Saturday, December 2, 2023

ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿವಮೊಗ್ಗ ಪ್ರಾದೇಶಿಕ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಕ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
    ಭದ್ರಾವತಿ : ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿವಮೊಗ್ಗ ಪ್ರಾದೇಶಿಕ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಕ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
ನಂತರ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನ ಸುರಕ್ಷಾ ಯೋಜನೆಗಳ ಮಹತ್ವ ತಿಳಿಸಿ ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
    ವೀರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್, ಯುವ ಮುಖಂಡ ಮಂಗೋಟೆ ರುದ್ರೇಶ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಛೇರಿ ಅಧಿಕಾರಿಗಳು  ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ದಶಮಾನೋತ್ಸವ ಪ್ರಯುಕ್ತ ಡಿ.೩ರಂದು ಜನಪದ ಜಾತ್ರೆ


    ಭದ್ರಾವತಿ: ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ದಶಮಾನೋತ್ಸವದ ಪ್ರಯುಕ್ತ ಡಿ.೩ರಂದು ಸಂಜೆ ೬ ಗಂಟೆಗೆ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜನಪದ ಜಾತ್ರೆ ಹಮ್ಮಿಕೊಳ್ಳಲಾಗಿದೆ.
    ಡಾ. ಬಿ.ಆರ್ ಅಂಬೇಡ್ಕರ ಜಾನಪದ ಕಲಾ ಸಂಘದ ಕಲಾವಿದರಿಂದ ಜನಪದ ಹಾಡುಗಾರಿಕೆ, ತಾಲೂಕಿನ ಅತ್ತಿಗುಂದ ಗ್ರಾಮದ ಚಂದ್ರಮ್ಮ ಮತ್ತು ತಂಡದವರಿಂದ ಸೋಬಾನೆ ಪದ, ಎಮ್ಮೆಹಟ್ಟಿ ಗ್ರಾಮದ ಗಜಾನನ ಡೊಳ್ಳು ಯುವಕರ ಸಂಘದಿಂದ ಡೊಳ್ಳು ಕುಣಿತ, ಡಿ.ಬಿ ಹಳ್ಳಿ ಶ್ರೀ ಮುಗ್ದ ಸಂಗಮೇಶ್ವರ ವೀರಗಾಸೆ ಕಲಾತಂಡದಿಂದ ಪುರುಷರ ವೀರಗಾಸೆ, ಶಿವಮೊಗ್ಗ ಬೆಳಲಕಟ್ಟೆ ಸರಸ್ವತಿ ಕಲಾ ತಂಡದಿಂದ ಲಂಬಾಣಿ ನೃತ್ಯ, ಸಾಗರ ಬಂದಗದ್ದೆ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಕೋಲಾಟ ಕಲಾ ತಂಡದಿಂದ ಕೋಲಾಟ, ತರೀಕೆರೆ ಲಿಂಗದಹಳ್ಳಿ ಶ್ರೀ ಗುರುವೀರ ಮಹಿಳಾ ವೀರಗಾಸೆ ಕಲಾ ತಂಡದಿಂದ ಮಹಿಳಾ ವೀರಗಾಸೆ, ಉತ್ತರ ಕನ್ನಡ ಜಿಲ್ಲೆಯ ಅಂಚೊ ಮೂಳ ಸಿದ್ಧಿ ಸಾಂಸ್ಕೃತಿಕ ಕಲಾ ತಂಡದಿಂದ ಡಮಾಮಿ ನೃತ್ಯ, ಮಂಡ್ಯ ಅರೇಚಾಕನಹಳ್ಳಿ ಸುಂದರೇಶ್ ಮತ್ತು ತಂಡದವರಿಂದ ಪೂಜಾ ಕುಣಿತ ಹಾಗು ಮೈಸೂರು ಪಿರಿಯಾಪಟ್ಟಣ ಕುಮಾರನಾಯ್ಕ ಮತ್ತು ತಂಡದವರಿಂದ ಕಂಸಾಳೆ ನಡೆಯಲಿದೆ.


    ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘ ೨೦೧೩ರಲ್ಲಿ ಜನ್ನಾಪುರದಲ್ಲಿ ತಮಟೆ ಮೇಳದ ತಂಡವಾಗಿ ಹುಟ್ಟಿ ಕೊಂಡಿದ್ದು, ತದನಂತರ ಜನಪದ ಕಲೆಗಳ ಪ್ರದರ್ಶನ, ಜನಪದ ಗೀತೆಗಳ ಹಾಡುಗಾರಿಕೆ ಹಾಗು ಬೀದಿನಾಟಕ ಪ್ರದರ್ಶನಗಳನ್ನು ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ.
    ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಬಿರಗಳು ಹಾಗು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಲವಾರು ಬೀದಿ ನಾಟಕಗಳನ್ನು ಪ್ರದರ್ಶಿಸಲಾಗಿದೆ. ಸಂಘಕ್ಕೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಲಭಿಸಿವೆ. ಸಂಘದ ಕಾರ್ಯ ಚಟುವಟಿಕೆ ಮತ್ತಷ್ಟು ವಿಸ್ತಾರಗೊಳ್ಳಲಿ, ಸಮಾಜಕ್ಕೆ ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂಬ ಆಶಯದೊಂದಿಗೆ ದಶಮಾನೋತ್ಸವ ಆಚರಿಸುತ್ತಿದ್ದು, ಕಲಾವಿದರು, ಕಲಾಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಪ್ರಥಮ ವರ್ಷದ ಪುಣ್ಯ ಸ್ಮರಣೆ : ಸಾಮಾಜಿಕ ಸೇವಾ ಕಾರ್ಯಗಳು

ಮಾದರಿಯಾದ ಕುಟುಂಬ ವರ್ಗದವರು, ಸ್ನೇಹಿತರು

ಭದ್ರಾವತಿ ನಗರಸಭೆ ವಾರ್ಡ್ ನಂ.೩೧ರ ವ್ಯಾಪ್ತಿಯ ಜಿಂಕ್‌ಲೈನ್ ನಿವಾಸಿ, ಯುವ ಮುಖಂಡ ಮಹೇಶ್‌ರವರು ಕಳೆದ ೧ ವರ್ಷದ ಹಿಂದೆ ನಿಧನ ಹೊಂದಿದ್ದು, ಇವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಕುಟುಂಬ ವರ್ಗದವರು ಹಾಗು ಸ್ನೇಹಿತರು ಸಾಮಾಜಿಕ ಕಾರ್ಯಗಳನ್ನು ಆಯೋಜಿಸುವ ಮೂಲಕ ಮಾದರಿ ಯಾಗಿದ್ದಾರೆ.
    ಭದ್ರಾವತಿ : ಕಳೆದ ೧ ವರ್ಷದ ಹಿಂದೆ ನಿಧನ ಹೊಂದಿದ ವ್ಯಕ್ತಿಯೊಬ್ಬರ ಪುಣ್ಯಸ್ಮರಣೆಯನ್ನು ಕುಟುಂಬ ವರ್ಗದವರು ಹಾಗು ಸ್ನೇಹಿತರು ವಿಶಿಷ್ಟವಾಗಿ ಆಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
    ನಗರಸಭೆ ವಾರ್ಡ್ ನಂ.೩೧ರ ವ್ಯಾಪ್ತಿಯ ಜಿಂಕ್‌ಲೈನ್ ನಿವಾಸಿ, ಯುವ ಮುಖಂಡ ಮಹೇಶ್‌ರವರು ಕಳೆದ ೧ ವರ್ಷದ ಹಿಂದೆ ನಿಧನ ಹೊಂದಿದ್ದು, ಇವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಕುಟುಂಬ ವರ್ಗದವರು ಹಾಗು ಸ್ನೇಹಿತರು ಸಾಮಾಜಿಕ ಕಾರ್ಯಗಳನ್ನು ಆಯೋಜಿಸುವ ಮೂಲಕ ಮಾದರಿ ಯಾಗಿದ್ದಾರೆ.
    ಹುತ್ತಾಕಾಲೋನಿ ಜಿಂಕ್‌ಲೈನ್ ರಂಗಮಂಟಪದ ಬಳಿ ಶುಕ್ರವಾರ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಹಾಗು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿವಮೊಗ್ಗ ಪ್ರಿಯಾಂಕ ಆಸ್ಪತ್ರೆ ವೈದ್ಯ ಡಾ. ನಿತೀನ್ ನೇತೃತ್ವದ ತಂಡ ಆರೋಗ್ಯ ತಪಾಸಣೆ ಹಾಗು ಐ ದೃಷ್ಠಿ ಆಸ್ಪತ್ರೆ ಮುರಳಿ ಪಿ.ಆರ್.ಓ ನೇತೃತ್ವದ ತಂಡದಿಂದ ಕಣ್ಣಿನ ತಪಾಸಣೆ ಹಾಗು ರೋಟರಿ ರಕ್ತನಿಧಿವತಿಯಿಂದ ರಕ್ತದಾನ ಶಿಬಿರ ನಡೆಯಿತು.
    ಭಂಡಾರಹಳ್ಳಿ, ಜಿಂಕ್‌ಲೈನ್, ಹುತ್ತಾಕಾಲೋನಿ, ವೇಲೂರುಶೆಡ್, ಜನ್ನಾಪುರ ಸೇರಿದಂತೆ ಸುತ್ತಮುತ್ತಲ ನೂರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.
    ಪ್ರಮುಖರಾದ ವಿ. ಶ್ರೀನಿವಾಸ್, ಎಂ. ದಿಲೀಪ್, ಪ್ರವೀಣ್, ವಿಲ್ಸನ್, ಎಚ್. ರವಿಕುಮಾರ್, ಅನಂತರಾಮು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, December 1, 2023

ಐಓಸಿಎಲ್ ಗ್ಯಾಸ್ ಕಂಪನಿಯಲ್ಲಿ ಕನ್ನಡ ರಾಜ್ಯೋತ್ಸವ

ಭದ್ರಾವತಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ಐಓಸಿಎಲ್ ಗ್ಯಾಸ್ ಕಂಪನಿಯಲ್ಲಿ ಶ್ರೀ ಚೌಡೇಶ್ವರಿ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ಭದ್ರಾವತಿ : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ಐಓಸಿಎಲ್ ಗ್ಯಾಸ್ ಕಂಪನಿಯಲ್ಲಿ ಶ್ರೀ ಚೌಡೇಶ್ವರಿ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ನಾಡ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕಂಪನಿ ಅಧಿಕಾರಿಗಳು, ಸಿಬ್ಬಂದಿಗಳು, ಪ್ರಭಾಕರ್, ಸಾಧಿಕ್ ಸೇರಿದಂತೆ ಚಾಲಕರು, ಭದ್ರತಾ ಸಿಬ್ಬಂದಿ ಗಣೇಶ್, ಸ್ಥಳೀಯರು ಪಾಲ್ಗೊಂಡಿದ್ದರು.

ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ : ಪ್ರತ್ಯೇಕ ಕಾಯ್ದೆ ರಚಿಸಿ

ವಕೀಲರೊಬ್ಬರ ಮೇಲೆ ಪೊಲೀಸರ ಹಲ್ಲೆ ಖಂಡಿಸಿ ತಾಲೂಕು ವಕೀಲರ ಸಂಘದ ವತಿಯಿಂದ ಶುಕ್ರವಾರ ಭದ್ರಾವತಿ ತಾಲೂಕು ಮುಂಭಾಗ ಪ್ರತಿಭಟನೆ ನಡೆಸಲಾಯಿತು.  
    ಭದ್ರಾವತಿ: ವಕೀಲರೊಬ್ಬರ ಮೇಲೆ ಪೊಲೀಸರ ಹಲ್ಲೆ ಖಂಡಿಸಿ ತಾಲೂಕು ವಕೀಲರ ಸಂಘದ ವತಿಯಿಂದ ಶುಕ್ರವಾರ ತಾಲೂಕು ಮುಂಭಾಗ ಪ್ರತಿಭಟನೆ ನಡೆಸಲಾಯಿತು.  
    ಚಿಕ್ಕಮಗಳೂರು ಪೊಲೀಸರು ವಕೀಲರೊಬ್ಬರ ಮೇಲೆ ವಿನಾಕಾರಣ ಹಲ್ಲೆ ನಡೆಸಿರುವುದು ಖಂಡನೀಯ. ವಕೀಲರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ವಕೀಲರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸದಂತಾಗಿದೆ ಎಂದು ಅಳಲು ವ್ಯಕ್ತಪಡಿಸಿದರು.
     ವಕೀಲರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ರಚಿಸಬೇಕು. ಈ ಸಂಬಂಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಕಾಯ್ದೆ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ವಕೀಲರ ಸಂಘದ ಅಧ್ಯಕ್ಷ ಉಮೇಶ್ ನೇತೃತ್ವ ವಹಿಸಿದ್ದರು. ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಪಾಲ್ಗೊಂಡಿದ್ದರು. ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಿಡಿಲು ಬಡಿದು ಮೃತಪಟ್ಟ ಸಹೋದರರಿಬ್ಬರ ಕುಟುಂಬಕ್ಕೆ ತಲಾ ೫ ಲಕ್ಷ ರು. ಪರಿಹಾರ ಧನ

ಚೆಕ್ ವಿತರಿಸಿ ಸಾಂತ್ವನ ಹೇಳಿದ ಶಾಸಕ ಬಿ.ಕೆ ಸಂಗಮೇಶ್ವರ್

ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪ ಕಳೆದ ೩ ದಿನಗಳ ಹಿಂದೆ ಸಿಡಿಲು ಬಡಿದು ಮೃತಪಟ್ಟ ಸಹೋದರರಿಬ್ಬರ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸರ್ಕಾರದಿಂದ ತಲಾ ೫ ಲಕ್ಷ ರು. ಪರಿಹಾರದ ಚೆಕ್ ವಿತರಿಸಿ ಸಾಂತ್ವನ ಹೇಳಿದರು.
    ಭದ್ರಾವತಿ :  ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪ ಕಳೆದ ೩ ದಿನಗಳ ಹಿಂದೆ ಸಿಡಿಲು ಬಡಿದು ಮೃತಪಟ್ಟ ಸಹೋದರರಿಬ್ಬರ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸರ್ಕಾರದಿಂದ ತಲಾ ೫ ಲಕ್ಷ ರು. ಪರಿಹಾರದ ಚೆಕ್ ವಿತರಿಸಿ ಸಾಂತ್ವನ ಹೇಳಿದರು.
    ಸಿಡಿಲು ಗುಡುಗು ಸಹಿತ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಜಮೀನಿನಲ್ಲಿದ್ದ ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರ ಮತ್ತು ಸುರೇಶ್ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದರು.
    ಬಿ.ಕೆ ಸಂಗಮೇಶ್ವರ್‌ರವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಿಸಿದರು.  ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಾಂತಕುಮಾರ್, ಯುವ ಮುಖಂಡ ಬಿ.ಎಸ್ ಗಣೇಶ್, ತಾಲೂಕು ಆಡಳಿತದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.

Thursday, November 30, 2023

ಛಾಯಾಗ್ರಾಹಕ ರಾಜೇಶ್ ನಿಧನ

ರಾಜೇಶ್
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ನಿವಾಸಿ, ತಾಲೂಕು ಛಾಯಾಗ್ರಾಹಕರ ಸಂಘದ ಸದಸ್ಯ ರಾಜೇಶ್(೩೮) ನಿಧನ ಹೊಂದಿದ್ದಾರೆ.
    ಪತ್ನಿ, ಇಬ್ಬರು ಮಕ್ಕಳು ಇದ್ದರು. ಹಲವಾರು ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನ ತಾಲೂಕು ಛಾಯಾ ಗ್ರಾಹಕರ ಸಂಘ ಸಂತಾಪ ಸೂಚಿಸಿದೆ.