ಭದ್ರಾವತಿ: ಬಿ.ಆರ್ ಪ್ರಾಜೆಕ್ಟ್ ಪತ್ರ ಸಂಸ್ಕೃತಿ ಸಂಘಟನೆ ವತಿಯಿಂದ ೨ ದಿನಗಳ ಕಾಲ ಬಿ.ಆರ್ ಪ್ರಾಜೆಕ್ಟ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ೨೨ನೇ ಪತ್ರ ಸಂಸ್ಕೃತಿ ಮಿತ್ರರ ಸಮ್ಮಿಲನ ಹಮ್ಮಿಕೊಳ್ಳಲಾಗಿದೆ.
ಡಿ.೨ರಂದು ಸಂಜೆ ೫.೩೦ಕ್ಕೆ ಡಿ.ಬಿ ಹಳ್ಳಿ ಪದ್ಮದೀಪ ಶಾಲೆ ವತಿಯಿಂದ ಅಜಯ್ ನೀನಾಸಂ ನಿರ್ದೇಶನದಲ್ಲಿ ``ಸಿರಿಧಾನ್ಯವೇ ಸರಿಧಾನ್ಯ'' ನಾಟಕ ಪ್ರದರ್ಶನ, ವಿಜಯಲಕ್ಷ್ಮಿ ಮತ್ತು ತಂಡದಿಂದ ``ರಂಗ ಗೀತೆಗಳು'' ಹಾಗು ಶಿವಮೊಗ್ಗ ಸಹ್ಯಾದ್ರಿ ಕಲಾ ತಂಡದಿಂದ ನಾ. ಶ್ರೀನಿವಾಸ್ ನಿರ್ದೇಶನದ ಜಂಗಮ ನಾಟಕ ಪ್ರದರ್ಶನ ನಡೆಯಲಿದೆ.
ಡಿ.೩ರಂದು ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ.ಆರ್ ರೇವಣಪ್ಪ ತಂಡದಿಂದ ಜಾನಪದ ಗೀತೆಗಳು, ಬೆಂಗಳೂರಿನ ಶ್ರೀ ಗುರು ಸಮರ್ಥ ಸಂಗೀತ ವಿದ್ಯಾಲಯದ ಪಂಡಿತ್ ಅಮೃತೇಶ್ ಕುಲಕರ್ಣಿ ಹಾಗು ವಿದ್ಯಾರ್ಥಿಗಳಿಂದ ತಬಲಾ ತರಂಗ್ ನಡೆಯಲಿದೆ.
ನಂತರ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಇಂ. ಹೊಸಹಳ್ಳಿ ದಾಳೇಗೌಡ ಅಧ್ಯಕ್ಷತೆ ವಹಿಸಲಿದ್ದು, ಜಿ.ಎಚ್ ರಾಜಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಹಾಸನದ ಸಾಹಿತಿ ಎನ್.ಎಲ್ ಚನ್ನೇಗೌಡ ಅವರಿಂದ `ಪತ್ರೋತ್ಸವ ಭಾಗ-೩' ಬಿಡುಗಡೆ ಮತ್ತು ನುಡಿ, ಸಾಹಿತಿ ಡಾ. ಭದ್ರಾವತಿ ರಾಮಾಚಾರಿ ಅವರಿಂದ ಪಿಸುಮಾತು `ರಾಷ್ಟ್ರಪ್ರೇಮ' ಸಂಚಿಕೆ ಬಿಡುಗಡೆ ಮತ್ತು ನುಡಿ ಹಾಗು ಬೆಂಗಳೂರಿನ ಬುದ್ಧ ಬಸವ ಗಾಂಧಿ ಟ್ರಸ್ಟ್ ಸಂಸ್ಥಾಪಕ ಡಾ. ರಾಮಲಿಂಗೇಶ್ವರ(ಸಿಸಿರಾ) ಅವರಿಂದ `ಮಾಸದ ನೆನಪು' ಪುಸ್ತಕ ಬಿಡುಗಡೆ ಮತ್ತು ನುಡಿ ನಡೆಯಲಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕಾದಂಬರಿಗಾರ್ತಿ ಜಯಂತಿ ಚಂದ್ರಶೇಖರ್, ಲೇಖಕ ಪಿ.ಎಂ ಸಿದ್ದಯ್ಯ ಉಪಸ್ಥಿತರಿರುವರು. ಬಿ.ಆರ್ ಪ್ರಾಜೆಕ್ಟ್ ಸಿದ್ದಪ್ಪ ಮತ್ತು ಬಿ.ಆರ್ ಪ್ರಾಜೆಕ್ಟ್ ಸರ್ಕಾರಿ ಆಸ್ಪತ್ರೆ ಎಸ್. ಜ್ಯೋತಿ ಅವರಿಗೆ ಪತ್ರ ಪರಿಚಯ ಸೇವಾ ಪ್ರಶಸ್ತಿ, ಯು.ಎನ್ ಸಂಗನಾಳಮಠ ಮತ್ತು ಯು. ಶಕುಂತಲ ಹಾಗು ಡಾ. ಶರಶ್ಚಂದ್ರ ಜಿ. ರಾನಡೆ ಮತ್ತು ಸ್ವಿತಾ ರಾನಡೆ ದಂಪತಿಗಳಿಗೆ ಸಾಂಸ್ಕೃತಿಕ ರಾಯಭಾರಿ ದಂಪತಿಗಳು ಪ್ರಶಸ್ತಿ ಹಾಗು ಬೆಂಗಳೂರಿನ ಮೈಕೋ ಶಿವಶಂಕರ್ ಅವರಿಗೆ ದಿವಂಗತ ದೇಶೀಗೌಡ ಮತ್ತು ನಿಂಗಮ್ಮ ರಂಗಭೂಮಿ ದತ್ತಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪತ್ರ ಸಂಸ್ಕೃತಿ ಮಿತ್ರರ ಸಮ್ಮಿಲನ ಯಶಸ್ವಿಗೊಳಿಸುವಂತೆ ಸಂಘಟನೆ ಸಂಸ್ಥಾಪಕ ಇಂ. ಹೊಸಹಳ್ಳಿ ದಾಳೇಗೌಡ ಕೋರಿದ್ದಾರೆ.