ಶ್ರೀ ಸಿದ್ದಾರೂಢರ ೧೯೦ನೇ ಹಾಗೂ ಶ್ರೀ ಗುರುನಾಥಾರೂಢರ ೧೧೫ನೇ ಜಯಂತ್ಯುತ್ಸವ ಮತ್ತು ಶ್ರೀ ಸಿದ್ದಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ಅಂಗವಾಗಿ ಆರಂಭಗೊಂಡಿರುವ ಜಗದ್ಗುರು ಶ್ರೀ ಸಿದ್ದಾರೂಢ ಜ್ಯೋತಿ ರಥಯಾತ್ರೆ ಸೋಮವಾರ ಭದ್ರಾವತಿ ನಗರಕ್ಕೆ ಆಗಮಿಸಿತು.
ಭದ್ರಾವತಿ: ಶ್ರೀ ಸಿದ್ದಾರೂಢರ ೧೯೦ನೇ ಹಾಗೂ ಶ್ರೀ ಗುರುನಾಥಾರೂಢರ ೧೧೫ನೇ ಜಯಂತ್ಯುತ್ಸವ ಮತ್ತು ಶ್ರೀ ಸಿದ್ದಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ಅಂಗವಾಗಿ ಆರಂಭಗೊಂಡಿರುವ ಜಗದ್ಗುರು ಶ್ರೀ ಸಿದ್ದಾರೂಢ ಜ್ಯೋತಿ ರಥಯಾತ್ರೆ ಸೋಮವಾರ ನಗರಕ್ಕೆ ಆಗಮಿಸಿತು.
ಡಿ.೨೨ರಿಂದ ಹುಬ್ಬಳಿಯ ಶ್ರೀ ಸಿದ್ದಾರೂಢ ಸ್ವಾಮಿಯವರ ಮಠದಿಂದ ಆರಂಭಗೊಂಡಿರುವ ರಥಯಾತ್ರೆ ನಗರದ ಹೊಸಸೇತುವೆ ರಸ್ತೆಯ ಶ್ರೀ ಸಿದ್ದಾರೂಢ ಆಶ್ರಮಕ್ಕೆ ಆಗಮಿಸಿತು. ಶ್ರೀ ಶಿವಲಿಂಗಾನಂದ ಸ್ವಾಮಿಗಳ ನೇತೃತ್ವದಲ್ಲಿ ಭಕ್ತರು ಪೂರ್ಣಕುಂಭ ಸ್ವಾಗತದೊಂದಿಗೆ ರಥಯಾತ್ರೆಯನ್ನು ಬರಮಾಡಿಕೊಂಡರು.
ಟ್ರಸ್ಟ್ ಕಾರ್ಯದರ್ಶಿ ರಾಮಮೂರ್ತಿ, ಬಿ. ದಿವಾಕರ ಶೆಟ್ಟಿ, ಮಾರುತಿ, ರಂಗನಾಥ ಗಿರಿ, ಬಾಬು, ವಿಜಯಕುಮಾರ್, ಜಿ. ಧರ್ಮಪ್ರಸಾದ್, ಮಂಜುನಾಥ್ ರಾವ್, ಹನುಮಂತಪ್ಪ, ಎರೇಸೀಮೆ, ಭಾರತಮ್ಮ, ಲಕ್ಷ್ಮಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಗರದ ವಿವಿದೆಢೆ ಸಂಚರಿಸಿ ಶ್ರೀ ಮಠದ ಆವರಣದಲ್ಲಿ ವಾಸ್ತವ್ಯ ಹೂಡಿದ ರಥಯಾತ್ರೆ ಮಂಗಳವಾರ ಬೆಳಿಗ್ಗೆ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿತು.
ಸಿದ್ಧಾರೂಢ ಮಠದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಹುಣ್ಣಿಮೆ ಕಾರ್ಯಕ್ರಮದಲ್ಲಿ ಶ್ರೀ ಶಿವಲಿಂಗಾನಂದ ಸ್ವಾಮಿಜಿ ಉಪನ್ಯಾಸ ನೀಡಿ ಆಶೀರ್ವಚಿಸಿದರು. ಗುತ್ತಿಗೆದಾರ ಎಸ್. ಬಾಬಣ್ಣ ಕುಟುಂಬದವರಿಂದ ದಾಸೋಹ ಏರ್ಪಡಿಸಲಾಗಿತ್ತು.