ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಸಂಭ್ರಮ
ಕುವೆಂಪು ವಿಶ್ವ ವಿದ್ಯಾಲಯದಿಂದ ಬುಧವಾರ ಗೌರವ ಡಾಕ್ಟರೇಟ್ ಪದವಿ ಪಡೆದ ಹಿರಿಯ ರಾಜಕೀಯ ಮುತ್ಸದ್ದಿ, ಸಮಾಜವಾದಿ ನಾಯಕ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಭದ್ರಾವತಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ಕುವೆಂಪು ವಿಶ್ವ ವಿದ್ಯಾಲಯದಿಂದ ಬುಧವಾರ ಗೌರವ ಡಾಕ್ಟರೇಟ್ ಪದವಿ ಪಡೆದ ಹಿರಿಯ ರಾಜಕೀಯ ಮುತ್ಸದ್ದಿ, ಸಮಾಜವಾದಿ ನಾಯಕ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳು, ಪ್ರಮುಖರು ಕುವೆಂಪು ವಿಶ್ವ ವಿದ್ಯಾಲಯಕ್ಕೆ ತೆರಳಿ ಕಾಗೋಡು ತಿಮ್ಮಪ್ಪನವರೊಂದಿಗೆ ಸಂಭ್ರಮ ಹಂಚಿಕೊಂಡರು.
ಕಳೆದ ಕೆಲವು ತಿಂಗಳುಗಳಿಂದ ಸಮಿತಿ ವತಿಯಿಂದ ಕಾಗೋಡು ತಿಮ್ಮಪ್ಪನವರಿಗೆ ಕರ್ನಾಟಕ ರತ್ನ ಸೇರಿದಂತೆ ಗೌರವಪೂರ್ವಕವಾಗಿ ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿ ಹಾಗು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪನವರ ನಿವಾಸದವರೆಗೂ ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
ಅಲ್ಲದೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಂದು ಸಮಿತಿ ವತಿಯಿಂದ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದೀಗ ಕುವೆಂಪು ವಿಶ್ವ ವಿದ್ಯಾಲಯ ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ಸಂಭ್ರಮವನ್ನುಂಟು ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂಬುದು ಸಮಿತಿ ಒತ್ತಾಯವಾಗಿದೆ.