ಭದ್ರಾವತಿ ನಗರದ ಭಾವಸಾರ ಯುವಕ ಮಂಡಳಿ ವತಿಯಿಂದ ೨ನೇ ವರ್ಷದ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಆ.೩೧ರ ಭಾನುವಾರ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ.
ಭದ್ರಾವತಿ: ನಗರದ ಭಾವಸಾರ ಯುವಕ ಮಂಡಳಿ ವತಿಯಿಂದ ೨ನೇ ವರ್ಷದ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಆ.೩೧ರ ಭಾನುವಾರ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ.
ಭೂತಗುಡಿಯ ಶ್ರೀ ಕೃಷ್ಣ ರುಕ್ಮಿಣಿ ದೇವಸ್ಥಾನದಲ್ಲಿ ಸುಮಾರು ೫ ಅಡಿ ಎತ್ತರದ ಆಕರ್ಷಕವಾದ ಗೋಕುಲ ಕೃಷ್ಣ ಗಣಪತಿ ಪ್ರತಿಷ್ಠಾಪಿಸಲಾಗಿದೆ. ಯುವಕ ಮಂಡಳಿ ಕಳೆದ ಬಾರಿ ಮೊದಲನೇ ವರ್ಷದ ವಿನಾಯಕ ಮಹೋತ್ಸವ ಅದ್ದೂರಿಯಾಗಿ ಆಚರಿಸಿದ್ದು, ಈ ಬಾರಿ ಸಹ ಅದ್ದೂರಿ ಆಚರಣೆ ನಡೆಯುತ್ತಿದ್ದು, ವಿಸರ್ಜನೆಗೂ ಮೊದಲು ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಅನ್ನಸಂತರ್ಪಣೆ ನಂತರ ಕಲಾ ತಂಡಗಳೊಂದಿಗೆ ರಾಜಬೀದಿ ಉತ್ಸವ ನಡೆಯಲಿದೆ. ಸಂಜೆ ಭದ್ರಾ ನದಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ. ಭಕ್ತದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ.