
ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ "ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ' ಶೀರ್ಷಿಕೆಯಡಿ ೧೧ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯರವರ ಉಪಸ್ಥಿತಿಯಲ್ಲಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ, ಅಂತರರಾಷ್ಟ್ರೀಯ ಯೋಗಗುರು ಡಾ.ಡಿ ನಾಗರಾಜ್ರವರ ನೇತೃತ್ವದಲ್ಲಿ ನಡೆಯಿತು.
ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಬಿಜೆಪಿ ಮಂಡಲ, ಜನ್ನಾಪುರ ಹ್ಯಾಪಿ ಲಿವಿಂಗ್ ಲೈಫ್ ಯೋಗ ಕೇಂದ್ರ ಸೇರಿದಂತೆ ವಿವಿಧೆಡೆ ೧೧ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಶನಿವಾರ ನಡೆಯಿತು.
ಬಿಜೆಪಿ ಮಂಡಲ : `ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'
ಬಿಜೆಪಿ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ "ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ' ಶೀರ್ಷಿಕೆಯಡಿ ೧೧ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯರವರ ಉಪಸ್ಥಿತಿಯಲ್ಲಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ, ಅಂತರರಾಷ್ಟ್ರೀಯ ಯೋಗಗುರು ಡಾ.ಡಿ ನಾಗರಾಜ್ರವರ ನೇತೃತ್ವದಲ್ಲಿ ನಡೆಯಿತು. ಅವರು ಯೋಗದ ಮಹತ್ವ ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನವನ್ನು ತಿಳಿಸಿದರು.
ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ "ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ' ಶೀರ್ಷಿಕೆಯಡಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯರವರ ಉಪಸ್ಥಿತಿಯಲ್ಲಿ ನಡೆದ ೧೧ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ, ಅಂತರರಾಷ್ಟ್ರೀಯ ಯೋಗಗುರು ಡಾ.ಡಿ ನಾಗರಾಜ್ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಂಡಲ ಅಧ್ಯಕ್ಷರಾದ ಜಿ. ಧರ್ಮಪ್ರಸಾದ್ ಹಾಗು ಕೆ.ಎಚ್ ತೀರ್ಥಯ್ಯರವರು ಮಾತನಾಡಿ, ವಿಶ್ವಕ್ಕೆ ಭಾರತ ಕೊಟ್ಟ ಮಹಾನ್ ಕೊಡುಗೆ ಯೋಗ. ಪ್ರಧಾನಿ ನರೇಂದ್ರ ಮೋದಿರವರು ಯೋಗಕ್ಕೆ ವಿಶ್ವವ್ಯಾಪಿ ಮಾನ್ಯತೆ ಲಭಿಸುವಂತೆ ಮಾಡಿದ್ದಾರೆ.
ಮೋದಿಯವರ ಜೀವನದಲ್ಲಿ ಯೋಗ ಕೇವಲ ಅಭ್ಯಾಸವಲ್ಲ. ಆದರ್ಶವನ್ನಾಗಿಸಿಕೊಂಡು ಪ್ರತಿದಿನ ಯೋಗಭ್ಯಾಸ ಮಾಡುತ್ತಿದ್ದಾರೆ. ಪ್ರಸ್ತುತ ದೇಶ ವಿದೇಶಗಳಲ್ಲಿ ಜನರು ಯೋಗ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ದೇಹ ಹಾಗೂ ಮನಸ್ಸಿನ ಆರೋಗ್ಯಕ್ಕೆ ಪ್ರಯೋಜನಕಾರಿ. ಪ್ರತಿಯೊಬ್ಬರು ಇದನ್ನು ಜೀವನಶೈಲಿಯಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ, ಯೋಗ ಕಾರ್ಯಕ್ರಮದ ವಿಶೇಷ ತಂಡದ ಸದಸ್ಯರಾದ ರಘುರಾವ್, ರಾಜಶೇಖರ್ ಉಪ್ಪಾರ್, ತೀರ್ಥಪ್ಪ, ಸರಸ್ವತಿ, ಜಯಲಕ್ಷ್ಮಿ, ಶಕುಂತಲಾ ಪ್ರದೀಪ್, ಕಾರಾನಾಗರಾಜ್, ಎಂ.ಎಸ್ ಸುರೇಶಪ್ಪ, ನಂಜಪ್ಪ, ಹುತ್ತ ಸತೀಶ್, ಸುಲೋಚನ ಪ್ರಕಾಶ್, ರಾಘವೇಂದ್ರ, ಆಟೋಮೂರ್ತಿ, ರವಿಚಂದ್ರನ್ ಸೇರಿದಂತೆ ಯೋಗಾಸಕ್ತರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸೈಲ್-ವಿಐಎಸ್ಎಲ್ : 'ಯೋಗದ ಮಹತ್ವ ಮತ್ತು ಆರೋಗ್ಯದ ಮೇಲೆ ಅದರ ಪರಿಣಾಮ'
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ೧೧ನೇ ಅಂತರರಾಷ್ಟ್ರೀಯ ಯೋಗ ದಿನ ಸೈಲ್-ವಿಐಎಸ್ಎಲ್ ಭದ್ರಾ ಅತಿಥಿ ಗೃಹದಲ್ಲಿ ಆಚರಿಸಲಾಯಿತು.
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ೧೧ನೇ ಅಂತರರಾಷ್ಟ್ರೀಯ ಯೋಗ ದಿನ ಸೈಲ್-ವಿಐಎಸ್ಎಲ್ ಭದ್ರಾ ಅತಿಥಿ ಗೃಹದಲ್ಲಿ ಆಚರಿಸಲಾಯಿತು. ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಕಾರ್ಯಕ್ರಮ ಉದ್ಘಾಟಿಸಿದರು. ನಗರದ ಪ್ರಸೂತಿ ಹಾಗು ಸ್ತ್ರೀ ರೋಗ ತಜ್ಞೆ, ಯೋಗ ಶಿಕ್ಷಕಿ ಡಾ. ವೀಣಾ ಭಟ್ ರವರು `ಯೋಗದ ಮಹತ್ವ ಮತ್ತು ಆರೋಗ್ಯದ ಮೇಲೆ ಅದರ ಪರಿಣಾಮ' ವಿಷಯ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ವಿಐಎಸ್ಎಲ್ ಜಾಲತಾಣದಲ್ಲಿ ಡಾ. ವೀಣಾ ಭಟ್ರವರ `ಯೋಗದ ಮಹತ್ವ' ಲೇಖನವನ್ನು ಪ್ರಸರಿಸಲಾಯಿತು.
ಡಾ. ವೀಣಾ ಭಟ್ ಮತ್ತು ತಂಡದವರಾದ ವಿ.ಜಿ ವಿಂಧ್ಯ, ಡಾ. ಆಶಾ, ಶಾಲಿನಿ ಕಿರಣ್ ಮತ್ತು ಸತ್ಯಮೂರ್ತಿರವರು ವಿವಿಧ ಯೋಗಾಸನ ಭಂಗಿಗಳ ಮೂಲಕ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದವರಿಗೆ ಸಾಮೂಹಿಕವಾಗಿ ಯೋಗಾಸನ ಮಾಡಲು ಮಾರ್ಗದರ್ಶನ ನೀಡಿದರು.
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಆಯೋಜಿಸಲಾಗಿದ್ದ ೧೧ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸೇರಿದಂತೆ ಇನ್ನಿತರರು ಯೋಗಾಸನದ ವಿವಿಧ ಭಂಗಿಗಳ ಮೂಲಕ ಗಮನ ಸೆಳೆದರು. ಮುಖ್ಯ ಮಹಾಪ್ರಬಂಧಕರು(ಸ್ಥಾವರ) ಕೆ.ಎಸ್ ಸುರೇಶ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಮತ್ತು ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಉಪ ಪ್ರಬಂಧಕರು (ಮಾನವ ಸಂಪನ್ಮೂಲ) ಕೆ.ಎಸ್. ಶೋಭಾ ಕಾರ್ಯಕ್ರಮ ನಿರೂಪಿಸಿದರು. ಈ ನಡುವೆ ಕಾರ್ಖಾನೆಯ ಕಾರ್ಮಿಕರು ಮತ್ತು ಕುಟುಂಬದವರು ತಮ್ಮ ತಮ್ಮ ಮನೆಗಳಲ್ಲಿ ಯೋಗಾಸನದ ವಿವಿಧ ಭಂಗಿಗಳನ್ನು ಮಾಡುವ ಜೊತೆಗೆ ಅವುಗಳ ಪೋಟೋ ಹಂಚಿಕೊಳ್ಳುವ ಮೂಲಕ ವಿಶ್ವಯೋಗ ದಿನಾಚರಣೆ ಆಚರಿಸಿದರು.
ಹ್ಯಾಪಿ ಲಿವಿಂಗ್ ಲೈಫ್ ಯೋಗ ಕೇಂದ್ರ : ಯೋಗ ನಡಿಗೆ
ನಗರಸಭೆ ವ್ಯಾಪ್ತಿಯ ಜನ್ನಾಪುರ ಹ್ಯಾಪಿ ಲಿವಿಂಗ್ ಲೈಫ್ ಯೋಗ ಕೇಂದ್ರದಿಂದ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಸಾರ್ವಜನಿಕರಿಗೆ ಯೋಗದ ಅರಿವು ಮೂಡಿಸಲು ಯೋಗ ನಡಿಗೆಯನ್ನು ಆಯೋಜಿಸಲಾಗಿತ್ತು.
ಕೇಂದ್ರದ ಯೋಗ ಗುರು ಮಹೇಶ್ ಮಾತನಾಡಿ, ಯೋಗ ಎಂದರೆ ತಿರುಚುವುದು, ಬಗ್ಗಿಸುವುದಲ್ಲ. ಅದು ಅಷ್ಟಾಂಗದ ಒಂದು ಭಾಗ, ಒಂದು ಸಾಧನ, ಒಂದು ಬುದ್ಧಿ ಶಕ್ತಿ. ಆಂತರ್ಯದ ಶಕ್ತಿಗಾಗಿ ಯೋಗ, ಯೋಗದಿಂದ ಐಕ್ಯತೆ, ಇದರಿಂದ ನಮ್ಮಲ್ಲಿ ಸಾಮರಸ್ಯ ಉಂಟಾಗಿ ಉತ್ತಮ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಹ್ಯಾಪಿ ಲಿವಿಂಗ್ ಲೈಫ್ ಯೋಗ ಕೇಂದ್ರದಿಂದ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಸಾರ್ವಜನಿಕರಿಗೆ ಯೋಗದ ಅರಿವು ಮೂಡಿಸಲು ಯೋಗ ನಡಿಗೆಯನ್ನು ಆಯೋಜಿಸಲಾಗಿತ್ತು. ಪ್ರಸ್ತುತ ದೇಶದಲ್ಲಿ ಒಂದು ದೊಡ್ಡ ಸಮಸ್ಯೆಯನ್ನು ನಾವುಗಳು ಎದುರಿಸುತ್ತಿದ್ದೇವೆ. ಪ್ರತಿಯೊಂದು ಕುಟುಂಬದಲ್ಲಿ ಮಾನಸಿಕ ಅಸಮತೋಲನದಿಂದ ನರಳುತ್ತಿದ್ದಾರೆ. ಪ್ರತಿ ೪೫ ನಿಮಿಷಕ್ಕೆ ೧೫ ವರ್ಷದೊಳಗಿನ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಮೂಲಭೂತವಾಗಿ ನಾವು ಹಲವಾರು ತಪ್ಪುಗಳನ್ನು ಮಾಡುತ್ತಿದ್ದೇವೆ. ಆತ್ಮಹತ್ಯೆಗೆ ಸಾಮಾಜಿಕ ಸನ್ನಿವೇಶ ಇರಬಹುದು, ಕುಟುಂಬದ ಒತ್ತಡದ ವಾತಾವರಣ ಮತ್ತು ಆಹಾರ ಕ್ರಮ ಸೇರಿದಂತೆ ಇನ್ನಿತರ ಕಾರಣಗಳು ಇರಬಹುದು ಎಂದರು.
ಪ್ರಸ್ತುತ ಯೋಗ ಪ್ರತಿಯೊಬ್ಬರಿಗೂ ಅಗತ್ಯವಾಗಿದ್ದು, ಪ್ರತಿದಿನ ಯೋಗಾಭ್ಯಾಸಕ್ಕೆ ಕನಿಷ್ಠ ೩೦ ನಿಮಿಷ ಸಮಯ ಮೀಸಲಿಡಬೇಕು. ಆರೋಗ್ಯಕ್ಕಾಗಿ, ಶಾಂತಿ-ನೆಮ್ಮದಿಗಾಗಿ ಯೋಗವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.
ನಗರಸಭೆ ಸದಸ್ಯೆ ಅನುಪಮ ಚನ್ನೇಶ್, ದಾಕ್ಷಾಯಿಣಿ ಮಹೇಶ್ ನಾಗಮಣಿ, ಲಕ್ಷ್ಮಿ, ಪುಷ್ಪ, ಲಕ್ಷ್ಮಿದೇವಿ, ಮಂಜುಳ, ಶೈಲ, ಆರತಿ, ಅಶ್ವಿನಿ, ವಾಣಿ, ಡಾ. ಶಿಲ್ಪ, ಮಾಲಾ, ರಶ್ಮಿ, ವಿದ್ಯಾ ಮತ್ತು ಸ್ಪೂರ್ತಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಚುಂಚಾದ್ರಿ ಮಹಿಳಾ ವೇದಿಕೆ : ಮಕ್ಕಳಲ್ಲಿ ಜ್ಞಾನ, ಓದುವ ಆಸಕ್ತಿ
ನಗರದ ಚುಂಚಾದ್ರಿ ಮಹಿಳಾ ವೇದಿಕೆಯಿಂದ ವಿಶ್ವ ಯೋಗ ದಿನ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು. ಯೋಗ ಶಿಕ್ಷಕ ಮಂಜುನಾಥ್ರಾವ್ ಮಕ್ಕಳಿಗೆ ಯೋಗಭ್ಯಾಸ ನಡೆಸಿಕೊಟ್ಟರು. ಶಾಲೆಯ ಮುಖ್ಯೋಪಾಧ್ಯಾಯ ಪರಶುರಾಮರಾವ್ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವಿಶ್ವಸಂಸ್ಥೆಯಿಂದ ಯೋಗ ದಿನಾಚರಣೆ ಆಚರಿಸಲು ಎಲ್ಲಾ ರಾಷ್ಟ್ರಗಳು ಅಂಗೀಕರಿಸಿವೆ. ಯೋಗ ಮಕ್ಕಳಿಗೆ ಅತ್ಯುತ್ತಮವಾದದ್ದು, ಯೋಗದಿಂದ ಜ್ಞಾನ ಮತ್ತು ಓದುವ ಆಸಕ್ತಿ ಮೂಡುತ್ತದೆ ಎಂದರು.
ಚುಂಚಾದ್ರಿ ಮಹಿಳಾ ವೇದಿಕೆ ಸಾಹಿತ್ಯ, ಆರೋಗ್ಯ, ಯೋಗ ಸೇರಿದಂತೆ ಹಲವಾರು ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಭದ್ರಾವತಿ ನಗರದ ಚುಂಚಾದ್ರಿ ಮಹಿಳಾ ವೇದಿಕೆಯಿಂದ ವಿಶ್ವ ಯೋಗ ದಿನ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಯೋಗ ಋಷಿಮುನಿಗಳ ಕಾಲದಿಂದಲೂ ಅಸ್ತಿತ್ವದಲ್ಲಿದೆ. ಆಧ್ಯಾತ್ಮಿಕ, ಭೌತಿಕ ಹಾಗು ಮಾನಸಿಕ ಚಿಂತನೆಗೆ ಯೋಗ ಮುಖ್ಯವಾದದ್ದಾಗಿದೆ. ಯೋಗ ದೇಹದ ಮಾನಸಿಕ ಒತ್ತಡ ಕಡಿಮೆ ಮಾಡುವ ಜೊತೆಗೆ ದೇಹದ ಸೌಂದರ್ಯಕ್ಕೂ ಸಹಕಾರಿಯಾಗಿದೆ. ಸರ್ಕಾರಿ ಶಾಲೆ ಮಕ್ಕಳಲ್ಲಿ ಯೋಗದ ಅರಿವು ಮೂಡಿಸುವ ಕಾರ್ಯಕ್ರಮ ವೇದಿಕೆ ಆಯೋಜಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಪರಶುರಾಮರಾವ್ ಮಾತನಾಡಿ, ಯೋಗದಲ್ಲಿ ಎಂಟು ಆಯಾಮಗಳಿವೆ. ಧ್ಯಾನ, ಆಸನ ಪ್ರಮುಖವಾಗಿದ್ದು, ಯೋಗಾಭ್ಯಾಸದಲ್ಲಿ ತೊಡಗುವುದರಿಂದ ಮಕ್ಕಳಲ್ಲಿ ಶಿಸ್ತು, ಸಂಯಮ ಮೂಡುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ಯೋಗ ಅಭ್ಯಾಸ ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
ವೇದಿಕೆ ಪದಾಧಿಕಾರಿಗಳಾದ ಉಪಾಧ್ಯಕ್ಷೆ ಪುಷ್ಪ ಕೇಶವ, ಕಾರ್ಯದರ್ಶಿ ಪ್ರತಿಭಾ, ಸಹಕಾಯದರ್ಶಿ ಶೀಲಾರವಿ, ಖಜಾಂಚಿ ಭಾರತಿ ಕುಮಾರ್, ಸಂಘಟನಾ ಕಾರ್ಯದರ್ಶಿ ಪ್ರೇಮ, ಮಂಜು, ಕುಸುಮ ಹಾಗು ವೇದಿಕೆ ಸದಸ್ಯರು ಭಾಗವಹಿಸಿದ್ದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದೇವರಾಜ್ ಸ್ವಾಗತಿಸಿ, ಶಿಕ್ಷಕಿ ವೀಣಾ ನಿರೂಪಿಸಿ, ಸುಮ ವಂದಿಸಿದರು.