Friday, October 6, 2023
ಜ್ಞಾನದೀಪಿಕಾ ಶಾಲೆ ಖೋ ಖೋ ತಂಡ ದ್ವಿತೀಯ ಸ್ಥಾನ
1755ನೇ ಮದ್ಯವರ್ಜನ ಶಿಬಿರ ಪೂರ್ವಭಾವಿ ಸಭೆ
1755ನೇ ಮದ್ಯವರ್ಜನ ಶಿಬಿರ ಪೂರ್ವಭಾವಿ ಸಭೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ವಲಯದ ಶ್ರೀರಾಮನಗರ ಶ್ರಮಜೀವಿ ಮರಿಸಿದ್ದಯ್ಯ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯನ್ನು ಪಾಲಾಕ್ಷಪ್ಪ, ಜಯರಾಂ ಗೊಂದಿ, ಸುಧಾಕರ ಶೆಟ್ಟಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಅವರು ತಾಲೂಕಿನ ನಾಗತಿಬೆಳಗಲು ವಲಯದ ಶ್ರೀರಾಮನಗರ ಶ್ರಮಜೀವಿ ಮರಿಸಿದ್ದಯ್ಯ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ದುಶ್ಚಟ ದುರಭ್ಯಾಸ ವಿರುದ್ಧ ಜನಜಾಗೃತಿ ಕಾರ್ಯಕ್ರಮ, ಮದ್ಯವರ್ಜನ ಶಿಬಿರಗಳು, ಶಾಲಾ-ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮೂಲಕ ವಿದ್ಯಾರ್ಥಿಗಳಿಗೆ ದುಶ್ಚಟ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾಹಿತಿಗಳನ್ನು ನೀಡಲಾಗುತ್ತಿದೆ ಎಂದರು.
1755ನೇ ಮದ್ಯವರ್ಜನ ಶಿಬಿರದ ಅಧ್ಯಕ್ಷರಾಗಿ ಯಶೋಧರಯ್ಯ, ಗೌರವ ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾಗಿ ಎಸ್.ಎಂ ರಮೇಶ್, ಬಷೀರ್ ಅಹಮದ್, ಕೃಷ್ಣಮೂರ್ತಿ ನಾಯ್ಡು, ಧರ್ಮೇಗೌಡ(ಕುಮ್ರಿ ಚಂದ್ರಣ್ಣ) ಮತ್ತು ನಿರಂಜನ್, ಕಾರ್ಯದರ್ಶಿಯಾಗಿ ಪಿ. ಶ್ರೀನಿವಾಸ್, ಜಿ.ಎಂ ನಿಂಗಪ್ಪ, ಕೋಶಾಧಿಕಾರಿಯಾಗಿ ಮಹೇಶ್ ಹಾಗು ಕಾರ್ಯಕಾರಿ ಮಂಡಳಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಜೆ. ಚಂದ್ರಶೇಖರ್, ಚನ್ನಪ್ಪ, ಅನಿತಾ ಮಲ್ಲೇಶ್, ಆರ್. ಕರುಣಾಮೂರ್ತಿ, ಜಯರಾಂ ಗೊಂದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಪಾಲಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಮಾಧವ ಸ್ವಾಗತಿಸಿ, ಕವಿತಾ ಪ್ರಾರ್ಥಿಸಿದರು.
Thursday, October 5, 2023
ಯೋಗಪಟು ಡಿ. ನಾಗರಾಜ್ 4 ದಶಕಗಳ ಸಾಧನೆ : ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ
ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಛೇರ್ಮನ್, ಅಂತರರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ರವರಿಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಲಭಿಸಿದೆ.
ಭದ್ರಾವತಿ : ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಛೇರ್ಮನ್, ಅಂತರರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ರವರಿಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಲಭಿಸಿದೆ.
ಮಾಳಮ್ಮ ನಿಧನ
ಮಾಳಮ್ಮ
ಭದ್ರಾವತಿ : ತಾಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮಾಳಮ್ಮ(90) ಗುರುವಾರ ಮಧ್ಯಾಹ್ನ ನಿಧನ ಹೊಂದಿದರು.
ಭಾರತೀಯ ನೌಕದಳ ಸೈನಿಕ ದಿನೇಶ್ ಕುಮಾರ್ ಅರಣ್ಯ ಇಲಾಖೆ ಆರ್.ಎಫ್.ಓ
ಭದ್ರಾವತಿ : ಬಿ.ಆರ್ ದಿನೇಶ್ ಕುಮಾರ್ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ಮುಂಬಡ್ತಿಯೊಂದಿ ವಲಯ ಅರಣ್ಯಾಧಿಕಾರಿ(ಆರ್.ಎಫ್.ಓ)ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಭದ್ರಾವತಿ :ಬಿ.ಆರ್ ದಿನೇಶ್ ಕುಮಾರ್ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ಮುಂಬಡ್ತಿಯೊಂದಿ ವಲಯ ಅರಣ್ಯಾಧಿಕಾರಿ(ಆರ್.ಎಫ್.ಓ)ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಅತಿಯಾದ ಮದ್ಯ ಸೇವನೆ : ವಾರಸುದಾರರಿಲ್ಲದ ವ್ಯಕ್ತಿ ಮೃತ
ಭದ್ರಾವತಿ : ವಾರಸುದಾರರಿಲ್ಲದ ವ್ಯಕ್ತಿಯೊಬ್ಬರು ಅತಿಯಾದ ಮದ್ಯ ಸೇವನೆಯಿಂದ ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Wednesday, October 4, 2023
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರ ಮುಷ್ಕರ
ಆಲ್ ಇಂಡಿಯಾ ಗ್ರಾಮೀಣ್ ಡಿಎಕೆ ಸೇವಕ್ ಯೂನಿಯನ್(ಎಐಜಿಡಿಎಸ್ ಯು) ಕರ್ನಾಟಕ ಸರ್ಕಲ್ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಅಂಚೆ ಕಛೇರಿ ಮುಂಭಾಗ ಸಾಂಕೇತಿಕವಾಗಿ ಮುಷ್ಕರ ನಡೆಸಲಾಯಿತು.
ಭದ್ರಾವತಿ: ಆಲ್ ಇಂಡಿಯಾ ಗ್ರಾಮೀಣ್ ಡಿಎಕೆ ಸೇವಕ್ ಯೂನಿಯನ್(ಎಐಜಿಡಿಎಸ್ ಯು) ಕರ್ನಾಟಕ ಸರ್ಕಲ್ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ನಗರದ ಅಂಚೆ ಕಛೇರಿ ಮುಂಭಾಗ ಸಾಂಕೇತಿಕವಾಗಿ ಮುಷ್ಕರ ನಡೆಸಲಾಯಿತು.