Sunday, September 24, 2023
34ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆ
ವಿವಿಧೆಡೆ ವಿನಾಯಕ ಮೂರ್ತಿ ದರ್ಶನ ಪಡೆದ ಸಂಸದ ಬಿ.ವೈ ರಾಘವೇಂದ್ರ
ಭದ್ರಾವತಿ ನಗರಸಭೆ ವಾರ್ಡ್ ನಂ.27ರ ಆಂಜನೇಯ ಆಗ್ರಹಾರದ 2ನೇ ರಸ್ತೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ದರ್ಶನ ಪಡೆದ ಸಂಸದ ಬಿ.ವೈ ರಾಘವೇಂದ್ರ ಅವರು ದೀಪ ಬೆಳಗಿಸುವ ಮೂಲಕ ವಿನಾಯಕ ಸೇವಾ ಸಮಿತಿಯ ಮುಂದಿನ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು.
ಭದ್ರಾವತಿ : ಸಂಸದ ಬಿ.ವೈ ರಾಘವೇಂದ್ರ ಅವರು ಭಾನುವಾರ ಹೊಸಮನೆಯಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಶ್ರೀ ವಿನಾಯಕ ಮೂರ್ತಿ ಸೇರಿದಂತೆ ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ದರ್ಶನ ಪಡೆದರು.
ಡಿ. ಜಯಶ್ರೀ ನಿಧನ
ಡಿ. ಜಯಶ್ರೀ
ಭದ್ರಾವತಿ : ಜೇಡಿಕಟ್ಟೆ ಹೊಸೂರು ನಿವಾಸಿ ಡಿ. ಜಯಶ್ರೀ(42) ಅನಾರೋಗ್ಯದಿಂದ ಶನಿವಾರ ನಿಧನ ಹೊಂದಿದರು.
ಸುಜಾನಮ್ಮ ನಿಧನ
ಸುಜಾನಮ್ಮ
ಭದ್ರಾವತಿ: ನಗರದ ಕೂಲಿಬ್ಲಾಕ್ ಶೆಡ್, ಮಾರಿಯಮ್ಮ ದೇವಸ್ಥಾನ ಸಮೀಪದ ನಿವಾಸಿ ಸುಜಾನಮ್ಮ(72) ನಿಧನ ಹೊಂದಿದರು.
ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಲೈನ್ ಮ್ಯಾನ್ ಸಾವು
ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಸಾವನ್ನಪ್ಪಿರುವ ಘಟನೆ ಭದ್ರಾವತಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಭದ್ರಾವತಿ: ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.
Saturday, September 23, 2023
ಸೆ.24ರಂದು ಕಾಗದನಗರ ಗಣಪತಿ ವಿಸರ್ಜನೆ
ಭದ್ರಾವತಿ ಕಾಗದ ನಗರದ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಗಣಪತಿ ಮೂರ್ತಿ.
ಭದ್ರಾವತಿ : ಕಾಗದ ನಗರದ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಗಣಪತಿ ಮೂರ್ತಿ ವಿಸರ್ಜನೆ ಸೆ.24ರ ಭಾನುವಾರ ನಡೆಯಲಿದೆ.
ಸೆ.26ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಿವಿಧ ಧಾರ್ಮಿಕ ಆಚರಣೆ
ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿವತಿಯಿಂದ 51ನೇ ವರ್ಷದ ವಿನಾಯಕ ಮೂರ್ತಿ ಮಹೋತ್ಸವ ಅಂಗವಾಗಿ ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಶುಕ್ರವಾರ ಬಜರಂಗದಳ ವತಿಯಿಂದ ಸಾಮೂಹಿಕ ದೀಪ ಲಕ್ಷ್ಮೀ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ : ನಗರದ ಹೊಸಮನೆ ಮುಖ್ಯ ರಸ್ತೆಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ 51ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸೆ.26ರಂದು ನಡೆಯಲಿದೆ.