ. ಓ. ಮಲ್ಲಪ್ಪ ವಹಿಸಿದ್ದರು. ತಂಡದಲ್ಲಿ ಜಿಲ್ಲಾ ಸಲಹೆಗಾರ  ಹೇಮಂತ್ ರಾಜ್ ಅರಸ್,  ಸಮಾಜ ಕಾರ್ಯಕರ್ತ ರವಿರಾಜ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದಮೂರ್ತಿ ಹಾಗು ಸಿಬ್ಬಂದಿಗಳು ಭಾಗವಹಿಸಿದ್ದರು.

ಡಾ. ಅಮದಾ ಸಿ. ಮುನಿರಾಜ್‌ಗೆ ಪಿಎಚ್‌ಡಿ : ಬಿಜಿಎಸ್‌ ಆಡಳಿತ ಮಂಡಳಿ ಸನ್ಮಾನ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ (ಬಿಜಿಎಸ್)ದ  ಪ್ರಾಂಶುಪಾಲರಾದ  ಡಾ. ಅಮದಾ ಸಿ. ಮುನಿರಾಜ್ ರವರಿಗೆ ಪಿಎಚ್‌ಡಿ ಪದವಿ ಲಭಿಸಿದ್ದು, ಈ ಹಿನ್ನಲೆಯಲ್ಲಿ ಇವರನ್ನು ವಿದ್ಯಾಲಯದ  ಆಡಳಿತ ಮಂಡಳಿವತಿಯಿಂದ ಸನ್ಮಾನಿಸಲಾಯಿತು.
    ಭದ್ರಾವತಿ, ಆ. ೨೩ : ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ (ಬಿಜಿಎಸ್)ದ  ಪ್ರಾಂಶುಪಾಲರಾದ  ಡಾ. ಅಮದಾ ಸಿ. ಮುನಿರಾಜ್ ರವರಿಗೆ ಪಿಎಚ್‌ಡಿ ಪದವಿ ಲಭಿಸಿದ್ದು, ಈ ಹಿನ್ನಲೆಯಲ್ಲಿ ಇವರನ್ನು ವಿದ್ಯಾಲಯದ  ಆಡಳಿತ ಮಂಡಳಿವತಿಯಿಂದ ಸನ್ಮಾನಿಸಲಾಯಿತು.
    ಡಾ. ಅಮದಾ ಸಿ. ಮುನಿರಾಜ್‌ರವರು ಹಲವಾರು ವರ್ಷಗಳಿಂದ ವಿದ್ಯಾಲಯದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ನಡುವೆ ಹೆಚ್ಚಿನ ವಿದ್ಯಾಭ್ಯಾಸ ಪೂರೈಸಿ  ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
    ಆಡಳಿತ ಅಧಿಕಾರಿ ಬಿ. ಜಗದೀಶ, ಉಪಪ್ರಾಂಶುಪಾಲ ಎಂ.ಎಂ ವೀರರಾಜೇಂದ್ರ ಸ್ವಾಮಿ, ಮುಖ್ಯೋಪಾಧ್ಯಾಯಿನಿ ಕೆ.ಎನ್ ದಿವ್ಯ,ವಾಹನ ವ್ಯವಸ್ಥಾಪಕ ಸೋಮಶೇಖರ್  ಸೇರಿದಂತೆ ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶ್ರೀ ವಿನಯ್‌ ಗುರೂಜಿ ಹುಟ್ಟುಹಬ್ಬದ ಪ್ರಯುಕ್ತ ಆ.೨೪ರಂದು ಆರೋಗ್ಯ ಶಿಬಿರ

    ಭದ್ರಾವತಿ, ಆ. ೨೩ : ತಾಲೂಕಿನ ಗೋಣಿಬೀಡು ಮಲ್ಲಿಗೇನಹಳ್ಳಿ ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್‌ ವತಿಯಿಂದ ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ಹಾಗು ಶಂಕರ್‌ ಕಣ್ಣಿನ ಆಸ್ಪತ್ರೆ ಮತ್ತು ಬಿಆರ್‌ಪಿ ಸಂಯುಕ್ತ ಆಸ್ಪತ್ರೆ ಸಹಯೋಗದೊಂದಿಗೆ ಆ. ೨೪ರ ಗುರುವಾರ ಬೃಹತ್‌ ರಕ್ತದಾನ ಮತ್ತು ಆರೋಗ್ಯ ಹಾಗು ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಅವಧೂತ ಶ್ರೀ ವಿನಯ್‌ ಗುರೂಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬಿ.ಆರ್‌.ಪಿ ಬಸ್‌ ನಿಲ್ದಾಣ ಮುಂಭಾಗ  ಒಕ್ಕಲಿಗರ ಸಂಘದಲ್ಲಿ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ: ೯೯೦೬೧೮೧೦೬೬ ಅಥವಾ ೯೪೪೯೫೩೩೯೬೧ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಸಾರ್ವಜನಿಕರ ಶಿಬಿರದ ಸದುಯಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

೫೦ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರಿಗೆ ಐಎಂಎ ಸನ್ಮಾನ

ಭಾರತೀಯ ವೈದ್ಯಕೀಯ ಸಂಘದ ಭದ್ರಾವತಿ ತಾಲೂಕು ಶಾಖೆವತಿಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಅ. ೨೩:  ಭಾರತೀಯ ವೈದ್ಯಕೀಯ ಸಂಘದ ತಾಲೂಕು ಶಾಖೆವತಿಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
    ನಗರದಲ್ಲಿ sಸುಮಾರು ೫೦ ವರ್ಷಗಳಿಗೂ ಹೆಚ್ಚು ಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರ ಸೇವೆಯನ್ನು ಶ್ಲಾಘಿಸುವ ಜೊತೆಗೆ ಇಂದಿನ ಯುವ ವೈದ್ಯರಿಗೆ ಮಾದರಿಯಾಗುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಐಎಂಎ ತಾಲೂಕು ಶಾಖೆಯಿಂದ ಕೋರಲಾಯಿತು.
    ಹಿರಿಯ ವೈದ್ಯರಾದ ಡಾ. ಪದ್ಮಾವತಿ, ಡಾ. ರಾಜಣ್ಣ, ಡಾ.ಆರ್.ಆರ್ ಶೆಟ್ಟಿ, ಡಾ. ಕೃಷ್ಣ ಎಸ್ ಭಟ್, ಡಾ.ಎಂ. ರವೀಂದ್ರನಾಥ್ ಕೋಠಿ, ಮೆಗ್ಗಾನ್ ಆಸ್ಪತ್ರೆ ನಿವೃತ್ತ ಜಿಲ್ಲಾ ಸರ್ಜನ್ ಡಾ. ನಂದಾ ಆರ್. ಕೋಠಿ, ಹಾಗು ಡಾ. ಹಂಚಾಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಅವಧೂತ ಶ್ರೀ ವಿನಯ್ ಗುರುಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ವೈದ್ಯಕೀಯ ಸಂಘದ ಪದಾಧಿಕಾರಿಗಳಾದ ಡಾ. ವಿದ್ಯಾ, ಡಾ. ವೀಣಾ ಭಟ್, ಡಾ. ಸುನಿತಾ ಭಟ್, ಡಾ.ಪ್ರಶಾಂತ ಭಟ್, ,. ಡಾ.ಅರುಣ್ ಶೆಟ್ಟಿ ರವರುಗಳು ಉಪಸ್ಥಿತರಿದ್ದರು.

‘ಕ್ರಾಂತಿಕಾರಿ ಗದ್ದರ್-ಒಂದು ನೆನಪು’ ಕಾರ್ಯಕ್ರಮ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಭದ್ರಾವತಿ ತಾಲೂಕು ಶಾಖೆ ವತಿಯಿಂದ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ 'ಕ್ರಾಂತಿಕಾರಿ ಗದ್ದರ್-ಒಂದು ನೆನಪು' ಕಾರ್ಯಕ್ರಮ ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಮಲ್ಲಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
    ಭದ್ರಾವತಿ, ಆ. ೨೩: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)  ತಾಲೂಕು ಶಾಖೆ ವತಿಯಿಂದ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ  'ಕ್ರಾಂತಿಕಾರಿ ಗದ್ದರ್-ಒಂದು ನೆನಪು' ಕಾರ್ಯಕ್ರಮ ಬುಧವಾರ ನಡೆಯಿತು.
      ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಮಲ್ಲಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಸಂಚಾಲಕ ಕೆ ರಂಗನಾಥ್ ಅಧ್ಯಕ್ಷತೆ ವಹಿಸಿದ್ದರು.  ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಪ್ರಸ್ತಾವಿಕ ನುಡಿಗಳನ್ನಾಡಿದರು.    
       ಜಿಲ್ಲಾ  ಸಂಚಾಲಕ ಚಿನ್ನಯ್ಯ, ಮುಖಂಡರಾದ ಕರ್ನಾಟಕ ಜನಶಕ್ತಿ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಅಶೋಕ್, ದೇವೇಂದ್ರಪ್ಪ,  ಸಿ. ಜಯಪ್ಪ, ಜಿ. ರಾಜು, ಕಾಣಿಕ್ ರಾಜ್  ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tuesday, August 22, 2023

ಜೆಡಿಎಸ್‌ ಎಸ್‌ಸಿ ಘಟಕ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವೆಂಕಟೇಶ್‌ ರಾಜೀನಾಮೆ

ಭದ್ರಾವತಿ ಜಾತ್ಯಾತೀತ ಜನತಾದಳ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮಂಗಳವಾರ ಉಜ್ಜನಿಪುರ ವೆಂಕಟೇಶ್‌ ರಾಜೀನಾಮೆ ಸಲ್ಲಿಸಿದ್ದಾರೆ.
    ಭದ್ರಾವತಿ, ಆ. ೨೨ : ಜಾತ್ಯಾತೀತ ಜನತಾದಳ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮಂಗಳವಾರ ಉಜ್ಜನಿಪುರ ವೆಂಕಟೇಶ್‌ ರಾಜೀನಾಮೆ ಸಲ್ಲಿಸಿದ್ದಾರೆ.
    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕಳೆದ ಸುಮಾರು ೮ ತಿಂಗಳಿನಿಂದ ಪ್ರಧಾನ ಕಾರ್ಯದರ್ಶಿ ಹುದ್ದೆ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಇದೀಗ ವೈಯಕ್ತಿಕ ಕಾರಣಗಳಿಂದ ಹುದ್ದೆ ನಿರ್ವಹಿಸಲು ಸಾಧ್ಯವಾಗದಿರುವ ಹಿನ್ನಲೆಯಲ್ಲಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ವೆಂಕಟೇಶ್‌ ಮನವರಿಕೆ ಮಾಡಿದ್ದಾರೆ.

ವಿಐಎಸ್‌ಎಲ್‌ನಲ್ಲಿ ಕೊನೆಗೂ ಉತ್ಪಾದನೆ ಆರಂಭಕ್ಕೆ ಕ್ಷಣಗಣನೆ

ಬಿಲಾಯ್‌ ಘಟಕದಿಂದ ೧೯ ವ್ಯಾಗನ್‌ಗಳಲ್ಲಿ ಬಂದು ತಲುಪಿದ ಬ್ಲೂಮ್‌ಗಳು

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇದೀಗ ಪುನಃ ಉತ್ಪಾದನೆ ಆರಂಭಿಸುವುದು ಬಹುತೇಕ ಖಚಿತವಾಗಿದ್ದು, ಅಗತ್ಯವಿರುವ ಕಚ್ಛಾ ಸಾಮಾಗ್ರಿಗಳು ಮಂಗಳವಾರ ಕಾರ್ಖಾನೆ ತಲುಪಿವೆ. ಇವುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು.
    ಭದ್ರಾವತಿ, ಆ. ೨೨ :  ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇದೀಗ ಪುನಃ ಉತ್ಪಾದನೆ ಆರಂಭಿಸುವುದು ಬಹುತೇಕ ಖಚಿತವಾಗಿದ್ದು, ಅಗತ್ಯವಿರುವ ಕಚ್ಛಾ ಸಾಮಾಗ್ರಿಗಳು ಮಂಗಳವಾರ ಕಾರ್ಖಾನೆ ತಲುಪಿವೆ. ಇದರಿಂದಾಗಿ ಕಾರ್ಖಾನೆ ಆಡಳಿತ ಮಂಡಳಿ ಹಾಗು ಕಾರ್ಮಿಕ ವಲಯದಲ್ಲಿ ಸಂತಸ ಮನೆ ಮಾಡಿದೆ.
    ಕಾರ್ಖಾನೆ ಮುಂಭಾಗದಲ್ಲಿ ಕಳೆದ ಸುಮಾರು ೮ ತಿಂಗಳಿನಿಂದ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಿರಂತರವಾಗಿ ನಡೆಸುತ್ತಿರುವ ಹೋರಾಟಕ್ಕೆ ಒಂದು ಹಂತದಲ್ಲಿ ಜಯ ಲಭಿಸಿದೆ.  
    ಆ.೧೦ರಿಂದ ಕಾರ್ಖಾನೆಯಲ್ಲಿ ಬಾರ್‌ ಮಿಲ್‌ ಆರಂಭಿಸುವುದಾಗಿ ಉಕ್ಕು ಪ್ರಾಧಿಕಾರ  ಈ ಹಿಂದೆ ಘೋಷಿಸಿತ್ತು. ಅಲ್ಲದೆ ಈ ಕುರಿತು ಕಾರ್ಖಾನೆ ಅಧಿಕಾರಿಗಳು ಪ್ರಕಟಣೆ ಸಹ ಹೊರಡಿಸಿದ್ದರು. ಆದರೆ ಕಚ್ಛಾ ಸಾಮಾಗ್ರಿಗಳು ಪೂರೈಕೆಯಾಗದಿರುವುದು ಸೇರಿದಂತೆ ಕೆಲವು ಕಾರಣಗಳಿಂದಾಗಿ ಮುಂದೂಡಲ್ಪಟ್ಟಿತ್ತು.
    ಇದೀಗ ಅಗತ್ಯವಿರುವ ಕಚ್ಛಾ ಸಾಮಾಗ್ರಿಗಳು ಉಕ್ಕು ಪ್ರಾಧಿಕಾರದ ಬಿಲಾಯ್‌ ಘಟಕದಿಂದ ಮೊದಲ ಹಂತವಾಗಿ ಸುಮಾರು ೧೯ ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳು ಬಂದು ತಲುಪಿವೆ. ಕಾರ್ಖಾನೆ ಅಧಿಕಾರಿಗಳು, ಕಾರ್ಮಿಕರು ಇವುಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿದರು.
    ಈ ನಡುವೆ ಗುತ್ತಿಗೆ ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ, ಕಾರ್ಖಾನೆಯ ಆಧುನಿಕರಣ ಹಾಗೂ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳು ಶಾಶ್ವತವಾಗಿ ಪರಿಹಾರ ವಾಗುವವರೆಗೂ ನಮ್ಮ ಹೋರಾಟ ನಡೆಯಲಿದ್ದು, ಮುಂದಿನ  ಹೋರಾಟಗಳಲ್ಲೂ ಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.