ಭದ್ರಾವತಿ ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್ರವರು ಆದಿತ್ಯ-ಎಲ್1 ಉಪಗ್ರಹ ಉಡಾವಣೆ ಯಶಸ್ವಿಯಾಗಲೆಂದು ನೋಟು ಮೂಲಕ ಶುಭ ಹಾರೈಸಿದ್ದಾರೆ.
ಭದ್ರಾವತಿ: ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್ರವರು ಆದಿತ್ಯ-ಎಲ್1 ಉಪಗ್ರಹ ಉಡಾವಣೆ ಯಶಸ್ವಿಯಾಗಲೆಂದು ನೋಟು ಮೂಲಕ ಶುಭ ಹಾರೈಸಿದ್ದಾರೆ.
ಆದಿತ್ಯ-ಎಲ್1 ಉಪಗ್ರಹದ ಮೂಲಕ ಮೊಟ್ಟಮೊದಲ ಬಾರಿಗೆ ಇಸ್ರೋ ಸೂರ್ಯನ ಕುರಿತು ಅಧ್ಯಾಯನ ನಡೆಸಲು ಮುಂದಾಗಿದ್ದು, ಇದೊಂದು ಐತಿಹಾಸಿಕ ಸಾಧನೆಯಾಗಿದೆ. ಸೆ.2ರಂದು ಆದಿತ್ಯ-ಎಲ್1 ಭೂಮಿಯಿಂದ ಹೊರಡಿದ್ದು, ಇಸ್ರೋ ಕೈಗೊಂಡಿರುವ ಈ ಕಾರ್ಯ ಯಶಸ್ವಿಯಾಗಲೆಂದು ಗಣೇಶ್ ರವರು ಐತಿಹಾಸಿಕ ಸಾಧನೆಯ ದಿನಾಂಕ ಹೊಂದಿರುವ10 ರು. ಮುಖ ಬೆಲೆಯ ನೋಟು ಮೂಲಕ ಶುಭ ಹಾರೈಸಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್
ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ.