ಮಂಗಳವಾರ, ಅಕ್ಟೋಬರ್ 14, 2025

ನ್ಯಾಯಮೂರ್ತಿ ಮೇಲೆ ಶೂ ಎಸೆದ ಪ್ರಕರಣ : ಡಿಎಸ್‌ಎಸ್ ಪ್ರತಿಭಟನೆ

ತಪ್ಪಿತಸ್ಥ ವಕೀಲನಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ 

 ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್ ಗವಾಯಿರವರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಮತ್ತು ಕೃತ್ಯವೆಸಗಿದ ವಕೀಲನ ವಿರುದ್ಧ ಕಠಿಣ ಕ್ರಮಕ್ಕಾಗಿ ಆಗ್ರಹಿಸಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.  
    ಭದ್ರಾವತಿ : ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್ ಗವಾಯಿರವರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಮತ್ತು ಕೃತ್ಯವೆಸಗಿದ ವಕೀಲನ ವಿರುದ್ಧ ಕಠಿಣ ಕ್ರಮಕ್ಕಾಗಿ ಆಗ್ರಹಿಸಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.  
    ಪ್ರಮುಖರು ಮಾತನಾಡಿ, ದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್ ಗವಾಯಿರವರ ಮೇಲೆ ಶೂ ಎಸೆದು ಅಪಮಾನ ಮಾಡಿರುವ ವಕೀಲನ ಕೃತ್ಯ ಸಮಿತಿ ಉಗ್ರವಾಗಿ ಖಂಡಿಸುತ್ತದೆ. ಈ ಕೃತ್ಯದಿಂದ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸುವಂತಾಗಿದೆ ಎಂದರು. 
    ಇದು ಸಂವಿಧಾನದ ಆಶಯಗಳಿಗೆ ಎಸೆದ ಕೃತ್ಯವಾಗಿದ್ದು, ಶೂ ಎಸೆದ ವಕೀಲನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಅಲ್ಲದೆ ಆತ ಸನಾತನ ಧರ್ಮದ ಬಗ್ಗೆ ಜೈಕಾರ ಕೂಗಿರುವುದನ್ನು ನೋಡಿದರೆ ನ್ಯಾಯಾಂಗ ವ್ಯವಸ್ಥೆಯನ್ನು ಯಾವುದೋ ಒಂದು ಧರ್ಮಕ್ಕೆ ಬಳಸಿಕೊಳ್ಳುವ ಹುನ್ನಾರ ಅಡಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. 
    ದೇಶದ ಪ್ರತಿಯೊಬ್ಬರು ಇಂತಹ ಕೃತ್ಯ ಧರ್ಮಬೇಧ, ಪಕ್ಷಬೇಧ ಮರೆತು ಖಂಡಿಸಬೇಕಾಗಿದೆ. ಕೃತ್ಯವೆಸಗಿರುವ ವಕೀಲನಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ ಮೂಲಕ ಭಾರತದ ಸಂವಿಧಾನದ ಅಡಿಯಲ್ಲಿ ನ್ಯಾಯಾಂಗ ವ್ಯವಸ್ಥೆಗಳು ನಿರ್ಭೀತಿಯಿಂದ ನಿರ್ವಹಿಸುವೆಂತೆ ಮಾಡಬೇಕಾದ ಜವಾಬ್ದಾರಿ ಭಾರತದ ಪ್ರಜೆಗಳಾದ ನಮ್ಮೆಲ್ಲರ ಹೊಣೆಯಾಗಿದೆ ಎಂದರು.  ಈ ಹಿನ್ನಲೆಯಲ್ಲಿ ರಾಷ್ಟ್ರಪತಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ರಾಜ್ಯ ಕಾರ್ಯಕಾರಿ ಸಮಿತಿ ಶಿವಬಸಪ್ಪ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ,  ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣಪ್ಪ, ಆರ್. ತಮ್ಮಯ್ಯ, ತಾಲೂಕು ಸಂಚಾಲಕ ಎಸ್. ನಾಗರಾಜ್, ಖಜಾಂಚಿ ಜೆ. ವೆಂಕಟೇಶ್, ಬಿ. ಜಗದೀಶ್, ಮಧುಸೂಧನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

೧೩ನೇ ವರ್ಷದ ಓಣಂ ಹಬ್ಬದ ಅಂಗವಾಗಿ ವಿವಿಧ ಸ್ಪರ್ಧೆಗಳು

ಭದ್ರಾವತಿಯಲ್ಲಿ ಕೇರಳ ಸಮಾಜಂ ಮಹಿಳಾ ವಿಭಾಗ ಹಾಗೂ ಕೇರಳ ಸಮಾಜಂ ಯೂತ್ ವಿಂಗ್ ಸಹಯೋಗದಲ್ಲಿ ಅ.೧೯ರ ಭಾನುವಾರ ಆಯೋಜಿಸಲಾಗಿರುವ ಕೇರಳ ಸಮಾಜದ ೧೩ನೇ ವರ್ಷದ ಓಣಂ  ಹಬ್ಬದ ಅಂಗವಾಗಿ ಕುಟುಂಬ ಸದಸ್ಯರುಗಳಿಗೆ ಕಲಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಾದ ಕೇರಳದ ಪ್ರಸಿದ್ಧ ಹೂವಿನ ರಂಗೋಲಿ ಸ್ಪರ್ಧೆ ಹಾಗೂ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. 
    ಭದ್ರಾವತಿ:  ಕೇರಳ ಸಮಾಜಂ ಮಹಿಳಾ ವಿಭಾಗ ಹಾಗೂ ಕೇರಳ ಸಮಾಜಂ ಯೂತ್ ವಿಂಗ್ ಸಹಯೋಗದಲ್ಲಿ ಅ.೧೯ರ ಭಾನುವಾರ ಆಯೋಜಿಸಲಾಗಿರುವ ಕೇರಳ ಸಮಾಜದ ೧೩ನೇ ವರ್ಷದ ಓಣಂ  ಹಬ್ಬದ ಅಂಗವಾಗಿ ಕುಟುಂಬ ಸದಸ್ಯರುಗಳಿಗೆ ಕಲಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಾದ ಕೇರಳದ ಪ್ರಸಿದ್ಧ ಹೂವಿನ ರಂಗೋಲಿ ಸ್ಪರ್ಧೆ ಹಾಗೂ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. 
     ಸಮಾಜದ ಅಧ್ಯಕ್ಷ  ಗಂಗಾಧರ್‌ರವರು ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆ ಹಾಗೂ ವಿವಿಧ ಕ್ರೀಡೆಗಳನ್ನುದೀಪ ಬೆಳಗಿಸಿ  ಉದ್ಘಾಟಿಸಿದರು. ಸಮಾಜದ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್,  ಮಹಿಳಾ ವಿಭಾಗದ ಅಧ್ಯಕ್ಷೆ ಶೋಭಾ ಬಾಲಚಂದ್ರನ್, ಯೂತ್ ವಿಂಗ್  ಅಧ್ಯಕ್ಷ ಪ್ರಸನ್ನ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅ.೧೦ರ ಭಾನುವಾರ ಆಯೋಜಿಸಲಾಗಿರುವ ಕೇರಳ ಸಮಾಜದ ೧೩ನೇ ವರ್ಷದ ಓಣಂ ಹಬ್ಬದ ಸಮಾರಂಭದಲ್ಲಿ ವಿತರಿಸಲಾಗುವುದು. 

ಪ್ರತ್ಯೇಕ ಕಾನೂನು ರಚಿಸಿ ಮಾಹಿತಿ ಹಕ್ಕು ಬಳಕೆದಾರರಿಗೆ ರಕ್ಷಣೆ ನೀಡಿ

ರಾಜ್ಯದಲ್ಲಿ ಪ್ರತಿನಿತ್ಯ ಮಾಹಿತಿ ಹಕ್ಕು ಬಳಕೆದಾರರ ಮೇಲೆ ಕೊಲೆ ಮತ್ತು ದಬ್ಬಾಳಿಕೆ ನಡೆಯುತ್ತಿದ್ದು, ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬಳಕೆದಾರರಿಗೆ ಪ್ರತ್ಯೇಕ ಕಾನೂನು ರಚಿಸುವ   ಮೂಲಕ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಬಳಕೆದಾರರ ಹಿತರಕ್ಷಣಾ ವೇದಿಕೆಯಿಂದ ಭದ್ರಾವತಿಯಲ್ಲಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್  ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ರಾಜ್ಯದಲ್ಲಿ ಪ್ರತಿನಿತ್ಯ ಮಾಹಿತಿ ಹಕ್ಕು ಬಳಕೆದಾರರ ಮೇಲೆ ಕೊಲೆ ಮತ್ತು ದಬ್ಬಾಳಿಕೆ ನಡೆಯುತ್ತಿದ್ದು, ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬಳಕೆದಾರರಿಗೆ ಪ್ರತ್ಯೇಕ ಕಾನೂನು ರಚಿಸುವ   ಮೂಲಕ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಬಳಕೆದಾರರ ಹಿತರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್  ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
     ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಎಲ್ಲಾ ಮಾಹಿತಿ ತಿಳಿಯುವ ಹಕ್ಕು ಪ್ರಜೆಗಳಿಗಿದ್ದು, ಈ ಹಿನ್ನೆಲೆಯಲ್ಲಿ   ಅ.೧೨, ೨೦೦೫ ರಂದು "ಮಾಹಿತಿ ಹಕ್ಕು ಕಾಯ್ದೆ"(ಆರ್.ಟಿ.ಐ) ಯನ್ನು ಜಾರಿಗೆ ತರಲಾಗಿದೆ.  ಪ್ರಜಾಪ್ರಭುತ್ವದಲ್ಲಿ ಪ್ರಶ್ನೆ ಮಾಡಲು ಈ ದೇಶದ ಪ್ರತಿಯೊಬ್ಬರಿಗೂ ಅಧಿಕಾರ ಇದೆ. ಆದರೆ ಎಲ್ಲಾದಕ್ಕೂ ಸಾಕ್ಷಿ, ಆಧಾರಗಳು ಬೇಕು. ಇದಕ್ಕೆ ಪೂರಕವಾಗಿ ಮಾಹಿತಿ ಪಡೆಯಲು ಪ್ರಜೆಗಳಿಗೆ ಕಲ್ಪಿಸಿ ಕೊಟ್ಟಿರುವ ಏಕೈಕ ವ್ಯವಸ್ಥೆ ``ಮಾಹಿತಿ ಹಕ್ಕು ಕಾಯ್ದೆ''ಯಾಗಿದೆ. ಪ್ರಸ್ತುತ ಭ್ರಷ್ಟ ಆಡಳಿತ ವ್ಯವಸ್ಥೆಯಿಂದಾಗಿ `ಮಾಹಿತಿ ಹಕ್ಕು ಕಾಯ್ದೆ ಬಳಕೆದಾರರಿಗೆ ರಕ್ಷಣೆ ಇಲ್ಲದಂತಾಗಿರುವುದು ವಿಪರ್ಯಾಸದ  ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.
     ದೇಶದಲ್ಲಿ ಹಾಗು ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು, ವಕೀಲರ  ರಕ್ಷಣೆಗೆ ಹಾಗು ಪ್ರಾಣಿಗಳ ರಕ್ಷಣೆಗೂ ಪ್ರತ್ಯೇಕ ಕಾನೂನು ರಚಿಸಲಾಗಿದೆ. ಇದೆ ರೀತಿ ಮಾಹಿತಿ ಹಕ್ಕು ಬಳಕೆದಾರರ ಹಿತರಕ್ಷಣೆಗೂ ಪ್ರತ್ಯೇಕ ಕಾನೂನು ಜಾರಿಗೆ ತರುವಂತೆ ಆಗ್ರಹಿಸಲಾಯಿತು.
     ಪ್ರತಿಭಟನೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತೀರ್ಥೇಶ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ  ಬಿ. ಎನ್ ರಾಜು, ಕರ್ನಾಟಕ ಮಾಹಿತಿ ಹಕ್ಕು ವೇದಿಕೆಯ ಬಸವರಾಜ್, ವಕೀಲರಾದ ಭರತ್ ಬಿ.ಎಸ್. ಅಬ್ದುಲ್ ಖದೀರ್, ಡಿಎಸ್‌ಎಸ್ ಮುಖಂಡರಾದ ದಾಸರ ಕಲ್ಲಳ್ಳಿ ನಾಗರಾಜ್, ಇಮ್ರಾನ್, ಮಂಜುನಾಥ್, ವಿನೋದ್ ಇನ್ನಿತರರು ಪಾಲ್ಗೊಂಡಿದ್ದರು. 

ಸೋಮವಾರ, ಅಕ್ಟೋಬರ್ 13, 2025

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾಗಿ ಆಯ್ಕೆ

ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಭದ್ರಾವತಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್  ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಅಭಿನಂದಿಸಿದ್ದಾರೆ. 
    ಭದ್ರಾವತಿ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಹಾಗು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್‌ರವರು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 
    ಪ್ರತಿ ೫ ವರ್ಷಕ್ಕೆ ನಡೆಯುವ ಚುನಾವಣೆಯಲ್ಲಿ ಈ ಬಾರಿ ಕ್ಷೇತ್ರದಿಂದ ಬಿ.ಕೆ ಶಿವಕುಮಾರ್ ಸ್ಪರ್ಧಿಸಿದ್ದರು. ಹಾಲಿ ನಿರ್ದೇಶಕರಾಗಿದ್ದ ನಗರದ ಸಂಜೀವಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 
    ಈ ಹಿಂದಿನ ಅವಧಿಯಲ್ಲಿ ಕ್ಷೇತ್ರದಿಂದ ಹಿರಿಯ ಸಹಕಾರ ಧುರೀಣರಾದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಎಲ್ ಷಡಾಕ್ಷರಿ, ಜಯರಾಂ ಗೊಂದಿ, ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ದುಗ್ಗೇಶ್ ತೇಲ್ಕರ್ ಮತ್ತು ಯುವ ಮುಖಂಡ ಸಂಜೀವಕುಮಾರ್ ಸೇರಿದಂತೆ ಒಟ್ಟು ೪ ಜನರು ಆಯ್ಕೆಯಾಗಿದ್ದರು. ಈ ಪೈಕಿ ದುಗ್ಗೇಶ್ ತೇಲ್ಕರ್ ಮತ್ತು ಎಚ್.ಎಲ್ ಷಡಾಕ್ಷರಿಯವರು ಅಧ್ಯಕ್ಷರಾಗಿ ಹಾಗು ಸಂಜೀವಕುಮಾರ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 
    ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಈ ಬಾರಿ ಶಿವಮೊಗ್ಗ ಮತ್ತು ಸಾಗರ ಎರಡು ವಿಭಾಗಗಳನ್ನಾಗಿ ವಿಂಗಡಿಸಿ ಚುನಾವಣೆ ನಡೆಸಲಾಗಿತ್ತು. ಒಟ್ಟು ೧೫ ನಿರ್ದೇಶಕರ ಸ್ಥಾನಗಳನ್ನು ಒಳಗೊಂಡಿದೆ. 
    ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಿ.ಕೆ ಶಿವಕುಮಾರ್ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್  ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಅಭಿನಂದಿಸಿದ್ದಾರೆ. 
    ಬಿ.ಕೆ ಶಿವಕುಮಾರ್‌ರವರು ಈ ವರ್ಷ ಆರಂಭದಲ್ಲಿ ಜನವರಿ ತಿಂಗಳಿನಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಬೀಗರಾಗಿದ್ದು, ಹಂತ ಹಂತವಾಗಿ ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. 

ಭಾನುವಾರ, ಅಕ್ಟೋಬರ್ 12, 2025

ಶತಮಾನ ಪೂರೈಸಿರುವ ಶಿಥಿಲಗೊಂಡಿರುವ ತಮಿಳು ಶಾಲೆ ಕಟ್ಟಡ

ಸೋರುತ್ತಿದೆ ಮಳೆ ನೀರು, ಮೇಲ್ಭಾಗ ಕುಸಿದು ಬೀಳುವ ಆತಂಕ

ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ, ನ್ಯೂಟೌನ್, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಪಕ್ಕದಲ್ಲಿರುವ ಸರ್ಕಾರಿ ತಮಿಳು ಹಿರಿಯ ಪ್ರಾಥಮಿಕ ಶಾಲೆ.
    * ಅನಂತಕುಮಾರ್ 
    ಭದ್ರಾವತಿ : ನಗರದ ಉಂಬ್ಳೆಬೈಲು ರಸ್ತೆ, ನ್ಯೂಟೌನ್, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಪಕ್ಕದಲ್ಲಿರುವ ಸರ್ಕಾರಿ ತಮಿಳು ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಗೊಂಡಿದ್ದು, ಮಳೆ ನೀರು ಸೋರುತ್ತಿದೆ. ಕಟ್ಟಡದ ಮೇಲ್ಭಾಗ ಕುಸಿದು ಬೀಳುವ ಆತಂಕ ಎದುರಾಗಿದೆ. 
    1923ರಲ್ಲಿ ನಿರ್ಮಾಣಗೊಂಡಿರುವ ಕಟ್ಟಡ ಶತಮಾನ ಪೂರೈಸಿದ್ದು, ಸಂಪೂರ್ಣವಾಗಿ ಶಿಥಿಲಗೊಂಡಿದೆ. ಆರಂಭದಲ್ಲಿ 1946ರವರೆಗೆ ಈ ಕಟ್ಟಡವನ್ನು ಆಸ್ಪತ್ರೆಯನ್ನಾಗಿ ಬಳಸಿಕೊಳ್ಳಲಾಗಿತ್ತು. ನಂತರ ಸರ್ಕಾರಿ ತಮಿಳು ಶಾಲೆಯನ್ನಾಗಿ ಪರಿವರ್ತಿಸಲಾಯಿತು. ಸುಮಾರು 79 ವರ್ಷಗಳಿಂದ ಸರ್ಕಾರಿ ಶಾಲೆ ಅಸ್ತಿತ್ವದಲ್ಲಿದ್ದು, ಪ್ರಸ್ತುತ ಈ ಶಾಲೆ 1 ರಿಂದ 8ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿದೆ. ಪ್ರಸಕ್ತ ಸಾಲಿನಿಂದ ಈ ಕಟ್ಟಡಕ್ಕೆ ಅಂಗನವಾಡಿ ಸಹ ಹಸ್ತಾಂತರಿಸಲಾಗಿದೆ. ತಮಿಳು ಮಾಧ್ಯಮ ಮತ್ತು ಆಂಗ್ಲ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. 
    ಶತಮಾನ ಪೂರೈಸಿರುವ ಈ ಕಟ್ಟಡ ಸಂರಕ್ಷಿಸಿಕೊಳ್ಳುವ ಅಗತ್ಯವಿದೆ. ಶಾಲೆಗೆ ಲಭ್ಯವಾಗುವ ಅಲ್ಪಸ್ವಲ್ಪ ಅನುದಾನದಲ್ಲಿ ಸಣ್ಣ ಪ್ರಮಾಣದ ದುರಸ್ತಿ ಕಾರ್ಯಗಳನ್ನು ಕೈಕೊಳ್ಳುವ ಮೂಲಕ ನಿರ್ವಹಣೆ ಮಾಡಿಕೊಂಡು ಹೋಗಲಾಗುತ್ತಿದೆ. ಕಟ್ಟಡದ ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಅನುದಾನ ಲಭ್ಯವಿದೆ. ಆದರೆ ಅನುದಾನ ನೀಡಲು ಯಾರು ಸಹ ಮುಂದೆ ಬರುತ್ತಿಲ್ಲ. ಅದರಲ್ಲೂ ತಮಿಳು ಶಾಲೆಯಾಗಿರುವುದರಿಂದ ನಿರ್ಲಕ್ಷö್ಯ ಹೆಚ್ಚಾಗಿದೆ. 


    ಕಳೆದ ಸುಮಾರು 15-20 ವರ್ಷಗಳ ಹಿಂದೆ ಕಟ್ಟಡ ಮೇಲ್ಭಾಗ ದುರಸ್ತಿ ಮಾಡಲಾಗಿದ್ದು, ಆದರೆ ಸರಿಯಾಗಿ ದುರಸ್ತಿ ಕೈಗೊಳ್ಳದ ಕಾರಣ ಪುನಃ ಶಿಥಿಲಗೊಂಡು ಮಳೆ ನೀರು ಸೋರುತ್ತಿದೆ. ಕಟ್ಟಡ ದುರಸ್ತಿಗೊಳಿಸುವಂತೆ ಹಲವಾರು ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೆ ಇಲಾಖೆಯಲ್ಲಿ ಕಟ್ಟಡ ದುರಸ್ತಿಗೊಳಿಸುವಂತೆ ಅನುದಾನ ಲಭ್ಯವಿಲ್ಲವೆಂದು ಕೈಚೆಲ್ಲಿ ಕುಳಿತುಕೊಳ್ಳಲಾಗಿದೆ. 
     ಒಂದು ಕಡೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಿದರೆ ಮಾತ್ರ ಹೆಚ್ಚಿನ ಅನುದಾನ ಲಭ್ಯವಾಗುತ್ತದೆ. ಮತ್ತೊಂದು ಕಡೆ ಶಾಲಾ ಕಟ್ಟಡ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಈ ಶಾಲೆಗೆ ಸೇರಿಸಲು ಪೋಷಕರು ಮುಂದೆ ಬರುತ್ತಿಲ್ಲ. ಪ್ರಸ್ತುತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರು ಸಹ ಬಡವರಾಗಿದ್ದು, ಆರ್ಥಿಕ ನೆರವು ನಿರೀಕ್ಷಿಸುವುದು ಸಹ ಕಷ್ಟವಾಗಿದೆ. ಇದರಿಂದಾಗಿ ಶಿಕ್ಷಕರು ಸಹ ಅತಂತ್ರ ಸ್ಥಿತಿಯಲ್ಲಿದ್ದಾರೆ. 
     ಶಾಲಾಭಿವೃದ್ಧಿ ಸಮಿತಿ ರಚನೆಯಾಗಿಲ್ಲ : 
      ಶಾಲೆ ಕಟ್ಟಡ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶಾಲಾಭಿವೃದ್ಧಿ ಸಮಿತಿ ಅಗತ್ಯವಾಗಿದೆ. ಆದರೆ ಸಮಿತಿ ರಚನೆ ಅಗತ್ಯವಿರುವಷ್ಟು ವಿದ್ಯಾರ್ಥಿಗಳನ್ನು ಈ ಶಾಲೆ ಹೊಂದಿಲ್ಲ. ಇದರಿಂದಾಗಿ ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಪ್ರಸ್ತುತ ಶಾಲೆಯಲ್ಲಿ 7 ಜನ ವಿದ್ಯಾರ್ಥಿಗಳು ಮಾತ್ರ ಇದ್ದು, ಉಳಿದಂತೆ ಅಂಗನವಾಡಿಯಲ್ಲಿ ಸುಮಾರು 15 ರಿಂದ 20 ಮಕ್ಕಳಿದ್ದಾರೆ. 
 ಶಾಲಾಭಿವೃದ್ಧಿ ಸಮಿತಿ ರಚನೆಯಾದಲ್ಲಿ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ದಾನಿಗಳು ಸಹ ನೆರವಿಗೆ ಧಾವಿಸಲಿದ್ದಾರೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಭವಿಷ್ಯದಲ್ಲಿ ಈ ಶಾಲೆಯಿಂದ ಇನ್ನೂ ಹಲವಾರು ವರ್ಷಗಳ ವರೆಗೆ ಸೇವೆ ಲಭ್ಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಶಾಲೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ. 
 ಇಲಾಖೆಯಲ್ಲಿ ಯಾವುದೇ ಅನುದಾನವಿಲ್ಲ. ಈ ಹಿನ್ನಲೆಯಲ್ಲಿ ಶಾಲೆ ಕಟ್ಟಡ ದುರಸ್ತಿಗೊಳಿಸುವಂತೆ ಜಿಲ್ಲಾ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿದೆ. ಉಳಿದಂತೆ ಸಣ್ಣ ಪ್ರಮಾಣದ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಶಾಲೆ ಕಟ್ಟಡ ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಶಾಲೆಯಲ್ಲಿ ಕೈಗೊಳ್ಳಬೇಕಾಗಿರುವ ಇನ್ನಿತರ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. 
 - ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಭದ್ರಾವತಿ. 


ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ, ನ್ಯೂಟೌನ್, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಪಕ್ಕದಲ್ಲಿರುವ ಸರ್ಕಾರಿ ತಮಿಳು ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಗೊಂಡು ಮಳೆ ನೀರು ಸೋರುತ್ತಿರುವುದು.

ಶನಿವಾರ, ಅಕ್ಟೋಬರ್ 11, 2025

ಭಾರಿ ಗಾತ್ರದ ಮಳೆಯಿಂದ ಭತ್ತದ ಬೆಳೆಗೆ ಹಾನಿ

ಭದ್ರಾವತಿಯಲ್ಲಿ ಪ್ರಗತಿಪರ ರೈತ ಭಂಡಾರಹಳ್ಳಿ ಶ್ರೀಧರ್‌ರವರು ಬೆಳೆದಿರುವ ಭತ್ತದ ಬೆಳೆ ಭಾರಿ ಗಾತ್ರದ ಮಳೆಯಿಂದಾಗಿ ಹಾನಿಗೊಳಗಾಗಿದೆ.  
    ಭದ್ರಾವತಿ : ಕಳೆದ ೨ ದಿನಗಳ ಹಿಂದೆ ಸುರಿದ ಭಾರಿ ಗಾತ್ರದ ಮಳೆಯಿಂದಾಗಿ ಕ್ಷೇತ್ರದಲ್ಲಿ ಭತ್ತದ ಬೆಳೆಗೆ ಹಾನಿಯಾಗಿದ್ದು,  ಪ್ರಗತಿಪರ ರೈತ ಭಂಡಾರಹಳ್ಳಿ ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. 
    ಕ್ಷೇತ್ರದ ಬಹುತೇಕ ವ್ಯಾಪ್ತಿಯಲ್ಲಿ ರೈತರು ಭತ್ತದ ಬೆಳೆದಿದ್ದು, ಭಾರಿ ಗಾತ್ರದ ಮಳೆಯಿಂದಾಗಿ ಹೂವಿನ ಹಂತದಲ್ಲಿರುವ ಭತ್ತದ ಬೆಳೆಗೆ ಹಾನಿಯಾಗಿದೆ. ಮುಂದಿನ ಒಂದೆಡೆರಡು ತಿಂಗಳಲ್ಲಿ ಬೀಜ ಕಟ್ಟುವ ಹಂತಕ್ಕೆ ಬೆಳೆ ತಲುಪಲಿದೆ. ಈ ಹಂತದಲ್ಲಿ ಬೀಜ ಸರಿಯಾಗಿ ಬೆಳವಣಿಗೆಯಾಗದೆ ಇಳುವಳಿ ಕುಸಿತವಾಗಲಿದೆ. ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. 
    ನಾಟಿ ವಿಳಂಬವಾಗಿ ನಡೆದಿರುವ ಬೆಳೆಗಳಿಗೆ ಯಾವುದೇ ಹಾನಿ ಉಂಟಾಗುವುದಿಲ್ಲ. ಸಂಕಷ್ಟಕ್ಕೆ ಒಳಗಾಗುವ ರೈತರ ನೆರವಿಗೆ ಸರ್ಕಾರ ಮುಂದಾಗಬೇಕೆಂದು ಕೋರಿದ್ದಾರೆ.

ಶ್ರೀ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ೨ನೇ ವರ್ಷದ ವಾರ್ಷಿಕೋತ್ಸವ

ಭದ್ರಾವತಿ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದ ಸಮೀಪದಲ್ಲಿರುವ ಶ್ರೀ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ೨ನೇ ವರ್ಷದ ವಾರ್ಷಿಕೋತ್ಸವ ಯಶಸ್ವಿಯಾಗಿ ನಡೆಯಿತು. 
    ಭದ್ರಾವತಿ : ನಗರದ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದ ಸಮೀಪದಲ್ಲಿರುವ ಶ್ರೀ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ೨ನೇ ವರ್ಷದ ವಾರ್ಷಿಕೋತ್ಸವ ಯಶಸ್ವಿಯಾಗಿ ನಡೆಯಿತು. 
    ಕಳೆದ ೨ ವರ್ಷದಿಂದ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೊಸೈಟಿ ಮುಖ್ಯ ಶಾಖೆ ಬೆಳಗಾವಿ, ಚಿಕ್ಕೋಡಿ ಯಕ್ಸಾಂಬದಲ್ಲಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ ಒಟ್ಟು ೨೨೮ಕ್ಕೂ ಹೆಚ್ಚು ಶಾಖೆಗಳನ್ನು ಒಳಗೊಂಡಿದೆ. ಹಲವು ವಿಭಿನ್ನ ಸೇವೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. 
  ಸೊಸೈಟಿ ಉಪಾಧ್ಯಕ್ಷ ಎಸ್. ರಾಜಶೇಖರ ಉಪ್ಪಾರ, ನಿರ್ದೇಶಕರಾದ ಬಸವಂತಪ್ಪ ಹಾಗೂ ಹರೀಶ್‌ಕುಮಾರ್, ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.