Tuesday, January 23, 2024

ಸಂಪನ್ಮೂಲ ವ್ಯಕ್ತಿ ನವೀದ್‌ ಅಹಮದ್‌ ಪರ್ವೀಜ್‌ಗೆ ರಾಜ್ಯಮಟ್ಟದ ಪ್ರಶಸ್ತಿ

ನವೀದ್‌ ಅಹಮದ್‌ ಪರ್ವೀಜ್‌  
    ಭದ್ರಾವತಿ: ನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಕಛೇರಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ಚುನಾವಣಾ ನೋಡಲ್‌ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನವೀದ್‌ ಅಹಮದ್‌ ಪರ್ವೀಜ್‌ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ʻಸ್ಟೇಟ್‌ ಲೆವೆಲ್‌ ಮಾಸ್ಟರ್‌ ಟ್ರೈನರ್‌ʼ ಪ್ರಶಸ್ತಿ ಲಭಿಸಿದೆ.
    ಕಳೆದ ಹಲವಾರು ವರ್ಷಗಳಿಂದ ಆಯೋಗದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ ಮಹತ್ವ, ಪ್ರಕ್ರಿಯೆಗಳು, ಸಮುದಾಯದ ಜವಾಬ್ದಾರಿಗಳು, ಮತದಾರರ ಪಾಲ್ಗೊಳ್ಳುವಿಕೆ ಹಾಗು ಹಕ್ಕುಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಅರಿವು ಮೂಡಿಸುವ ನಿರಂತರ ಜಾಗೃತಿ ಕಾರ್ಯದಲ್ಲಿ ನವೀದ್‌  ಅವರು ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಚುನಾವಣಾ ಆಯೋಗ ಪ್ರಶಸ್ತಿ ನೀಡಿದೆ.  
    ನವೀದ್‌ ಅವರಿಗೆ ‍ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ ಅಭಿನಂದಿಸಿವೆ.

ನೂತನ ನಗರಸಭೆ ಅಧ್ಯಕ್ಷರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದಿಂದ ಅಭಿನಂದನೆ

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಎಸ್. ಅರುಣ್ ಕುಮಾರ್ ನೇತೃತ್ವದಲ್ಲಿ ಅಭಿನಂದಿಸಲಾಯಿತು.
    ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಎಸ್. ಅರುಣ್ ಕುಮಾರ್ ನೇತೃತ್ವದಲ್ಲಿ ಅಭಿನಂದಿಸಲಾಯಿತು.
    ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ನಗರಸಭೆಗೆ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಅಧ್ಯಕ್ಷರಾಗಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಪಕ್ಷದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಲಾಯಿತು.
    ಪ್ರಮುಖರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್, ಎಚ್. ರವಿಕುಮಾರ್ ಮತ್ತು ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಮಮಂದಿರ ಲೋಕಾರ್ಪಣೆ : ಗಮನ ಸೆಳೆದ ಶ್ರೀರಾಮ, ಹನುಮಂತ ವೇಷಧಾರಿಗಳು

ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಭದ್ರಾವತಿ ಹಳೇನಗರ ಬಸವೇಶ್ವರ ವೃತ್ತದಲ್ಲಿ ಕಲಾವಿದ ರಮೇಶ್‌ರವರು ಶ್ರೀರಾಮ ಹಾಗು ಆಟೋ ಪ್ರದೀಪ್‌ರವರು ಹನುಮಂತ ವೇಷ ಧರಿಸಿ ಎಲ್ಲರ ಗಮನ ಸೆಳೆದರು.
    ಭದ್ರಾವತಿ : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಹಳೇನಗರ ಬಸವೇಶ್ವರ ವೃತ್ತದಲ್ಲಿ ವರ್ತಕರ ಸಂಘದಿಂದ ಧಾರ್ಮಿಕ ಆಚರಣೆಗಳು ಜರುಗಿದವು.
  ಪ್ರಭು ಶ್ರೀರಾಮ ಚಂದ್ರನಿಗೆ ವರ್ತಕರು, ಸ್ಥಳೀಯರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು. ಕಲಾವಿದ ರಮೇಶ್‌ರವರು ಶ್ರೀರಾಮ ಹಾಗು ಆಟೋ ಪ್ರದೀಪ್‌ರವರು ಹನುಮಂತ ವೇಷ ಧರಿಸಿ ಎಲ್ಲರ ಗಮನ ಸೆಳೆದರು.

ಎನ್. ಗಣೇಶ್‌ರಾವ್ ಸಿಂಧ್ಯಾ ನಿಧನಕ್ಕೆ ಸಂತಾಪ

ಎನ್. ಗಣೇಶ್‌ರಾವ್ ಸಿಂಧ್ಯಾ 
ಭದ್ರಾವತಿ : ನಗರದ ಹಿರಿಯ ಪತ್ರಕರ್ತ ಎನ್. ಗಣೇಶ್‌ರಾವ್ ಸಿಂಧ್ಯಾರವರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿ ಪತ್ರಿಕಾ ಕ್ಷೇತ್ರಕ್ಕೆ ಅವರ ಸೇವೆಯನ್ನು ಸ್ಮರಿಸಿದೆ.
    ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಠಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು. ಸಿಂಧ್ಯಾರವರು ಪತ್ರಿಕಾ ಕ್ಷೇತ್ರದಲ್ಲಿ ಸುದೀಘ ಕಾಲ ತೊಡಗಿಸಿಕೊಂಡಿದ್ದು, ಅಲ್ಲದೆ ಸಂಘದ ಹಿರಿಯ ಸದಸ್ಯರಾಗಿ ಮಾರ್ಗದರ್ಶಕರಾಗಿದ್ದರು. ಇವರ ನಿಧನದಿಂದ ಪತ್ರಿಕಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಇವರ ನಿಧನದಿಂದ ಉಂಟಾಗಿರುವ ದುಃಖ ಭರಿಸುವ ಶಕ್ತಿ ದೇವರು ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.  
       ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಸಂಘದ ಹಿರಿಯ ಪತ್ರಕರ್ತರಾದ ಎನ್ ಬಾಬು, ಎಚ್.ಕೆ ಶಿವಶಂಕರ್, ಕೆ.ಎನ್ ರವೀಂದ್ರನಾಥ್(ಬ್ರದರ್), ಕೆ. ಎಸ್ ಸುಧೀಂದ್ರ ಮತ್ತು ಪ್ರಧಾನ ಕಾರ್ಯದರ್ಶಿ ಬಸವರಾಜ್ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.  

Monday, January 22, 2024

ರಾಮಮಂದಿರ ಲೋಕಾರ್ಪಣೆ, ಪ್ರಾಣ ಪ್ರತಿಷ್ಠಾಪನೆ : ಎಲ್ಲೆಡೆ ಹಬ್ಬದ ವಾತಾವರಣ

ಸುಮಾರು ೧೫ ಸಾವಿರ ಲಾಡು ವಿತರಣೆ, ಕರ ಸೇವಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷದ್ ವತಿಯಿಂದ ಭದ್ರಾವತಿ ಸಿದ್ಧಾರೂಢನಗರದ ಧಮಶ್ರೀ ಸಭಾಭವನದಲ್ಲಿ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹೋಮ-ಹವನ, ಭಜನೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ಕರಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಕ್ತರಿಗೆ ಐತಿಹಾಸಿಕ ಕ್ಷಣ ವೀಕ್ಷಣೆಗಾಗಿ ಬೃಹತ್ ಎಲ್‌ಸಿಡಿ  ವ್ಯವಸ್ಥೆ ಕಲ್ಪಿಲಾಗಿತ್ತು.
    ಭದ್ರಾವತಿ : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಎಲ್ಲೆಡೆ ಹಬ್ಬದ ವಾತಾವರಣ ಕಂಡು ಬಂದಿತು.
    ಐತಿಹಾಸಿಕ ಶುಭ ಸಂದರ್ಭದಲ್ಲಿ ದೇವಸ್ಥಾನಗಳ ಬಳಿ ಅದರಲ್ಲೂ ವಿಶೇಷವಾಗಿ ಶ್ರೀ ರಾಮ ದೇವಸ್ಥಾನ ಹಾಗು ಮಂದಿರಗಳ ಬಳಿ ಆಡಳಿ ಮಂಡಳಿಯವರು, ಹಿಂದೂಪರ ಸಂಘಟನೆಗಳು, ಸೇವಾಕರ್ತರು, ದಾನಿಗಳು, ಭಕ್ತರು ಕೆಲವು ದಿನಗಳ ಹಿಂದೆಯೇ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸುವ ಮೂಲಕ ಐತಿಹಾಸಿಕ ದಿನ ಕಾತುರದಿಂದ ಎದುರು ನೋಡುತ್ತಿದ್ದರು.
    ಆಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರುತ್ತಿದ್ದಂತೆ ಎಲ್ಲೆಡೆ ಹಬ್ಬದ ವಾತಾವರಣ ಕಂಡು ಬಂದಿತು. ಅಭಿಷೇಕ, ವಿಶೇಷ ಪೂಜೆ, ಹೋಮ-ಹವನ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ವಿವಿಧ ಸಂಘಟನೆಗಳು, ದಾನಿಗಳು, ಭಕ್ತರು, ಸೇವಾಕರ್ತರಿಂದ ಪಾನಕ, ಮಜ್ಜಿಗೆ, ಕೋಸಂಬರಿ, ಲಾಡು ಹಾಗು ಅನ್ನಸಂತರ್ಪಣೆ ನೆರವೇರಿತು.
    ಐತಿಹಾಸಿಕ ಕ್ಷಣ ವೀಕ್ಷಣೆಗೆ ಬೃಹತ್ ಎಲ್‌ಸಿಡಿ ವ್ಯವಸ್ಥೆ-ಕರ ಸೇವಕರಿಗೆ ಸನ್ಮಾನ:
    ವಿಶ್ವ ಹಿಂದೂ ಪರಿಷದ್ ವತಿಯಿಂದ ಸಿದ್ಧಾರೂಢನಗರದ ಧಮಶ್ರೀ ಸಭಾಭವನದಲ್ಲಿ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹೋಮ-ಹವನ, ಭಜನೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ಕರಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಕ್ತರಿಗೆ ಐತಿಹಾಸಿಕ ಕ್ಷಣ ವೀಕ್ಷಣೆಗಾಗಿ ಬೃಹತ್ ಎಲ್‌ಸಿಡಿ  ವ್ಯವಸ್ಥೆ ಕಲ್ಪಿಲಾಗಿತ್ತು.
    ಸುಮಾರು ೧೫ ಸಾವಿರ ಲಾಡು ವಿತರಣೆ :
    ಪ್ರಮುಖ ಹಿಂದೂಪರ ಸಂಘಟನೆಗಳಲ್ಲಿ ಒಂದಾಗಿರುವ ಕೇಸರಿಪಡೆ ವತಿಯಿಂದ ಹಳೇನಗರದ ಕಂಚಿನಬಾಗಿಲು ವೃತ್ತದ ಬಳಿ ಪ್ರಭು ಶ್ರೀರಾಮ ಚಂದ್ರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೇಸರಿಪಡೆ ಪ್ರಮುಖರು, ಕಾರ್ಯಕತರು, ಸ್ಥಳೀಯ ನಿವಾಸಿಗಳು, ಭಕ್ತರು ಸಿಡಿಮದ್ದು ಸಿಡಿಸಿ, ಕಲಾತಂಡಗಳೊಂದಿಗೆ ಸಂಭ್ರಮಿಸಿ ಸುಮಾರು ೧೫ ಸಾವಿರ ಲಾಡು ವಿತರಣೆ ಮೂಲಕ ಗಮನ ಸೆಳೆದರು.


ಭದ್ರಾವತಿಯಲ್ಲಿ ಕೇಸರಿಪಡೆ ವತಿಯಿಂದ ಹಳೇನಗರದ ಕಂಚಿನಬಾಗಿಲು ವೃತ್ತದ ಬಳಿ ಪ್ರಭು ಶ್ರೀರಾಮ ಚಂದ್ರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಿಡಿಮದ್ದು ಸಿಡಿಸಿ, ಕಲಾತಂಡಗಳೊಂದಿಗೆ ಸಂಭ್ರಮಿಸಿ ಸುಮಾರು ೧೫ ಸಾವಿರ ಲಾಡು ವಿತರಿಸಲಾಯಿತು.

ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಲತಾ ಚಂದ್ರಶೇಖರ್

ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಅಭಿನಂದಿಸಿದರು.
    ಭದ್ರಾವತಿ: ನಗರಸಭೆ ಅಧ್ಯಕ್ಷರಾಗಿ ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ನಗರಸಭೆ ಆಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಮೀಸಲಾತಿ ಮೊದಲ ೩೦ ತಿಂಗಳ ಅವಧಿ ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ದೇಶನದಂತೆ ಅರ್ಹ ಸದಸ್ಯರಿಗೆ ಬಿಟ್ಟುಕೊಡಲಾಗುತ್ತಿದೆ. ಸಾಮಾನ್ಯ ಮಹಿಳಾ ಮೀಸಲು ಹೊಂದಿರುವ ಅಧ್ಯಕ್ಷ ಸ್ಥಾನ ಅಧಿಕಾರ ಈಗಾಗಲೇ ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ ಮತ್ತು ಶೃತಿ ಸಿ. ವಸಂತಕುಮಾರ್ ಕೆ.ಸಿ ಒಟ್ಟು ೩ ಮಂದಿ ಸದಸ್ಯರು ಅನುಭವಿಸಿದ್ದು, ಉಳಿದ ಅವಧಿಗೆ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅವರಿಗೆ ಬಿಟ್ಟು ಕೊಡಲಾಗಿದೆ.
    ಈ ಹಿಂದೆಯೇ ಅಧಿಕಾರ ಅನುಭವಿಸಬೇಕಾಗಿದ್ದ ಲತಾ ಚಂದ್ರಶೇಖರ್ ಅವರಿಗೆ ಮೀಸಲಾತಿ ಕೊನೆ ಅವಧಿ ಅಧಿಕಾರ ಬಿಟ್ಟುಕೊಡುವುದಾಗಿ ತೀರ್ಮಾನಿಸಲಾಗಿತ್ತು. ಅದರಂತೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
  ಪ್ರಸ್ತುತ ನಗರಸಭೆಯಲ್ಲಿ ೧೮ ಕಾಂಗ್ರೆಸ್, ೧೨ ಜೆಡಿಎಸ್, ೪ ಬಿಜೆಪಿ ಹಾಗು ೧ ಪಕ್ಷೇತರ ಸದಸ್ಯರಿದ್ದಾರೆ. ಲತಾ ಚಂದ್ರಶೇಖರ್‌ರವರು ಮೂಲತಃ ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮೊದಲ ಬಾರಿಗೆ ವಾರ್ಡ್ ನಂ.೩೪ರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
    ನಗರದ ಅಭಿವೃದ್ಧಿಗೆ ಶ್ರಮಿಸಿ : ಶಾಸಕ ಬಿ.ಕೆ ಸಂಗಮೇಶ್ವರ್
    ನೂತನ ಅಧ್ಯಕ್ಷೆ ಲತಾ ಚಂದ್ರಶೇಖರ್ ಅವರನ್ನು ಅಭಿನಂದಿಸಿದ ಶಾಸಕ ಬಿ.ಕೆ ಸಂಗಮೇಶ್ವರ್, ೩೦ ತಿಂಗಳ ಅಧಿಕಾರ ಹಂಚಿಕೆಯಲ್ಲಿ ಈಗಾಗಲೇ ೩ ಮಂದಿ ಮಹಿಳಾ ಸದಸ್ಯರು ಅಧ್ಯಕ್ಷರಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಹೆಚ್ಚಿನ ಸಹಕಾರ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನೂತನ ಅಧ್ಯಕ್ಷರು ಸಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರ ನೀಡಬೇಕೆಂದರು.
    ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಹಿರಿಯ ಸದಸ್ಯರಾದ ವಿ. ಕದಿರೇಶ್, ಬಿ.ಟಿ ನಾಗರಾಜ್, ಟಿಪ್ಪು ಸುಲ್ತಾನ್ ಸೇರಿದಂತೆ ಇನ್ನಿತರರು ಅಭಿನಂದಿಸಿ ಮಾತನಾಡಿದರು.  
    ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಹಾಗು ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ನೂತನ ಅಧ್ಯಕ್ಷೆ ಲತಾ ಚಂದ್ರಶೇಖರ್ ಅವರನ್ನು ಅಭಿನಂದಿಸಿದರು.

Sunday, January 21, 2024

ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಆಯೋಧ್ಯೆ ಧಾರ್ಮಿಕ ಆಚರಣೆಗಳಲ್ಲಿ ಬಿಳಿಕಿ ಶ್ರೀ

ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಎದುರಾಗುತ್ತಿದ್ದು, ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದಾರೆ.
    ಭದ್ರಾವತಿ : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಎದುರಾಗುತ್ತಿದ್ದು, ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದಾರೆ.
    ಶ್ರೀ ಮಠದಲ್ಲಿ ನಿರಂತರವಾಗಿ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ಧರ್ಮ ಜಾಗೃತಿ ಮೂಡಿಸುತ್ತಿರುವ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮತ್ತು ನಾಗಲಾಪುರ ಮಠ ಹಾಗು ತಂಡೆಕೆರೆ ಮಠದ ಸ್ವಾಮೀಜಿಯವರೊಂದಿಗೆ ಆಯೋಧ್ಯೆಯಲ್ಲಿ ನಡೆಯುವ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದಾರೆ.