ಕೆ. ಚಂದ್ರಶೇಖರ್
ಭದ್ರಾವತಿ: ನಗರದ ತರೀಕೆರೆ ರಸ್ತೆಯಲ್ಲಿರುವ ತಮಿಳ್ ಸಂಗಮ್ ಅಧ್ಯಕ್ಷರಾಗಿ ಯುವ ಮುಖಂಡ ಕೆ. ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.
ಭದ್ರಾವತಿ: ನಗರದ ತರೀಕೆರೆ ರಸ್ತೆಯಲ್ಲಿರುವ ತಮಿಳ್ ಸಂಗಮ್ ಅಧ್ಯಕ್ಷರಾಗಿ ಯುವ ಮುಖಂಡ ಕೆ. ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.
ಭದ್ರಾವತಿ: ನಗರದ ಚನ್ನಗರಿ ರಸ್ತೆಯ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸರ್ವ ಸದಸ್ಯರ ಮಹಾಸಭೆ ಸೆ.25ರ ಬೆಳಿಗ್ಗೆ 11 ಗಂಟೆಗೆ ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯಲಿದೆ.
ಭದ್ರಾವತಿ: ನಗರದ ಅಪ್ಪರ್ ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಸೆ.23ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ.
ಭದ್ರಾವತಿ: ತಾಲೂಕಿನ ಅರಳಿಹಳ್ಳಿ ಪ್ರೌಢ ಶಾಲೆ ಮುಖ್ಯಶಿಕ್ಷಕರ ವರ್ಗಾವಣೆ ವಿರೋಧಿಸಿ ಕಳೆದ ಎರಡು ದಿನಗಳಿಂದ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಶಾಲೆಯಲ್ಲಿ ಕಳೆದ ಸುಮಾರು ೮ ವರ್ಷದಿಂದ ಮೋತಿನಾಯ್ಕರವರು ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರನ್ನು ಲಕ್ಕವಳ್ಳಿ ಶಾಲೆಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಶಾಲೆಯ ಮುಂಭಾಗದಲ್ಲಿ ಪೋಷಕರು ಮತ್ತು ಮಕ್ಕಳು ಪ್ರತಿಭಟನೆ ಕೈಗೊಂಡಿದ್ದಾರೆ.
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಪ್ರೌಢ ಶಾಲೆ ಮುಖ್ಯಶಿಕ್ಷಕರ ವರ್ಗಾವಣೆ ವಿರೋಧಿಸಿ ಕಳೆದ ಎರಡು ದಿನಗಳಿಂದ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಬಾರಿ ಶಾಲೆಗೆ ಕಡಿಮೆ ಫಲಿತಾಂಶ ಲಭಿಸಿದ್ದು, ಇದಕ್ಕೆ ಮೋತಿನಾಯ್ಕರವರು ಕಾರಣ ಎಂದು ಇಲಾಖೆ ಅವರನ್ನು ವರ್ಗಾವಣೆ ಮಾಡುತ್ತಿದೆ ಎಂಬುದು ಪೋಷಕರ ಆರೋಪವಾಗಿದೆ. ಮೋತಿನಾಯ್ಕರವರು ಕಳೆದ 8 ವರ್ಷಗಳಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ವರ್ಗಾವಣೆಗೊಳಿಸಿರುವುದು ಸರಿಯಲ್ಲ ಇದಕ್ಕೆ ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ಪಷ್ಟನೆ ನೀಡಬೇಕು. ತಕ್ಷಣ ಸ್ಥಳಕ್ಕೆ ಆಗಮಿಸಬೇಕು. ವರ್ಗಾವಣೆ ರದ್ದುಗೊಳಿಸಬೇಕೆಂದು ಪೋಷಕರು ಬುಧವಾರ ಆಗ್ರಹಿಸಿದ್ದರು.
ಈ ನಡುವೆ ಗುರುವಾರ ಶಾಲೆಯ ಮಕ್ಕಳು ವರ್ಗಾವಣೆ ವಿರೋಧಿಸಿ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. ಶಾಲೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೂತನ ಸಂಸತ್ ಭವನದಲ್ಲಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ.33 ಮೀಸಲಾತಿ ಮಸೂದೆ ಯಶಸ್ವಿಯಾಗಿ ಮಂಡಿಸಿರುವ ಹಿನ್ನಲೆಯಲ್ಲಿ ಭದ್ರಾವತಿ ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ ನಡೆಸಲಾಯಿತು.
ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೂತನ ಸಂಸತ್ ಭವನದಲ್ಲಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ.33 ಮೀಸಲಾತಿ ಮಸೂದೆ ಯಶಸ್ವಿಯಾಗಿ ಮಂಡಿಸಿರುವ ಹಿನ್ನಲೆಯಲ್ಲಿ ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ ನಡೆಸಲಾಯಿತು.
ರಂಗಪ್ಪ ವೃತ್ತದಲ್ಲಿ ಪಕ್ಷದ ಮಹಿಳಾ ಪ್ರಮುಖರು ಮೀಸಲಾತಿ ಮಸೂದೆ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುವ ಜೊತೆಗೆ ಸಂಭ್ರಮಾಚರಣೆ ನಡೆಸಿ ಸಿಹಿ ಹಂಚಿದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಪಾಟೀಲ್, ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಮಂಡಲ ಉಪಾಧ್ಯಕ್ಷೆ ಗೌರಮ್ಮ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುಳ ಸೇರಿದಂತೆ ಪಕ್ಷದ ಮಹಿಳಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಭದ್ರಾವತಿ : ನಗರದ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ಆಶ್ರಮದ ವತಿಯಿಂದ ತಮಿಳುನಾಡು ದಿಂಡಿಕಲ್ನ ವಂಶಪಾರಂಪರೆ ಸಿದ್ದ ವೈದ್ಯರಾದ ಕೆ. ಮುತ್ತುಕೃಷ್ಣನ್ ಅವರಿಂದ ಜು.21ರಂದು ಉಚಿತ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದ್ದು, ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಗಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗೆ ಮೊ: 9480283030 ಅಥವಾ 9448255544 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಭದ್ರಾವತಿ ಉಂಬ್ಳೆಬೈಲು ರಸ್ತೆ, ಸಂಜಯ್ ನಗರದ ಬಳಿ ಸಂಜಯ್ ಯುವಕರ ಸಂಘ ಈ ಬಾರಿ ಚಂದ್ರಯಾನ-3 ಸಾಧನೆ ಬಿಂಬಿಸುವ ವಿಶಿಷ್ಟವಾದ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ.
ಭದ್ರಾವತಿ: ಚಂದ್ರಯಾನ-3 ಸಾಧನೆ ಭಾರತ ದೇಶವನ್ನು ಇಡೀ ಜಗತ್ತು ತಿರುಗಿ ನೋಡುವತೆ ಮಾಡಿದೆ. ಇಂತಹ ಅದ್ಭುತ ಸಾಧನೆಯನ್ನು ಗಣೇಶ ಚತುರ್ಥಿಯಲ್ಲಿ ಯುವಕರ ತಂಡವೊಂದು ಸದ್ಬಳಕೆ ಮಾಡಿಕೊಂಡು ಗಮನ ಸೆಳೆಯುತ್ತಿದೆ.
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮೂಲಕ ರೋವರ್ ಇಳಿಯುತ್ತಿರುವುದು. ದೇಶದ ತ್ರಿವರ್ಣ ಧ್ವಜ
ಹಿಡಿದು ಗಗನಯಾತ್ರಿ ವೇಷಧಾರಿಯಾಗಿ ಇದನ್ನು ವಿಘ್ನ ನಿವಾರಕ ಗಣೇಶ ಯಶಸ್ಸಿನ ಸಂಕೇತ
ಪ್ರದರ್ಶಿಸುತ್ತಿರುವುದು. ಮತ್ತೊಂದೆಡೆ ಭವಿಷ್ಯದಲ್ಲಿ ಮಾನವ ಚಂದ್ರನ ಮೇಲೆ ನೆಲೆಸುವ ಕನಸು
ನನಸಾಗಿಸುವ ಚಿತ್ರಣ ತೆರೆದಿಟ್ಟಿರುವುದು ಭಕ್ತರ ಗಮನ ಸೆಳೆಯುತ್ತಿದೆ.
ಇಲ್ಲಿನ ಯುವಕರು ಪ್ರತಿವರ್ಷ ವಿಭಿನ್ನವಾದ, ಆಕರ್ಷಕವಾದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಗಮನ ಸೆಳೆಯುತ್ತಿದ್ದಾರೆ.