Tuesday, November 19, 2024

ಪರಿಸರ ನಾಶದಿಂದ ಜೀವ ಸಂಕುಲಕ್ಕೆ ಅಪಾಯ : ಬಿ.ಎಲ್ ಚಂದ್ವಾನಿ

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಪರಿಸರ ಮಾಸಾಚರಣೆ 

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಮಂಗಳವಾರ ಪರಿಸರ ಮಾಸಾಚರಣೆಗೆ ಚಾಲನೆ ನೀಡಲಾಯಿತು. 
    ಭದ್ರಾವತಿ: ಪರಿಸರ ನಾಶದಿಂದ ಭೂಮಿಯ ಅವನತಿ, ಮರುಭೂಮಿ ಮತ್ತು ಬರಗಾಲದ ಸಮಸ್ಯೆಗಳು ಉಲ್ಬಣಗೊಳ್ಳುವುದರಿಂದ ಸಾಕಷ್ಟು ಸಮಸ್ಯೆಗಳು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಎಚ್ಚರಿಸಿದರು. 
    ಅವರು ಮಂಗಳವಾರ ಪರಿಸರ ಮಾಸಾಚರಣೆ ಹಿನ್ನಲೆಯಲ್ಲಿ ಕಾರ್ಖಾನೆ ವತಿಯಿಂದ ಇಸ್ಪಾತ್ ಭವನದ ಮುಂಭಾಗ ಹಮ್ಮಿಕೊಳ್ಳದ್ದ ಕಾರ್ಯಕ್ರಮದಲ್ಲಿ ಪರಸರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 
    ಪರಿಸರ ನಾಶದಿಂದ ನೈಸರ್ಗಿಕ ಪರಿಸರ ವ್ಯವಸ್ಥೆಗೆ ಧಕ್ಕೆ ಮಾತ್ರವಲ್ಲದೆ ಪ್ರಪಂಚದಾದ್ಯಂತ ಸಮುದಾಯಗಳ ಜೀವನೋಪಾಯ, ಆರೋಗ್ಯ ಮತ್ತು ಯೋಗಕ್ಷೇಮಕ್ಕೂ ಸಂಕಷ್ಟ ಎದುರಾಗುತ್ತದೆ. ಈ ಹಿನ್ನಲೆಯಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಕುರಿತು ಹೆಚ್ಚಿನ ತಿಳುವಳಿಕೆ ಮೂಡಿಸುವ ಅಗತ್ಯವಿದೆ ಎಂದರು. 
    ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್, ಕಾರ್ಮಿಕರ ಸಂಘದ ಅಧ್ಯಕ್ಷ  ಜೆ. ಜಗದೀಶ್ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರಾ, ಉಪಸ್ಥಿತರಿದ್ದರು. 
    ಮಹಾಪ್ರಬಂಧಕ(ಸುರಕ್ಷತೆ) ಹರಿಶಂಕರ್ ಪರಿಸರ ನೀತಿ ವಾಚಿಸಿದರು. ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕಿ(ಹಣಕಾಸು ಮತ್ತು ಲೆಕ್ಕ) ಶೋಭಾ ಶಿವಶಂಕರನ್,  ಮತ್ತು  ಸಹಾಯಕ ಮಹಾಪ್ರಬಂಧಕ(ವಿಜಿಲೆನ್ಸ್) ಎಲ್. ಕುಥಲನಾಥನ್ ಪರಿಸರ ಪ್ರತಿಜ್ಞೆ ಬೋಧಿಸಿದರು. 
    ಸಹಾಯಕ ಮಹಾಪ್ರಬಂಧಕ(ಹಣಕಾಸು) ಉನ್ನೀಕೃಷ್ಣನ್ ಪ್ರಾರ್ಥಿಸಿದರು. ಸಹಾಯಕ ಮಹಾಪ್ರಬಂಧಕ(ನೀರು ಸರಬರಾಜು ಮತ್ತು ಪರಿಸರ ನಿರ್ವಹಣೆ) ವಿಕಾಸ ಬಸೇರ್ ಸ್ವಾಗತಿಸಿ, ಕಿರಿಯ ಪ್ರಬಂಧಕ ನಂದನ ವಂದಿಸಿದರು.
    ಪರಿಸರ ಮಾಸಾಚರಣೆ : ವಿವಿಧ ಸ್ಪರ್ಧೆಗಳು: 
    ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಪರಿಸರ ಮಾಸಾಚರಣೆ ನ.೧೯ ರಿಂದ ಡಿ.೧೮ರ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ಪರಿಸರ ರಸಪ್ರಶ್ನೆ ಮತ್ತು ಘೋಷವಾಕ್ಯ ಬರೆಯುವ ಸ್ಪರ್ಧೆಗಳನ್ನು ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಮತ್ತು ಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿದೆ. 
    ಶಾಲಾ ವಿಧ್ಯಾರ್ಥಿಗಳಿಗಾಗಿ ಆಯೋಜಿಸಿರುವ ಸ್ಪರ್ಧೆಗಳ ವಿವರ : 
    ೫ನೇ ತರಗತಿಯಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ  ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ) ಹಾಗು ೮ನೇ ತರಗತಿಯಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ (ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ) ನ.೨೩ರಂದು ಮಧ್ಯಾಹ್ನ ೩ ಗಂಟೆಗೆ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.  ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: ೯೪೮೦೮೨೯೦೬೨ / ೯೪೮೦೮೨೯೨೦೨ ಸಂಪರ್ಕಿಸಬಹುದಾಗಿದೆ. 

ಬಡ್ತಿ, ಸೇವಾ ಸೌಲಭ್ಯಗಳಿಗಾಗಿ ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಪ್ರತಿಭಟನೆ

ಭದ್ರಾವತಿ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಬಡ್ತಿ ಹಾಗು ಸೇವಾ ಸೌಲಭ್ಯಗಳ ಈಡೇರಿಕೆಗಾಗಿ ಆಡಳಿತ ಮಂಡಳಿ ಭವನದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. 
    ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಬಡ್ತಿ ಹಾಗು ಸೇವಾ ಸೌಲಭ್ಯಗಳ ಈಡೇರಿಕೆಗಾಗಿ ಆಡಳಿತ ಮಂಡಳಿ ಭವನದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. 
    ಸಂಘದ ವತಿಯಿಂದ ನೌಕರರ ಬಡ್ತಿ ಹಾಗು ಸೇವಾ ಸೌಲಭ್ಯಗಳಿಗಾಗಿ ನಿರಂತವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಆದರೆ ವಿಶ್ವವಿದ್ಯಾಲಯ ಬೇಡಿಕೆ ಈಡೇರಿಸುವಲ್ಲಿ ಹೆಚ್ಚಿನ ಆಸಕ್ತಿವಹಿಸಿಲ್ಲ. ಅಲ್ಲದೆ ಸೂಕ್ತ ಪ್ರತಿಕ್ರಿಯೆ ಸಹ ವ್ಯಕ್ತವಾಗುತ್ತಿಲ್ಲ. ಇದರಿಂದಾಗಿ ನೌಕರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗಾಗಲೇ ಈ ಸಂಬಂಧ ಕುಲಾಧಿಪತಿಗಳಾದ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಹಾಗು ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಯಿತು. 
      ಸಂಘದ ಅಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಅಧ್ಯಾಪಕೇತರ ನೌಕರರು ಪಾಲ್ಗೊಂಡಿದ್ದರು. 

ಕುವೆಂಪು ವಿ.ವಿಯಲ್ಲಿ ಭರ್ತಿಯಾಗದೆ ಉಳಿದಿರುವ ಪ್ರವೇಶಾತಿಗಳಿಗೆ ಅವಕಾಶ ನೀಡಿ

ಕುಲಪತಿ, ಸಿಂಡಿಕೇಟ್ ಸದಸ್ಯರಿಗೆ ಎನ್‌ಎಸ್‌ಯುಐ ಮನವಿ 

ವಿವಿಧ ಮೀಸಲಾತಿಯಡಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಭರ್ತಿಯಾಗದೆ ಉಳಿದಿರುವ ಸ್ನಾತಕೋತ್ತರ ತರಗತಿ ಪ್ರವೇಶಗಳಿಗೆ ಇತರೆ ಮೀಸಲಾತಿಯಡಿ ವಂಚಿತರಾಗಿವ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡುವಂತೆ ಕೋರಿ ಭದ್ರಾವತಿಯಲ್ಲಿ ಎನ್‌ಎಸ್‌ಯುಐ ವತಿಯಿಂದ ಮಂಗಳವಾರ ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ ಹಾಗೂ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ವಿವಿಧ ಮೀಸಲಾತಿಯಡಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಭರ್ತಿಯಾಗದೆ ಉಳಿದಿರುವ ಸ್ನಾತಕೋತ್ತರ ತರಗತಿ ಪ್ರವೇಶಗಳಿಗೆ ಇತರೆ ಮೀಸಲಾತಿಯಡಿ ವಂಚಿತರಾಗಿವ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡುವಂತೆ ಕೋರಿ ಎನ್‌ಎಸ್‌ಯುಐ ವತಿಯಿಂದ ಮಂಗಳವಾರ ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ ಹಾಗೂ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಿಗೆ ಮನವಿ ಸಲ್ಲಿಸಲಾಯಿತು. 
    ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಸ್ನಾತಕೋತ್ತರ ತರಗತಿ ಪ್ರವೇಶ ಮುಕ್ತಾಯವಾಗಿದ್ದು, ಪರಿಶಿಷ್ಟ ಜಾತಿ/ಪಂಗಡದ ಹಾಗೂ ವಿಕಲಚೇತನರ ಮೀಸಲಾತಿಯಡಿ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದಿಲ್ಲ. ಈ ಹಿನ್ನಲೆಯಲ್ಲಿ ವಂಚಿತರಾಗಿರುವ ಹಿಂದುಳಿದ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡುವುದು. ವರ್ಷದಿಂದ ವರ್ಷಕ್ಕೆ ವಿಶ್ವವಿದ್ಯಾಲಯದ ಎಲ್ಲಾ ವಿಭಾಗದಲ್ಲೂ ಪ್ರವೇಶಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು,  ಪ್ರವೇಶ ಸಿಗದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿದ್ಯಾಭಾಸದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಹೆಚ್ಚಿಸುವಂತೆ ಕೋರಲಾಗಿದೆ. 
    ಎನ್‌ಎಸ್‌ಯುಐ ಅಧ್ಯಕ್ಷ ಮುಸ್ವೀರ್ ಬಾಷಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಗೌರವಾಧ್ಯಕ್ಷ ಮುರುಗೇಶ್, ಉಪಾಧ್ಯಕ್ಷರಾದ ಕೀರ್ತಿ, ಮಾದೇಶ, ಮುಖಂಡರಾದ ಟಿ.ಡಿ ಶಶಿಕುಮಾರ್, ವೇಲು ಹಾಗು ಪ್ರವೇಶಾತಿಯಿಂದ ವಂಚಿತರಾದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಸಾಹಿತಿ ಶಿಕ್ಷಕ ಸಿ.ಎಚ್ ನಾಗೇಂದ್ರಪ್ಪ ಪ್ರಶಸ್ತಿಗೆ ಆಯ್ಕೆ

ಸಾಹಿತಿ ಶಿಕ್ಷಕ ಸಿ.ಎಚ್ ನಾಗೇಂದ್ರಪ್ಪ 
    ಭದ್ರಾವತಿ:  ಕಡದಕಟ್ಟೆ ನವಚೇತನ ಕನ್ನಡ ಶಾಲೆಯ ಸಾಹಿತಿ ಶಿಕ್ಷಕ ಸಿ.ಎಚ್ ನಾಗೇಂದ್ರಪ್ಪಯವರ ಕನ್ನಡ ನಾಡು-ನುಡಿ, ಸಾಹಿತ್ಯ ಸೇವೆ ಗುರುತಿಸಿ ರಾಣಿಬೆನ್ನೂರಿನ ರಂಗಕಲಾ ಕುಸುಮ ಪ್ರಕಾಶನದಿಂದ ಕೊಡಮಾಡುವ ೨೦೨೪ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 
    ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ನ.೨೪ರಂದು ನಡೆಯಲಿರುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ  ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ, ಪ್ರಕಾಶಕ, ಸಾಹಿತಿ ಶಿಕ್ಷಕ ವೆಂಕಟೇಶ್ ಈಡಿಗರ್ ಯವರು ತಿಳಿಸಿದ್ದಾರೆ. 
ಪ್ರಶಸ್ತಿಗೆ ಆಯ್ಕೆಯಾಗಿರುವ ನಾಗೇಂದ್ರಪ್ಪರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Monday, November 18, 2024

ವಿರೋಧದ ನಡುವೆಯೂ ನ.೧೯ರಂದು ಪ್ರತಿಭಟನೆ

 
    ಭದ್ರಾವತಿ: ವಿರೋಧದ ನಡುವೆಯೂ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಬಡ್ತಿ ಹಾಗು ಸೇವಾ ಸೌಲಭ್ಯಗಳ ಈಡೇರಿಕೆಗಾಗಿ ನ.೧೯ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 
    ಪ್ರತಿಭಟನೆ ಹಮ್ಮಿಕೊಳ್ಳುವ ಸಂಬಂಧ ವಿಶ್ವವಿದ್ಯಾಲಯಕ್ಕೆ ಸಂಘದ ವತಿಯಿಂದ ಪತ್ರ ಬರೆದು ಕೋರಲಾಗಿತ್ತು. ಅಲ್ಲದೆ ನ.೧೮ರೊಳಗಾಗಿ ಬೇಡಿಕೆಗಳು ಈಡೇರದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಲಾಗಿತ್ತು. ಆದರೆ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ವಿಶ್ವವಿದ್ಯಾಲಯ ಸಂಘಕ್ಕೆ ಪತ್ರ ಬರೆದು ತಿಳಿಸಿದೆ. 
    ಹೋರಾಟ ನಮಗೆ ಸಂವಿಧಾನ ನೀಡಿರುವ ಹಕ್ಕು, ನ್ಯಾಯ ಬದ್ಧವಾದ ಹೋರಾಟ ಇದಾಗಿದೆ. ಇದು ಯಾವುದೇ ವ್ಯಕ್ತಿ ವಿರುದ್ಧ ಅಥವಾ ವೈಯಕ್ತಿಕ ಹೋರಾಟವಲ್ಲ. ಈಗಾಗಲೇ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಈ ಸಂಬಂಧ ಹೋರಾಟಕ್ಕೆ ಅವಕಾಶ ನೀಡಲಾಗಿದೆ. ನಮ್ಮ ಹೋರಾಟದಿಂದ ಯಾವುದೇ ರೀತಿ ಸಮಸ್ಯೆ ಉದ್ಭವಿಸುವುದಿಲ್ಲ. ಈ ಹಿನ್ನಲೆಯಲ್ಲಿ  ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಭವನ ಮುಂಭಾಗ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ. 

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಕನಕ ಜಯಂತಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ನಗರದ ಹೊಸಸೇತುವೆ ರಸ್ತೆ, ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಕನಕ ಜಯಂತಿ ಆಚರಿಸಲಾಯಿತು.
    ಭದ್ರಾವತಿ: ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆ, ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಕನಕ ಜಯಂತಿ ಆಚರಿಸಲಾಯಿತು.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕ ದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಅವರ ಕುರಿತು ಉಪನ್ಯಾಸ ನೀಡಲಾಯಿತು. 
    ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಕಾರ್ಯದರ್ಶಿ ಎಸ್.ಕೆ ಮೋಹನ್, ನಿರ್ದೇಶಕ ಪುಟ್ಟಲಿಂಗ ಮೂರ್ತಿ ಸೇರಿದಂತೆ ನಿರ್ದೇಶಕರು  ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕನಕದಾಸ, ಬಸವೇಶ್ವರ, ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಅರ್ಥೈಸಿಕೊಳ್ಳಿ : ಬಿ.ಕೆ ಮೋಹನ್

ಭದ್ರಾವತಿಯಲ್ಲಿ ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಕುರುಬರ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೫೩೭ನೇ ಜಯಂತ್ಯೋತ್ಸವ ಕಾರ್ಯಕ್ರಮ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.  
    ಭದ್ರಾವತಿ: ಸರ್ವ ಜನಾಂಗಕ್ಕೆ ಕನಕದಾಸರು, ಜಗಜ್ಯೋತಿ ಬಸವೇಶ್ವರರು ಹಾಗು ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರು ಆದರ್ಶಪ್ರಾಯರಾಗಿದ್ದು, ಈ ಮಹಾನೀಯರ ವಿಚಾರಧಾರೆಗಳನ್ನು ನಾವೆಲ್ಲರೂ ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ. ಭವಿಷ್ಯದಲ್ಲಿ ಇನ್ನೂ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು. 
    ಅವರು ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಕುರುಬರ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೫೩೭ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
    ಸಾಮಾಜಿಕ ಅಸಮಾನತೆ, ಜಾತಿ ತಾರತಮ್ಯ, ಶೋಷಣೆಗಳ ವಿರುದ್ಧ ಹೋರಾಡಿ ಸಮಾಜಕ್ಕೆ ತಮ್ಮದೇ ಆದ ಆದರ್ಶ ಮೌಲ್ಯಗಳನ್ನು ನೀಡಿರುವ ಈ ೩ ಜನ ಮಹನೀಯರನ್ನು ನಾವೆಲ್ಲರೂ ಪ್ರತಿಬಾರಿ ಸ್ಮರಿಸಬೇಕಾಗಿದೆ. ಪ್ರಸ್ತುತ ಕುರುಬರ ಸಮಾಜ ಸದೃಢವಾಗಿ ಬೆಳೆದು ನಿಂತಿದೆ. ಇದರ ಹಿಂದೆ ಸಂಘಟನೆಯ ನೇತೃತ್ವವಹಿಸಿರುವವರ ಶ್ರಮ ಹೆಚ್ಚಿನದ್ದಾಗಿದೆ. ಕುರುಬರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಬೃಹತ್ ಶಕ್ತಿಯಾಗಿ ಬೆಳೆದಿದ್ದಾರೆ. ಇಂತಹ ಸಮಾಜಕ್ಕೆ ಶಾಸಕರು ತಮ್ಮ ಸ್ವಂತ ಜಾಗವನ್ನು ನೀಡಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದರು. 
    ಅಧ್ಯಾಪಕ, ಸಾಹಿತಿ ಅರಳಿಹಳ್ಳಿ ಅಣ್ಣಪ್ಪ ಉಪನ್ಯಾಸ ನೀಡಿ, ಕನಕದಾಸರು ೧೫-೧೬ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಬೀರಪ್ಪನಾಯಕ-ಬಚ್ಚಮ್ಮ ದಂಪತಿ ಪುತ್ರರಾಗಿದ್ದಾರೆ. ಆರಂಭದಲ್ಲಿ ತಿಮ್ಮಪ್ಪನಾಯಕ ಎಂಬ ಹೆಸರಿನಲ್ಲಿ ವಿಜಯನಗರ ಸಾಮ್ರಾಜ್ಯದ ಸೇನೆಯಲ್ಲಿ ಡಣ್ಣಾಯಕನಾಗಿ ಸೇವೆ ಸಲ್ಲಿಸಿ ಪ್ರಶಂಸೆಗೆ ಪಾತ್ರರಾಗಿದ್ದು, ನಂತರ ಅವರಿಗೆ ಸಿಕ್ಕಿದ ಚಿನ್ನಾಭರಣಗಳಿಂದ ಕನಕನಾಯಕರಾಗಿ ಗುರುತಿಸಿಕೊಂಡಿದ್ದು, ಕೊನೆಯಲ್ಲಿ ಯುದ್ಧದಲ್ಲಿ ಸೋತ ಅವರಿಗೆ ಆಧ್ಯಾತ್ಮಿಕ ಜ್ಞಾನೋದಯವಾಗಿ ಕನಕದಾಸರಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದರು. 
    ಸಾಮಾಜಿಕ ಅಸಮಾನತೆ, ಜಾತಿ ತಾರತಮ್ಯ ಹಾಗು ಶೋಷಣೆಗಳ ವಿರುದ್ಧ ಸಿಡಿದೆದ್ದರು. ಒಬ್ಬ ದಾರ್ಶನಿಕನಾಗಿ, ಸಾಮಾಜಿಕ ಸುಧಾರಕನಾಗಿ, ವೈಜ್ಞಾರಿಕತೆಯ ಬೆಳಕಾಗಿ ಎಂದಿಗೂ ಕನಕದಾಸರು ನಮ್ಮೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು. 
    ತಹಸೀಲ್ದಾರ್ ಕೆ.ಆರ್ ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಸೂಡಾ ಸದಸ್ಯರಾದ ವೈ. ರೇಣುಕಮ್ಮ, ಎಚ್. ರವಿಕುಮಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಉಮೇಶ್, ಕರ್ನಾಟಕ ರಾಜ್ಯ ಪೌರ ಸೇವಾ  ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ನಗರಸಭೆ ಆರ್. ಶ್ರೇಯಸ್, ಕುರುಬರ ಸಂಘದ ವಸಂತ್, ಬಿ.ಎಸ್ ಮಂಜುನಾಥ್, ಕೇಶವ, ಮಂಜುನಾಥ್ ಕೊಯ್ಲಿ, ಕುಮಾರ್, ಪ್ರವೀಣ್, ಮಲ್ಲೇಶ್, ಸರಸ್ವತಿ, ರಾಜೇಂದ್ರ, ಉದ್ಯಮಿ ಬಿ.ಕೆ ಜಗನ್ನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಶಿಕ್ಷಕಿಯರಾದ ಎಚ್.ಎಚ್ ಯಾಮಮ್ಮ, ತ್ರಿವೇಣಿ ಮತ್ತು ಕೆ. ಕೋಕಿಲಾ ತಂಡದವರು ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ, ಪ್ರಶಾಂತ್ ಸಣ್ಣಕ್ಕಿ ಕಾರ್ಯಕ್ರಮ ನಿರೂಪಿಸಿದರು. 
    ಇದಕ್ಕೂ ಮೊದಲು ಬಿ.ಎಚ್ ರಸ್ತೆ, ಲೋಯರ್ ಹುತ್ತಾದಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕನಕದಾಸರ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಸಮಾಜ ಸೇವಕ ಸಿ. ಮಹೇಶ್ ಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.